ಬ್ರೇಕಿಂಗ್ ನ್ಯೂಸ್
26-12-20 09:16 am Mangaluru Correspondent ಕರಾವಳಿ
ಉಳ್ಳಾಲ, ಡಿ.26: ಬೈಕ್ ಮತ್ತು ಆ್ಯಕ್ಟಿವಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ನಸುಕಿನ ಜಾವ ತೊಕ್ಕೊಟ್ಟು ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಎದುರು ನಡೆದಿದೆ.
ಸಂತೋಷ್ ನಗರ ನಿವಾಸಿ ಸಂದೇಶ್ ಪೂಜಾರಿ(31) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕಣೀರ್ ತೋಟದ ಜಾತ್ರೆ ನೋಡಲು ತೆರಳಿದ್ದ ಸಂದೇಶ್ ಅವರು ಇಂದು ಮುಂಜಾನೆ ಪಲ್ಸರ್ ಬೈಕಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಬಳಿ ಮಂಗಳೂರಿಗೆ ಧಾವಿಸುತ್ತಿದ್ದ ಆಕ್ಟಿವಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಸಂದೇಶ್ ರಸ್ತೆಗೆಸೆಯಲ್ಪಟ್ಟಿದ್ದು ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕ್ಟಿವಾ ಸವಾರನೂ ಗಾಯಗೊಂಡು ರಸ್ತೆಯಲ್ಲೇ ಬಿದ್ದಿದ್ದನೆನ್ನಲಾಗಿದೆ.


ಮೀನು ವ್ಯಾಪಾರದಲ್ಲಿ ಬದುಕು ಕಟ್ಟಿಕೊಂಡಿದ್ದ
ಸಂತೋಷ್ ನಗರದ ಶೇಖರ ಮತ್ತು ಲೀಲಾವತಿ ಅವರ ಹಿರಿಯ ಮಗನಾದ ಸಂದೇಶ್ ಮೂಲತಃ ಪೈಂಟರ್ ಆಗಿದ್ದು ಲಾಕ್ ಡೌನ್ ನಂತರ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿ ಸ್ನೇಹಿತ ಅಕ್ಷಯ್ ಜೊತೆ ಟೆಂಪೋದಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಸ್ನೇಹಿತ ಅಕ್ಷಯ್ ಜೊತೆ ಕೊಲ್ಯ ಕಣೀರು ತೋಟದ ವಲಸರಿ ಜಾತ್ರೆಗೆ ಸಂದೇಶ್ ತೆರಳಿದ್ದರು. ಅಕ್ಷಯ್ ಬೇಗ ಮನೆಗೆ ಹಿಂದಿರುಗಿದ್ದು, ಸಂದೇಶ್ ಮುಂಜಾನೆ ವೇಳೆಗೆ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
A bike rider was killed in a road accident after the bike and active collided at Thokottu, Mangalore. The deceased has been identified as Sandesh Poojary (31).
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm