ಬ್ರೇಕಿಂಗ್ ನ್ಯೂಸ್
03-09-25 11:53 am HK News Desk ಕರಾವಳಿ
ಮಂಗಳೂರು, ಸೆ.3: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ. ವ್ಯಾಸಂಗ ಮಾಡುತ್ತಿದ್ದ ಕಾಟಿಪಳ್ಳ ಗಣೇಶಕಟ್ಟೆ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಪೊಲೀಸರು ಆಕೆಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ತನಿಖೆಯ ಸಂದರ್ಭದಲ್ಲಿ ಯುವತಿ ಉತ್ತರ ಪ್ರದೇಶ ಮೂಲದ ಯುವಕನ ಜೊತೆಗೆ ತೆರಳಿರುವುದು ಪತ್ತೆಯಾಗಿದೆ.
ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ(18) ಎಂಬಾಕೆ ಸೆ.1ರಂದು ಕಾಲೇಜಿಗೆ ಹೋಗುವುದಾಗಿ ತೆರಳಿದ್ದು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾಳೆ. ಈ ಬಗ್ಗೆ ತಾಯಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕನ್ನಡ, ತುಳು, ಇಂಗ್ಲಿಷ್ ಭಾಷೆ ಮಾತನಾಡುವ ಯುವತಿ, ಕಾಣೆಯಾದ ದಿನ ನೀಲಿ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಹಾಗೂ ಕಪ್ಪು ಬಣ್ಣದ ಸಮವಸ್ತ್ರ ಪ್ಯಾಂಟ್ ಧರಿಸಿದ್ದರು. ಪೊಲೀಸರ ತನಿಖೆ ವೇಳೆ ಯುವತಿಗೆ ಕಾಟಿಪಳ್ಳದಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ಯುವಕನ ಜೊತೆಗೆ ಪ್ರೀತಿ ಇರುವುದು ಗೊತ್ತಾಗಿದೆ. ಎರಡು ತಿಂಗಳ ಹಿಂದೆ ವಿಷಯ ತಿಳಿದ ಮನೆಯವರು ಆಕೆಯನ್ನು ಮತ್ತು ಯುವಕನಿಗೆ ಬೈದು ಸಂಪರ್ಕ ಇಟ್ಟುಕೊಳ್ಳದಂತೆ ಬುದ್ಧಿವಾದ ಹೇಳಿದ್ದರು.
ಇದೀಗ ಮಂಗಳೂರಿನಿಂದ ಚೆನ್ನೈಗೆ ಹೋಗುವ ರೈಲಿನಲ್ಲಿ ಇಬ್ಬರು ತೆರಳಿರುವುದು ಸಿಸಿಟಿವಿಯಲ್ಲಿ ಪತ್ತೆಯಾಗಿದ್ದು ಅಲ್ಲಿಂದ ಲಕ್ನೋಗೆ ತೆರಳುವ ರೈಲಿನಲ್ಲಿ ಹೋಗಿದ್ದಾರೆ. ಇದರಂತೆ, ಸುರತ್ಕಲ್ ಪೊಲೀಸರು ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ. ಯುವಕ ಎಂಆರ್ ಪಿಎಲ್ ನಲ್ಲಿ ಗುತ್ತಿಗೆ ಕೆಲಸ ಮಾಡುತ್ತಿದ್ದು ಕಾಟಿಪಳ್ಳದಲ್ಲಿ ಯುವತಿ ಮನೆ ಬಳಿಯೇ ಬಾಡಿಗೆ ಮನೆ ಮಾಡಿಕೊಂಡಿದ್ದ. ಈ ವೇಳೆ, ಇವರ ಪರಿಚಯ ಆಗಿತ್ತು.
An 18-year-old girl studying first-year BCA at a reputed private college in Mangaluru has gone missing, and investigations have revealed that she has eloped with a youth originally from Uttar Pradesh. Surathkal Police have launched a manhunt to trace the couple. The missing girl, identified as Prajna, a resident of Ganeshakatte in Katipalla village, left home on September 1 saying she was heading to college but did not return.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm