ಬ್ರೇಕಿಂಗ್ ನ್ಯೂಸ್
26-12-20 09:16 am Mangaluru Correspondent ಕರಾವಳಿ
ಉಳ್ಳಾಲ, ಡಿ.26: ಬೈಕ್ ಮತ್ತು ಆ್ಯಕ್ಟಿವಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ನಸುಕಿನ ಜಾವ ತೊಕ್ಕೊಟ್ಟು ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಎದುರು ನಡೆದಿದೆ.
ಸಂತೋಷ್ ನಗರ ನಿವಾಸಿ ಸಂದೇಶ್ ಪೂಜಾರಿ(31) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕಣೀರ್ ತೋಟದ ಜಾತ್ರೆ ನೋಡಲು ತೆರಳಿದ್ದ ಸಂದೇಶ್ ಅವರು ಇಂದು ಮುಂಜಾನೆ ಪಲ್ಸರ್ ಬೈಕಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಬಳಿ ಮಂಗಳೂರಿಗೆ ಧಾವಿಸುತ್ತಿದ್ದ ಆಕ್ಟಿವಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಸಂದೇಶ್ ರಸ್ತೆಗೆಸೆಯಲ್ಪಟ್ಟಿದ್ದು ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕ್ಟಿವಾ ಸವಾರನೂ ಗಾಯಗೊಂಡು ರಸ್ತೆಯಲ್ಲೇ ಬಿದ್ದಿದ್ದನೆನ್ನಲಾಗಿದೆ.


ಮೀನು ವ್ಯಾಪಾರದಲ್ಲಿ ಬದುಕು ಕಟ್ಟಿಕೊಂಡಿದ್ದ
ಸಂತೋಷ್ ನಗರದ ಶೇಖರ ಮತ್ತು ಲೀಲಾವತಿ ಅವರ ಹಿರಿಯ ಮಗನಾದ ಸಂದೇಶ್ ಮೂಲತಃ ಪೈಂಟರ್ ಆಗಿದ್ದು ಲಾಕ್ ಡೌನ್ ನಂತರ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿ ಸ್ನೇಹಿತ ಅಕ್ಷಯ್ ಜೊತೆ ಟೆಂಪೋದಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಸ್ನೇಹಿತ ಅಕ್ಷಯ್ ಜೊತೆ ಕೊಲ್ಯ ಕಣೀರು ತೋಟದ ವಲಸರಿ ಜಾತ್ರೆಗೆ ಸಂದೇಶ್ ತೆರಳಿದ್ದರು. ಅಕ್ಷಯ್ ಬೇಗ ಮನೆಗೆ ಹಿಂದಿರುಗಿದ್ದು, ಸಂದೇಶ್ ಮುಂಜಾನೆ ವೇಳೆಗೆ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
A bike rider was killed in a road accident after the bike and active collided at Thokottu, Mangalore. The deceased has been identified as Sandesh Poojary (31).
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am