ಬ್ರೇಕಿಂಗ್ ನ್ಯೂಸ್
01-09-25 10:01 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.1 : ಎಸ್ಐಟಿ ತನಿಖೆ, ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಅಪಚಾರ ಆಗಿದೆಯೆಂದು ಧರ್ಮಸ್ಥಳ ಚಲೋ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಮಾವೇಶ ಬೆನ್ನಲ್ಲೇ 12 ವರ್ಷಗಳ ಹಿಂದೆ ಕೊಲೆಯಾದ ಸೌಜನ್ಯಾ ಮನೆಗೆ ಭೇಟಿ ನೀಡಿ, ತಾಯಿ ಕುಸುಮಾವತಿ ಅವರಿಗೆ ಸಾಂತ್ವನ ಹೇಳಿದರು. ಅಲ್ಲದೆ, ಸೌಜನ್ಯಾ ಕೊಲೆ ಪ್ರಕರಣದ ತನಿಖೆಯಲ್ಲಿ ನಾವು ನಿಮ್ಮ ಜೊತೆಗಿದ್ದೇವೆ ಎಂದು ಹೇಳಿದ್ದಾರೆ.
ಬಿಜೆಪಿ ಸಮಾವೇಶ ಮುಗಿಯುತ್ತಿದ್ದಂತೆ ಸಂಜೆ 5 ಗಂಟೆಗೆ ಪಾಂಗಾಳದ ಸೌಜನ್ಯಾ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿ, ಬಿಜೆಪಿ ನಾಯಕರ ಜೊತೆ ಮಾತನಾಡುತ್ತ ಕಣ್ಣೀರು ಹಾಕಿದ್ದಾರೆ. ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ಅತ್ಯಾಚಾರಿಗಳಿಗೆ ಶಿಕ್ಷೆ ಆಗಲೇಬೇಕೆಂದು ಒತ್ತಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಸೌಜನ್ಯಾ ಹೋರಾಟದಲ್ಲಿ ಜೊತೆಗಿರುವುದಾಗಿ ವಿಜಯೇಂದ್ರ ಭರವಸೆ ನೀಡಿದ್ದಾರೆ.
ಇದಕ್ಕು ಮುನ್ನ ಧರ್ಮಸ್ಥಳ ವಿರುದ್ಧದ ಪಿತೂರಿ ಮತ್ತು ಅಪಪ್ರಚಾರ ಅಭಿಯಾನವನ್ನು ಖಂಡಿಸಿ ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಬಿಜೆಪಿ ಶಾಸಕರು ಮತ್ತು ಹಲವು ನಾಯಕರು 'ಧರ್ಮಸ್ಥಳ ಚಲೋ' ಪ್ರತಿಭಟನೆ ನಡೆಸಿದ್ದಾರೆ. ಅದಕ್ಕು ಮೊದಲು, ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರಲ್ಲದೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಜಾತಿ, ಧರ್ಮ ಲೆಕ್ಕಿಸದೆ ಎಲ್ಲರೂ ಸಿಬಿಐ ಅಥವಾ ಎನ್ಐಎಯಿಂದ ಸಮಗ್ರ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳ ಪ್ರಸಂಗದಲ್ಲಿ ಇದು ಅತ್ಯಗತ್ಯ. ಇದು ಧರ್ಮಸ್ಥಳದ ಮಂಜುನಾಥನ ಎಲ್ಲಾ ಭಕ್ತರ ಬೇಡಿಕೆಯಾಗಿದೆ ಎಂದು ವಿಜಯೇಂದ್ರ ಇದೇ ವೇಳೆ ಹೇಳಿದರು.
ಧರ್ಮಸ್ಥಳ ಪ್ರಕರಣದ ಹಿಂದೆ 'ಬಹಳ ದೊಡ್ಡ ಪಿತೂರಿ' ನಡೆದಿದೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದ್ದು ಪ್ರಕರಣವನ್ನು NIA ಅಥವಾ CBIಗೆ ವಹಿಸಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರವು ಯಾವುದೇ ವಿಳಂಬವಿಲ್ಲದೆ, ಆದಷ್ಟು ಬೇಗ ತನಿಖೆಗೆ ಆದೇಶಿಸುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದರು.
Following the 'Dharmasthala Chalo' protest rally organized by the BJP, Karnataka BJP State President B.Y. Vijayendra visited the home of Soujanya, the young girl who was brutally murdered 12 years ago, and offered condolences to her mother, Kusumavati. He assured the grieving family that the BJP stands with them in their long struggle for justice.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm