ಬ್ರೇಕಿಂಗ್ ನ್ಯೂಸ್
02-09-25 10:26 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.2 : ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ಪಡೆಯುತ್ತಿದ್ದು, ಅಲ್ಲಿ ವಿವಿಧ ಕಾರಣಕ್ಕೆ ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ಧ ಎಂದು ಧರ್ಮಸ್ಥಳ ಗ್ರಾಮಸ್ಥರು ಎನ್ನಲಾದ ಗುಂಪೊಂದು ವಿಶೇಷ ತನಿಖಾ ತಂಡಕ್ಕೆ ಪತ್ರ ಬರೆದಿದೆ. ಆಮೂಲಕ ದೂರುದಾರನ ಜಾಗಕ್ಕೆ ಹೊಸಬರು ಎಂಟ್ರಿಯಾಗಿದ್ದಾರೆ.
ಗ್ರಾಮಸ್ಥರ ಪರವಾಗಿ ಧರ್ಮಸ್ಥಳ ನಿವಾಸಿ ತುಕಾರಾಮ ಗೌಡ ಎಂಬವರು ಎಸ್ಐಟಿಗೆ ಪತ್ರ ಸಲ್ಲಿಸಿದ್ದಾರೆ. ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾವು ಭಯದಲ್ಲಿ ಬದುಕುವಂತಾಗಿದೆ. ಆದರೆ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಎಸ್ಐಟಿ ರಚಿಸಿರುವುದು ನಮ್ಮ ವಿಶ್ವಾಸ ಹೆಚ್ಚುವಂತೆ ಮಾಡಿದೆ. ಮಾಧ್ಯಮಗಳಲ್ಲಿ ತೋರಿಸಿರುವ ವ್ಯಕ್ತಿಯನ್ನು ನಾವು ಗುರುತಿಸಿದ್ದೇವೆ. ಆತ ವಿವಿಧ ಸ್ಥಳಗಳಿಗೆ ಶವಗಳನ್ನು ಸಾಗಿಸಿ, ಹೂತು ಹಾಕಿರುವುದನ್ನು ನೋಡಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ.
ಶವ ಹೂತ ಘಟನೆಗಳು ರಹಸ್ಯವಾಗಿ ನಡೆದಿದ್ದರೂ, ಹಳ್ಳಿ ಜನರಿಗೆ ತಿಳಿಯದ ವಿಷಯವಲ್ಲ. ಅಸ್ಥಿಪಂಜರಗಳನ್ನು ಹೂತಿರುವುದಾಗಿ ಸಾಕ್ಷಿದಾರ ವ್ಯಕ್ತಿ ಮೊದಲಿಗೆ ಹೇಳಿದ್ದ. ಆದರೆ, ನಂತರ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾನೆಂದು ಮಾಧ್ಯಮಗಳು ವರದಿ ಮಾಡಿವೆ. ಆತ ತನ್ನ ಹೇಳಿಕೆಯನ್ನೇಕೆ ಹಿಂತೆಗೆದುಕೊಂಡ ಎಂಬುದು ಗೊಂದಲ ಸೃಷ್ಟಿಸುತ್ತಿದೆ.
ಆ ವ್ಯಕ್ತಿ ಜನಸಂಚಾರ ಕಡಿಮೆ ಇರುವ ಜಾಗಗಳನ್ನು ಆರಿಸಿಕೊಂಡು ಶವಗಳನ್ನು ಹೂಳುತ್ತಿದ್ದ. ಅವನು ಹೇಳಿದ ಸ್ಥಳಗಳಿಗೆ ಹೋಗಿ ಶೋಧ ಕಾರ್ಯ ನಡೆಸಲು ಎಸ್ಐಟಿಗೆ ನಾವು ಸಹಕರಿಸುತ್ತೇವೆ. ಸಮಾಧಿ ಮಾಡಿದ ಸ್ಥಳಗಳನ್ನು ಎಸ್ಐಟಿಗೆ ತೋರಿಸಲು ನಾವು ಸಿದ್ಧರಿದ್ದೇವೆ. ಸತ್ಯ ಮತ್ತು ನ್ಯಾಯಕ್ಕಾಗಿ ಎಸ್ಐಟಿಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧರಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ.
The sensational Dharmasthala case has taken yet another dramatic turn, with a group of locals claiming they are willing to show the locations where bodies of murder victims were allegedly buried. A letter submitted to the Special Investigation Team (SIT) by a resident of Dharmasthala has brought new allegations and witnesses into the spotlight.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm