ಬ್ರೇಕಿಂಗ್ ನ್ಯೂಸ್
05-09-25 05:09 pm Mangalore Correspondent ಕರಾವಳಿ
ಮಂಗಳೂರು, ಸೆ.5 : ರಾತ್ರಿ ಗಸ್ತು ನಿರತರಾಗಿದ್ದ ಕಂಕನಾಡಿ ನಗರ ಠಾಣೆ ಎಎಸ್ಐ ಅಶೋಕ್ ಮತ್ತು ಸಿಬ್ಬಂದಿ ಸುರೇಂದ್ರ ಕುಮಾರ್ ಅವರಿಗೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಲ್ಲೆ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಹಾಸನ ಜಿಲ್ಲೆ ಸಕಲೇಶಪುರದ ಹಲಸೋಗೆ ಗ್ರಾಮದ ನಿವಾಸಿ ಸುಲೈಮಾನ್ (42) ಬಂಧಿತ ಆರೋಪಿ. ಸೆ.2 ರಂದು ತಡರಾತ್ರಿ ಅಶೋಕ್ ಅವರು ಸಿಬ್ಬಂದಿಯೊಂದಿಗೆ ರೌಂಡ್ಸ್ ನಲ್ಲಿದ್ದಾಗ ನಾಗುರಿಯಲ್ಲಿ ಚಿಕನ್ ಗ್ರಿಲ್ ಎಂಬ ಅಂಗಡಿ ಬಳಿ ಓಣಿಯಲ್ಲಿ ಐದಾರು ದ್ವಿಚಕ್ರ ವಾಹನಗಳ ಜತೆ ಏಳೆಂಟು ಮಂದಿ ನಿಂತಿದ್ದರು. ಅಲ್ಲಿದ್ದವರನ್ನು ಯಾಕೆ నింತಿದ್ದೀರಿ ಎಂದು ಪ್ರಶ್ನಿಸಿದಾಗ ಹಿಂದುಗಡೆಯ ಅಡುಗೆ ಕೋಣೆಯಿಂದ ಏಕಾಏಕಿ ಬಂದ ಸುಲೈಮಾನ್, ನಮ್ಮನ್ನು ಕೇಳಲು ನೀವು ಯಾರು? ನಾನು ಏನು ಬೇಕಾದರೂ ಮಾಡಿಯೇನು, ನಿನ್ನನ್ನು ಬಿಡುವುದಿಲ್ಲ ಎಂದು ಅಶೋಕ್ ಅವರ ಮೇಲೆ ಕೈಯಿಂದ ಹಲ್ಲೆ ನಡೆಸಲು ಬಂದಿದ್ದಾನೆ. ಆಗ ಅವರು ತಪ್ಪಿಸಿಕೊಂಡಿದ್ದು, ಈ ವೇಳೆ ಅವರ ಕೈಯಲ್ಲಿದ್ದ ಮೊಬೈಲ್ಗೆ ಅಳವಡಿಸಿದ್ದ ಫಿಂಗರ್ ಪ್ರಿಂಟ್ ಸ್ಕ್ಯಾನರನ್ನು ಆರೋಪಿ ಹಿಡಿದು ಎಳೆದು ತುಂಡು ಮಾಡಿ ನೆಲಕ್ಕೆ ಎಸೆದಿದ್ದಾನೆ.
ಇದನ್ನು ನೋಡಿದ ವಾಹನದಲ್ಲಿ ಚಾಲಕನಾಗಿದ್ದ ಸುರೇಂದ್ರ ಕುಮಾರ್ ಅವರು ಸಹಾಯಕ್ಕೆ ಬಂದು ಸಮಾಧಾನ ಪಡಿಸಲು ಹೋದಾಗ ಅವರ ಹೊಟ್ಟೆಗೆ ಮತ್ತು ಸೊಂಟಕ್ಕೆ ಸುಲೈಮಾನ್ ಕಾಲಿನಿಂದ ಒದ್ದು ನೆಲಕ್ಕೆ ಬೀಳಿಸಿ ಕೈಯಿಂದ ಬೆನ್ನಿಗೆ ಮತ್ತು ಕುತ್ತಿಗೆಗೆ ಹಲ್ಲೆ ಮಾಡಿದ್ದಾನೆ. ಆಗ ಅಶೋಕ್ ಅವರು ಸಹಾಯಕ್ಕೆ ಹೋಗಿ ಬಿಡಿಸಿದ್ದಾರೆ. ಸುರೇಂದ್ರ ಕುಮಾರ್ ಅವರ ಹೊಟ್ಟೆ, ಸೊಂಟದ ಭಾಗ, ಬೆನ್ನು ಮತ್ತು ಕುತ್ತಿಗೆಗೆ ಗುದ್ದಿದ ಹಲ್ಲೆ ಮಾಡಿದ್ದಾನೆ.
ಸುಲೈಮಾನ್ ಮತ್ತೆ ಹಲ್ಲೆ ಮಾಡುವ ಉದ್ದೇಶದಿಂದ ಹತ್ತಿರದಲ್ಲಿ ಬೇರೆ ವಸ್ತುವಿಗೆ ಹುಡುಕಾಡುತ್ತಿದ್ದಾಗ ಆತನನ್ನು ಹಿಡಿದಿಟ್ಟು ಠಾಣೆಗೆ ಕರೆ ಮಾಡಿ ಸಹಾಯಕ್ಕೆ ಬರುವಂತೆ ಕೇಳಿಕೊಂಡಿದ್ದರು. ರಾತ್ರಿ ಕರ್ತವ್ಯದಲ್ಲಿದ್ದ ರಾಯಣ್ಣ ಮತ್ತು ಪುರುಷೋತ್ತಮ ಅವರು ಸ್ಥಳಕ್ಕೆ ಧಾವಿಸಿ, ಆತನನ್ನು ಹಿಡಿದು ಠಾಣೆಗೆ ಕರೆತಂದಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಆಕ್ರಮಣಕಾರಿಯಾಗಿ ವರ್ತಿಸಿ ಪೊಲೀಸ್ ಅಧಿಕಾರಿ ಸಿಬಂದಿಗೆ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿ, ಹಲ್ಲೆ ನಡೆಸಿ, ಇಲಾಖಾ ಸೊತ್ತನ್ನು ತುಂಡು ಮಾಡಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.
A man was arrested in Mangaluru after allegedly assaulting police personnel on night patrol duty near a fast-food outlet in Naguri. The accused, identified as Sulaiman (42), a resident of Halasoge village in Sakleshpur, Hassan district, has been booked for assault, obstruction of duty, and damaging government property.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am