ಬ್ರೇಕಿಂಗ್ ನ್ಯೂಸ್
02-09-25 02:17 pm Mangalore Correspondent ಕರಾವಳಿ
ಪುತ್ತೂರು, ಸೆ.2 : ಲೋಕಾಯುಕ್ತ ದಾಳಿ ಬಳಿಕ ನಾಪತ್ತೆಯಾದ ಪುತ್ತೂರು ತಹಸೀಲ್ದಾರ್ ಎಸ್.ಬಿ.ಕೂಡಲಗಿ ಇನ್ನೂ ಪತ್ತೆಯಾಗಿಲ್ಲ. ತಹಸೀಲ್ದಾರ್ ಕೂಡ ಲಂಚದಲ್ಲಿ ಆರೋಪಿ ಎಂದು ಲೋಕಾಯುಕ್ತ ಅಧಿಕಾರಿಗಳು ಎಫ್ಐಆರ್ ನಲ್ಲಿ ಉಲ್ಲೇಖಿಸಿದ್ದರು. ಅದರ ಬೆನ್ನಲ್ಲೇ ಕೂಡಲಗಿ ಯಾರಿಗೂ ಸಿಗದೆ ನಾಪತ್ತೆಯಾಗಿದ್ದಾರೆ.
ಆ.28ರಂದು ಅಕ್ರಮ-ಸಕ್ರಮದ ದರ್ಖಾಸು ಜಮೀನಿಗೆ ನಿರಾಕ್ಷೇಪಣಾ ಪತ್ರ ನೀಡಲು 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪುತ್ತೂರು ತಾಲೂಕು ಆಡಳಿತ ಕಚೇರಿಯ ಕೇಸ್ ವರ್ಕರ್ ಸುನೀಲ್ ಎಂಬವರನ್ನು ಬಂಧಿಸಿದ್ದರು. ತಹಸೀಲ್ದಾರ್ಗೆ ಹಣ ನೀಡಬೇಕಾಗುತ್ತದೆ ಎಂದು ತಿಳಿಸಿದ್ದರಿಂದ ತಹಸೀಲ್ದಾರ್ ಮೇಲೂ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು.
ತಹಸೀಲ್ದಾರ್ ದಾಳಿ ನಡೆದ ದಿನದಿಂದ ಇಲ್ಲಿಯವರೆಗೂ ಕರ್ತವ್ಯಕ್ಕೆ ಹಾಜರಾಗಿಲ್ಲ. ಸದ್ಯಕ್ಕೆ ಅವರ ಕೆಲಸಗಳನ್ನು ಉಪ ತಹಸೀಲ್ದಾರ್ ಮಾಡುತ್ತಿದ್ದು, ಮುಂದೆ ಅವರು ಹಾಜರಾಗದೆ ಇದ್ದಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ತಿಳಿಸಿದ್ದಾರೆ.
ದರ್ಖಾಸು ಜಾಗದ ಬಗ್ಗೆ ವಾರಿಸುದಾರರು ವೀಲು ಬರೆದಿಟ್ಟಿದ್ದು ಅದರ ಪ್ರಕಾರ 65 ಸೆಂಟ್ಸ್ ಜಮೀನಿನ ಹಕ್ಕು ದೂರುದಾರರಿಗೆ ಸೇರಿತ್ತು. 27 ವರ್ಷಗಳ ಹಿಂದೆ ಅಕ್ರಮ ಸಕ್ರಮದಲ್ಲಿ ಮಂಜೂರಾದ ಜಮೀನು ಇದಾಗಿತ್ತು. ಜಾಗವನ್ನು ಪ್ರಸ್ತುತ ಮಾರಾಟ ಮಾಡುವ ಉದ್ದೇಶದಿಂದ ದೂರುದಾರರ ಚಿಕ್ಕಪ್ಪ ತಹಸೀಲ್ದಾರ್ ಕಚೇರಿಯಿಂದ ನಿರಕ್ಷೇಪಣಾ ಪತ್ರ ಕೋರಿ 2024ರ ಡಿಸೆಂಬರ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಎನ್ಒಸಿ ಸಿಗದ ಕಾರಣ ಅದರ ಬಗ್ಗೆ ವಿಚಾರಿಸುವಂತೆ ಚಿಕ್ಕಪ್ಪ ಹೇಳಿದ ಪ್ರಕಾರ ದೂರುದಾರರು ಕಳೆದ ಜೂನ್ 26ರಂದು ಕೇಸ್ ವರ್ಕರ್ ಸುನಿಲ್ ಅವರಲ್ಲಿ ಕೇಳಿದ್ದರು.
ತಹಸೀಲ್ದಾರ್ ಸಹಿಗೆ ಬಾಕಿ ಇದೆ. ಅದಕ್ಕೆ ಸ್ವಲ್ಪ ಹಣ ಖರ್ಚಾಗುತ್ತದೆ. ತಹಸೀಲ್ದಾರರಿಗೆ 10 ಸಾವಿರ ರೂ. ಕೊಡಬೇಕಾಗುತ್ತದೆ. ನನಗೂ ಹಣ ಕೊಡಬೇಕಾಗುತ್ತದೆ ಎಂದು ಹೇಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಆಗಸ್ಟ್ 29ರ ಸಂಜೆ ಕೇಸ್ ವರ್ಕರ್ ಸುನಿಲ್ ದೂರುದಾರರಿಂದ 12 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ. ಈ ವೇಳೆ, ತಹಸೀಲ್ದಾರ್ ಪಾತ್ರದ ಬಗ್ಗೆ ಆರೋಪ ಕೇಳಿಬಂದಿತ್ತು. ಆದರೆ ಕೇಸು ದಾಖಲಾಗುತ್ತಲೇ ತಹಸೀಲ್ದಾರ್ ಕೂಡಲಗಿ ಪುತ್ತೂರು ಬಿಟ್ಟು ಹೋಗಿದ್ದಾರೆ.
The Puttur Tahsildar, S.B. Koodalagi, has gone missing following a Lokayukta raid at the taluk office, where officials uncovered a bribery case involving land documents. Despite being served a notice to appear for questioning, the Tahsildar has neither reported to duty nor responded to the summons.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm