ಬ್ರೇಕಿಂಗ್ ನ್ಯೂಸ್
03-09-25 10:52 pm Mangalore Correspondent ಕರಾವಳಿ
ಮಂಗಳೂರು, ಸೆ.3 : 43 ವರ್ಷ ವಯಸ್ಸಿನ ಮಹಿಳೆಯೊಬ್ಬರು ಕಳೆದ ಒಂದು ವರ್ಷದಿಂದ ಅತಿಯಾದ ಋತುಸ್ರಾವ ಮತ್ತು ಹೊಟ್ಟೆಯ ಭಾಗದಲ್ಲಿ ತೀವ್ರ ನೋವಿನ ಲಕ್ಷಣಗಳನ್ನು ಹೊಂದಿದ್ದರು. ತಪಾಸಣೆಯ ವೇಳೆ ಆಕೆಗೆ ಎಂಡೊಮೆಟ್ರಿಯೋಸಿಸ್ ಸೋಂಕು ಇರುವುದು ಪತ್ತೆಯಾಗಿತ್ತು. ಇದಕ್ಕಾಗಿ ಹಲವು ಆಸ್ಪತ್ರೆಗಳನ್ನು ಸಂದರ್ಶಿಸಿದ್ದರೂ ಗುಣ ಕಂಡಿರಲಿಲ್ಲ. ಒಂದು ವಾರದಿಂದ ಹೊಟ್ಟೆಯ ಭಾಗದಲ್ಲಿ ತೀವ್ರ ನೋವು, ಜ್ವರದಿಂದ ಬಳಲಿ ಅತ್ತಾವರದ ಕೆಎಂಸಿ ಆಸತ್ರೆಗೆ ಬಂದಿದ್ದರು.
ಸ್ಕ್ಯಾನಿಂಗ್ ಮತ್ತು ಎಂಆರ್ ಐ ಪರೀಕ್ಷೆ ನಡೆಸಿದಾಗ ಅಂಡಾಶಯದಲ್ಲಿ ಬೈಲ್ಯಾಟರಲ್ ಎಂಡೋಮೆಟ್ರಿಯೋಟಿಕ್ ಗಂಟುಗಳು ಇರುವುದು ಹಾಗೂ ಅಕ್ಯೂಟ್ ಪೆಲ್ವಿಕ್ ಇನ್ಫ್ಲಮೇಟರಿ ಕಾಯಿಲೆಯ ಲಕ್ಷಣಗಳು ಪತ್ತೆಯಾಗಿದ್ದವು. ಆಕೆಗೆ ಇಂಟಾವೇನಸ್ ಆ್ಯಂಟಿಬಯಾಟಿಕ್ ಔಷಧ ನೀಡಿ ಒಂದು ವಾರ ನಿಗಾ ಇರಿಸಲಾಯಿತು. ಆದರೆ ಜ್ವರ ಮತ್ತು ನೋವು ಕಡಿಮೆಯಾಗದಿದ್ದರಿಂದ ಪ್ರಸೂತಿ ವಿಭಾಗದ ತಜ್ಞರು ಶಸ್ತ್ರಚಿಕಿತ್ಸೆ ಅಗತ್ಯವೆಂದು ನಿರ್ಧರಿಸಿದರು. ಹಿರಿಯ ಪ್ರಸೂತಿ ತಜ್ಞೆ ಡಾ| ನೀನಾ ಮಹಾಲೆ ಮತ್ತು ಹಿರಿಯ ಜನರಲ್ ಸರ್ಜನ್ ಡಾ| ಪೂರ್ಣಚಂದ್ರ ತೇಜಸ್ವಿ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ್ದು ಹೊಟ್ಟೆಯ ಭಾಗದಲ್ಲಿ ಕೀವು ತುಂಬಿರುವುದು, ಪೆಲ್ವಿಕ್ ಭಾಗದಲ್ಲಿ ಬಾವು ಹಾಗೂ ಗರ್ಭಕೋಶ, ಎರಡೂ ಫಾಲೋಪಿಯನ್ ನಾಳಗಳು ಮತ್ತು ಅಂಡಾಶಯಗಳು ಹೊಟ್ಟೆಗೆ ಅಂಟಿಕೊಂಡಿರುವುದು ತಿಳಿದುಬಂತು. ಇದು ಬಹಳ ಸಂಕೀರ್ಣ ಪ್ರಕರಣವಾಗಿದ್ದು, ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಅಗತ್ಯವಾಗಿತ್ತು.
ಪೆಲ್ವಿಸ್ ಭಾಗದ ಅಂಗಾಂಗಗಳು ರೋಗಪೀಡಿತವಾಗಿ ಪರಸ್ಪರ ಅಂಟಿಕೊಂಡಿದ್ದರೂ ಅವುಗಳನ್ನು ಯಶಸ್ವಿಯಾಗಿ ಬೇರ್ಪಡಿಸುವಲ್ಲಿ ಶಸ್ತ್ರಚಿಕಿತ್ಸಾ ತಜ್ಞರ ತಂಡ ಯಶಸ್ವಿಯಾಯಿತು. ಪೋಸ್ಟ್ ಆಪರೇಟಿವ್ ವಾರ್ಡ್ ನಲ್ಲಿ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ ವಿಭಾಗದ ಘಟಕ ಮುಖ್ಯಸ್ಥ ಡಾ.ಅಪರ್ಣಾ ಭಟ್, ಡಾ.ನೀನಾ ಮಹಾಲೆ ಮತ್ತು ಡಾ.ಸೌದಾ ಅವರ ನೇತೃತ್ವದಲ್ಲಿ ನಿಕಟ ನಿಗಾದಡಿ ಚಿಕಿತ್ಸೆ ನೀಡಲಾಯಿತು. ರೋಗಿ ಬಳಿಕ ಉತ್ತಮವಾಗಿ ಚೇತರಿಸಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ತಂಡ ಪ್ರಯತ್ನ, ವೈದ್ಯಕೀಯ ನೈಪುಣ್ಯ ಮತ್ತು ಶಸ್ತ್ರಚಿಕಿತ್ಸೆ ಕೌಶಲಗಳು ಇಂತಹ ಕ್ಲಿಷ್ಟಕರ ಪ್ರಕರಣಗಳನ್ನು ನಿಭಾಯಿಸುವಲ್ಲಿ ಬಹಳ ನಿರ್ಣಾಯಕ ಎಂಬುದನ್ನು ಅತ್ತಾವರ ಕೆಎಂಸಿಯಲ್ಲಿ ನಡೆಸಲಾಗಿರುವ ಈ ಚಿಕಿತ್ಸೆ ಸಾಬೀತುಪಡಿಸಿದೆ.
A 43-year-old woman suffering from a rare gynecological condition has successfully undergone a complex surgery at KMC Hospital, Attavar. The patient had been experiencing heavy menstrual bleeding and severe abdominal pain for nearly a year. Medical investigations revealed that she was suffering from endometriosis.
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 03:07 pm
Mangalore Correspondent
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
21-10-25 05:12 pm
Mangalore Correspondent
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm