ಬ್ರೇಕಿಂಗ್ ನ್ಯೂಸ್
02-09-25 10:26 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.2 : ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ಪಡೆಯುತ್ತಿದ್ದು, ಅಲ್ಲಿ ವಿವಿಧ ಕಾರಣಕ್ಕೆ ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ಧ ಎಂದು ಧರ್ಮಸ್ಥಳ ಗ್ರಾಮಸ್ಥರು ಎನ್ನಲಾದ ಗುಂಪೊಂದು ವಿಶೇಷ ತನಿಖಾ ತಂಡಕ್ಕೆ ಪತ್ರ ಬರೆದಿದೆ. ಆಮೂಲಕ ದೂರುದಾರನ ಜಾಗಕ್ಕೆ ಹೊಸಬರು ಎಂಟ್ರಿಯಾಗಿದ್ದಾರೆ.
ಗ್ರಾಮಸ್ಥರ ಪರವಾಗಿ ಧರ್ಮಸ್ಥಳ ನಿವಾಸಿ ತುಕಾರಾಮ ಗೌಡ ಎಂಬವರು ಎಸ್ಐಟಿಗೆ ಪತ್ರ ಸಲ್ಲಿಸಿದ್ದಾರೆ. ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾವು ಭಯದಲ್ಲಿ ಬದುಕುವಂತಾಗಿದೆ. ಆದರೆ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಎಸ್ಐಟಿ ರಚಿಸಿರುವುದು ನಮ್ಮ ವಿಶ್ವಾಸ ಹೆಚ್ಚುವಂತೆ ಮಾಡಿದೆ. ಮಾಧ್ಯಮಗಳಲ್ಲಿ ತೋರಿಸಿರುವ ವ್ಯಕ್ತಿಯನ್ನು ನಾವು ಗುರುತಿಸಿದ್ದೇವೆ. ಆತ ವಿವಿಧ ಸ್ಥಳಗಳಿಗೆ ಶವಗಳನ್ನು ಸಾಗಿಸಿ, ಹೂತು ಹಾಕಿರುವುದನ್ನು ನೋಡಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ.
ಶವ ಹೂತ ಘಟನೆಗಳು ರಹಸ್ಯವಾಗಿ ನಡೆದಿದ್ದರೂ, ಹಳ್ಳಿ ಜನರಿಗೆ ತಿಳಿಯದ ವಿಷಯವಲ್ಲ. ಅಸ್ಥಿಪಂಜರಗಳನ್ನು ಹೂತಿರುವುದಾಗಿ ಸಾಕ್ಷಿದಾರ ವ್ಯಕ್ತಿ ಮೊದಲಿಗೆ ಹೇಳಿದ್ದ. ಆದರೆ, ನಂತರ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾನೆಂದು ಮಾಧ್ಯಮಗಳು ವರದಿ ಮಾಡಿವೆ. ಆತ ತನ್ನ ಹೇಳಿಕೆಯನ್ನೇಕೆ ಹಿಂತೆಗೆದುಕೊಂಡ ಎಂಬುದು ಗೊಂದಲ ಸೃಷ್ಟಿಸುತ್ತಿದೆ.
ಆ ವ್ಯಕ್ತಿ ಜನಸಂಚಾರ ಕಡಿಮೆ ಇರುವ ಜಾಗಗಳನ್ನು ಆರಿಸಿಕೊಂಡು ಶವಗಳನ್ನು ಹೂಳುತ್ತಿದ್ದ. ಅವನು ಹೇಳಿದ ಸ್ಥಳಗಳಿಗೆ ಹೋಗಿ ಶೋಧ ಕಾರ್ಯ ನಡೆಸಲು ಎಸ್ಐಟಿಗೆ ನಾವು ಸಹಕರಿಸುತ್ತೇವೆ. ಸಮಾಧಿ ಮಾಡಿದ ಸ್ಥಳಗಳನ್ನು ಎಸ್ಐಟಿಗೆ ತೋರಿಸಲು ನಾವು ಸಿದ್ಧರಿದ್ದೇವೆ. ಸತ್ಯ ಮತ್ತು ನ್ಯಾಯಕ್ಕಾಗಿ ಎಸ್ಐಟಿಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧರಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ.
The sensational Dharmasthala case has taken yet another dramatic turn, with a group of locals claiming they are willing to show the locations where bodies of murder victims were allegedly buried. A letter submitted to the Special Investigation Team (SIT) by a resident of Dharmasthala has brought new allegations and witnesses into the spotlight.
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 03:07 pm
Mangalore Correspondent
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
21-10-25 05:12 pm
Mangalore Correspondent
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm