ಬ್ರೇಕಿಂಗ್ ನ್ಯೂಸ್
02-09-25 10:26 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.2 : ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ಪಡೆಯುತ್ತಿದ್ದು, ಅಲ್ಲಿ ವಿವಿಧ ಕಾರಣಕ್ಕೆ ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ಧ ಎಂದು ಧರ್ಮಸ್ಥಳ ಗ್ರಾಮಸ್ಥರು ಎನ್ನಲಾದ ಗುಂಪೊಂದು ವಿಶೇಷ ತನಿಖಾ ತಂಡಕ್ಕೆ ಪತ್ರ ಬರೆದಿದೆ. ಆಮೂಲಕ ದೂರುದಾರನ ಜಾಗಕ್ಕೆ ಹೊಸಬರು ಎಂಟ್ರಿಯಾಗಿದ್ದಾರೆ.
ಗ್ರಾಮಸ್ಥರ ಪರವಾಗಿ ಧರ್ಮಸ್ಥಳ ನಿವಾಸಿ ತುಕಾರಾಮ ಗೌಡ ಎಂಬವರು ಎಸ್ಐಟಿಗೆ ಪತ್ರ ಸಲ್ಲಿಸಿದ್ದಾರೆ. ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾವು ಭಯದಲ್ಲಿ ಬದುಕುವಂತಾಗಿದೆ. ಆದರೆ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಎಸ್ಐಟಿ ರಚಿಸಿರುವುದು ನಮ್ಮ ವಿಶ್ವಾಸ ಹೆಚ್ಚುವಂತೆ ಮಾಡಿದೆ. ಮಾಧ್ಯಮಗಳಲ್ಲಿ ತೋರಿಸಿರುವ ವ್ಯಕ್ತಿಯನ್ನು ನಾವು ಗುರುತಿಸಿದ್ದೇವೆ. ಆತ ವಿವಿಧ ಸ್ಥಳಗಳಿಗೆ ಶವಗಳನ್ನು ಸಾಗಿಸಿ, ಹೂತು ಹಾಕಿರುವುದನ್ನು ನೋಡಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ.
ಶವ ಹೂತ ಘಟನೆಗಳು ರಹಸ್ಯವಾಗಿ ನಡೆದಿದ್ದರೂ, ಹಳ್ಳಿ ಜನರಿಗೆ ತಿಳಿಯದ ವಿಷಯವಲ್ಲ. ಅಸ್ಥಿಪಂಜರಗಳನ್ನು ಹೂತಿರುವುದಾಗಿ ಸಾಕ್ಷಿದಾರ ವ್ಯಕ್ತಿ ಮೊದಲಿಗೆ ಹೇಳಿದ್ದ. ಆದರೆ, ನಂತರ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾನೆಂದು ಮಾಧ್ಯಮಗಳು ವರದಿ ಮಾಡಿವೆ. ಆತ ತನ್ನ ಹೇಳಿಕೆಯನ್ನೇಕೆ ಹಿಂತೆಗೆದುಕೊಂಡ ಎಂಬುದು ಗೊಂದಲ ಸೃಷ್ಟಿಸುತ್ತಿದೆ.
ಆ ವ್ಯಕ್ತಿ ಜನಸಂಚಾರ ಕಡಿಮೆ ಇರುವ ಜಾಗಗಳನ್ನು ಆರಿಸಿಕೊಂಡು ಶವಗಳನ್ನು ಹೂಳುತ್ತಿದ್ದ. ಅವನು ಹೇಳಿದ ಸ್ಥಳಗಳಿಗೆ ಹೋಗಿ ಶೋಧ ಕಾರ್ಯ ನಡೆಸಲು ಎಸ್ಐಟಿಗೆ ನಾವು ಸಹಕರಿಸುತ್ತೇವೆ. ಸಮಾಧಿ ಮಾಡಿದ ಸ್ಥಳಗಳನ್ನು ಎಸ್ಐಟಿಗೆ ತೋರಿಸಲು ನಾವು ಸಿದ್ಧರಿದ್ದೇವೆ. ಸತ್ಯ ಮತ್ತು ನ್ಯಾಯಕ್ಕಾಗಿ ಎಸ್ಐಟಿಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧರಿದ್ದೇವೆಂದು ಪತ್ರದಲ್ಲಿ ತಿಳಿಸಿದ್ದಾರೆ.
The sensational Dharmasthala case has taken yet another dramatic turn, with a group of locals claiming they are willing to show the locations where bodies of murder victims were allegedly buried. A letter submitted to the Special Investigation Team (SIT) by a resident of Dharmasthala has brought new allegations and witnesses into the spotlight.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am