ಬ್ರೇಕಿಂಗ್ ನ್ಯೂಸ್
04-09-25 07:39 pm Mangalore Correspondent ಕರಾವಳಿ
ಮಂಗಳೂರು, ಸೆ.4: ರಾತ್ರಿ ವೇಳೆ ಧ್ವನಿ ವರ್ಧಕ ನಿಷೇಧದಿಂದಾಗಿ ಕರಾವಳಿಯಲ್ಲಿ ಸಾಂಸ್ಕೃತಿಕ ವಲಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾಟಕ, ಯಕ್ಷಗಾನ, ಜಾತ್ರೆಯನ್ನು ಪೊಲೀಸರು ನಿಲ್ಲಿಸುತ್ತಿದ್ದಾರೆ. ಏಕಾಏಕಿ ಈ ರೀತಿಯ ಕಾನೂನು ಹೇರುತ್ತಿರುವುದರಿಂದ ಸಾಂಸ್ಕೃತಿಕ ವಲಯ ಆತಂಕಕ್ಕೆ ಒಳಗಾಗಿದೆ. ಇದನ್ನು ವಿರೋಧಿಸಿ ಸೆ.9ರಂದು ಕದ್ರಿಯ ಗೋರಕ್ಷನಾಥ ಹಾಲ್ ನಲ್ಲಿ ನಾಟಕ, ಯಕ್ಷಗಾನ ಕಲಾವಿದರು, ಸೌಂಡ್ಸ್, ಮ್ಯೂಸಿಕ್, ಶಾಮಿಯಾನ ಹೀಗೆ ಎಲ್ಲ ವಿಭಾಗದವರು ಸೇರಿ ಜನಜಾಗೃತಿ ಸಭೆ ನಡೆಸಲಿದ್ದಾರೆ ಎಂದು ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ವಿಶ್ವ ಹಿಂದು ಪರಿಷತ್ ಕಚೇರಿಯಲ್ಲಿ ಹಲವು ಸಂಘಟನೆಗಳ ವತಿಯಿಂದ ಸುದ್ದಿಗೋಷ್ಟಿ ನಡೆಸಿದ್ದು ನೂರಾರು ವರ್ಷಗಳಿಂದ ಯಕ್ಷಗಾನ, ನಾಟಕ ರಂಗಭೂಮಿ ನಡೆದುಬಂದಿದೆ. ಆದರೆ ಈಗಿನ ಕಾಲದಲ್ಲಿ ಧ್ವನಿವರ್ಧಕ ಇಲ್ಲದೆ ಕಾರ್ಯಕ್ರಮ ನಡೆಸುವ ಸ್ಥಿತಿ ಇಲ್ಲ. ರಾತ್ರಿ 10 ಗಂಟೆ ನಂತರ ಧ್ವನಿ ವರ್ಧಕ ಬಳಸಬಾರದೆಂಬ ನೀತಿಯಿಂದಾಗಿ ಇದನ್ನೇ ನಂಬಿಕೊಂಡ ಕಲಾವಿದರು, ಅದಕ್ಕೆ ಸಂಬಂಧಿತ ಸೌಂಡ್ಸ್ ಲೈಟ್ಸ್, ಶಾಮಿಯಾನ, ಇನ್ನಿತರ ಎಲ್ಲ ಜನರೂ ತೊಂದರೆಗೀಡಾಗಿದ್ದಾರೆ. ಈಗ ನಾಟಕ, ಯಕ್ಷಗಾನ ಮುಂದೆ ಕೋಲ, ದೇವರ ಬಲಿಗೂ ಇಂಥದ್ದೇ ತೊಂದರೆ ಎದುರಾಗಲಿದೆ. ಅಕ್ಟೋಬರ್ ನಂತರ ಉತ್ಸವ, ಯಕ್ಷಗಾನ ಸೀಸನ್ ಶುರುವಾಗಲಿದ್ದು ಇದಕ್ಕಾಗಿ ಸರಕಾರದ ಗಮನ ಸೆಳೆಯಲು ಜನಜಾಗೃತಿ ಸಭೆ ನಡೆಸುತ್ತಿದ್ದೇವೆ ಎಂದರು.
ಬೇರೆ ಜಿಲ್ಲೆಗಳಲ್ಲಿ ಇಲ್ಲದ ಕಾನೂನನ್ನು ಇಲ್ಲಿ ಹೇರಲಾಗುತ್ತಿದೆ. ಕಾನೂನು ನೆಪದಲ್ಲಿ ಕರಾವಳಿಯ ಸಾಂಸ್ಕೃತಿಕ ಅಂಗಡಿಯನ್ನೇ ಬಂದ್ ಮಾಡಲಾಗುತ್ತಿದೆ. ಶೇ.80ರಷ್ಟು ಕಲಾವಿದರು ಕಲೆಯನ್ನೇ ಬದುಕಿಗೆ ನಂಬಿಕೊಂಡಿದ್ದಾರೆ. ರಾತ್ರಿ ನಾಟಕ ಮಾಡಬಾರದು ಎಂದು ಅರ್ಧಕ್ಕೆ ನಿಲ್ಲಿಸುವ ಸ್ಥಿತಿಯಾಗಿದೆ. ಇದರಿಂದ ಜನರ ಹೊಟ್ಟೆಗೆ ಬಡಿದಂತಾಗಿದೆ ಎಂದು ದೇವದಾಸ್ ಕಾಪಿಕಾಡ್ ಹೇಳಿದರು.
ಲೌಟ್ಸ್ ಸೌಂಡ್ಸ್ ಮಾಲೀಕರ ಸಂಘದ ಧನರಾಜ್ ಪರಂಗಿಪೇಟೆ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ 1200ರಷ್ಟು ಮಾಲೀಕರು, 5-6 ಸಾವಿರ ಕಾರ್ಮಿಕರು ಇದ್ದಾರೆ. ಮಳೆಗಾಲದ ಬಳಿಕ ಅಷ್ಟಮಿ, ಗಣೇಶೋತ್ಸವಕ್ಕೆ ಕಾರ್ಯಕ್ರಮ ಸಿಗುತ್ತೆ ಎಂದು ಸಾಲ ಮಾಡಿ ಡಿಜೆ ಇನ್ನಿತರ ಬಾಕ್ಸ್ ಗಳನ್ನ ಹಾಕಿದ್ದರು. ಈಗ ಬಂದ್ ಮಾಡಬೇಕು, ರಾತ್ರಿ ನಿಲ್ಲಿಸಬೇಕು ಎಂದರೆ ಹೇಗೆ? ಇವರು ಮೂರು ತಿಂಗಳು ಮೊದಲೇ ಸೂಚನೆ ಕೊಡಬಹುದಿತ್ತಲ್ಲಾ ಎಂದು ಹೇಳಿದರು.
ಶಾಮಿಯಾನ ನಡೆಸುವವರಲ್ಲೂ 25 ಸಾವಿರದಷ್ಟು ಕಾರ್ಮಿಕರು ಇದ್ದಾರೆ. ಪೊಲೀಸರ ನೀತಿಯಿಂದಾಗಿ ಎಲ್ಲರಿಗೂ ಸಮಸ್ಯೆಯಾಗಿದೆ ಎಂದು ಇನ್ನೊಬ್ಬರು ಹೇಳಿದರೆ, ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ 90ರಷ್ಟು ನಾಟಕ ತಂಡಗಳಿವೆ, ಎಲ್ಲರನ್ನೂ ಸಂಪರ್ಕಿಸಿದ್ದು ನಾಡಿದ್ದಿನ ಜನಜಾಗೃತಿ ಸಭೆಗೆ ಒಗ್ಗೂಡಿಸುತ್ತೇವೆ ಎಂದು ನಾಟಕ ಕಲಾವಿದರ ಸಂಘದ ಕೃಷ್ಣ ಮಂಜೇಶ್ವರ್ ಹೇಳಿದರು.
ರಾಜ್ಯ ಸರಕಾರ 2022ರಲ್ಲಿ ಜಾರಿಗೆ ತಂದಿರುವ ರಾತ್ರಿ 10ರಿಂದ ಬೆಳಗ್ಗೆ 6 ಗಂಟೆ ವರೆಗಿನ ಧ್ವನಿವರ್ಧಕ ನಿಷೇಧ ನೀತಿಯಿಂದಾಗಿ ತೊಂದರೆ ಎದುರಾಗಿದೆ, ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೀರಾ ಎಂಬ ಪ್ರಶ್ನೆಗೆ, ನಾಡಿದ್ದು ಜನಜಾಗೃತಿ ಸಭೆ ನಡೆಸುತ್ತಿದ್ದು, ಅದರಲ್ಲಿ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ವಿಹಿಂಪದ ಶರಣ್ ಪಂಪ್ವೆಲ್, ಪುರುಷೋತ್ತಮ್, ವಿವಿಧ ಸಂಘಗಳ ಪದಾಧಿಕಾರಿಗಳು ಇದ್ದರು.
The recent enforcement of a loudspeaker ban during nighttime hours has triggered widespread concern among the cultural community in coastal Karnataka. Police have reportedly stopped several traditional performances such as Yakshagana, dramas, and temple fairs, leaving artists and allied workers anxious about their future.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 10:29 pm
Mangalore Correspondent
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm