ಬ್ರೇಕಿಂಗ್ ನ್ಯೂಸ್
            
                        07-09-25 10:59 pm Mangalore Correspondent ಕರಾವಳಿ
            ಮಂಗಳೂರು, ಸೆ.7 : ಧರ್ಮಸ್ಥಳ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶನಿವಾರ ಸ್ಥಳ ಮಹಜರು ನಡೆಸಿದಾಗ ಮತ್ತೆರಡು ಮಾನವ ತಲೆಬುರುಡೆಗಳು ಪತ್ತೆಯಾಗುವೆ ಎಂದು ಹೇಳಾಗುತ್ತಿದ್ದು ಎಸ್ಐಟಿ ತಂಡದ ತನಿಖೆಗೆ ಹೊಸ ಆಯಾಮ ಸಿಕ್ಕಿದೆ.
ಶನಿವಾರ ಎಸ್ಐಟಿ ಅಧಿಕಾರಿಗಳು ಸೌಜನ್ಯಾ ಮಾವ ವಿಟಲ ಗೌಡರನ್ನು ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದರು. ಈ ವೇಳೆ, ಅದೇ ಸ್ಥಳದಲ್ಲಿ ಮತ್ತೆರಡು ಮಾನವ ಬುರುಡೆ ಮತ್ತು ಎಲುಬುಗಳು ಪತ್ತೆಯಾಗಿವೆ. ಈ ಜಾಗದಲ್ಲಿ ಹಿಂದೆ ಚಿನ್ನಯ್ಯ ಜಾಗ ತೋರಿಸಿದ ಸಂದರ್ಭದಲ್ಲಿ ಸ್ಥಳ ಶೋಧ ನಡೆಸಲಾಗಿತ್ತು.ಆದರೆ ಆಗ ಕಾಣಿಸಿರದ ತಲೆಬುರುಡೆ ಈಗ ಕಂಡಿರುವುದು ಅಚ್ಚರಿ ಸೃಷ್ಟಿಸಿದೆ. ಚಿನ್ನಯ್ಯ ಉದ್ದೇಶಪೂರ್ವಕ ಈ ಜಾಗವನ್ನು ತೋರಿಸಿರಲಿಲ್ಲವೇ ಎಂಬ ಶಂಕೆ ಮೂಡಿದೆ.

ನೂರಾರು ಶವಗಳನ್ನು ಹೂತ ಬಗ್ಗೆ ಚಿನ್ನಯ್ಯನ ಹೇಳಿಕೆ ಆಧರಿಸಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ಸಂದರ್ಭದಲ್ಲಿ ಚಿನ್ನಯ್ಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶವ ಹೂತಿರುವ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಗೆ ಹೇಳಿದ್ದ ಎನ್ನಲಾಗಿದೆ. ಇದೇ ಮಾಹಿತಿ ಆಧರಿಸಿ ವಿಠಲ ಗೌಡರನ್ನು ಸ್ಥಳಕ್ಕೆ ಕಳಿಸಿ ತಲೆಬುರುಡೆ ತರುವಂತೆ ಮಾಡಲಾಗಿತ್ತು ಎನ್ನುವ ಮಾಹಿತಿ ಇದೆ. ಇದೇ ವೇಳೆ ವಿಡಿಯೋ ವನ್ನೂ ಮಾಡಿದ್ದರಂತೆ. ಚಿನ್ನಯ್ಯ ಆರೋಪಿಯಾಗಿ ಬದಲಾದ ನಂತರ ಎಸ್ಐಟಿ ತನಿಖೆ ತಲೆಬುರುಡೆಯತ್ತ ತಿರುಗಿತ್ತು. ಈ ವೇಳೆ ತನಗೇನೂ ಗೊತ್ತಿಲ್ಲ ಎಂದು ಚಿನ್ನಯ್ಯ ಹೇಳಿದ್ದ. ಆನಂತರ, ಜಯಂತ್ ಮಾತಿನಂತೆ ಗಿರೀಶ್ ಮಟ್ಟಣ್ಣನವರ್, ವಿಠಲ ಗೌಡರನ್ನು ಕರೆಸಿ ವಿಚಾರಣೆ ಮಾಡಿದ್ದರು.
ವಿಠಲ ಗೌಡ ತಲೆಬುರುಡೆ ತಂದಿರುವ ವಿಷಯ ತಿಳಿಸಿದ್ದು ಈಗ ಮತ್ತೆ ಅದೇ ಜಾಗದಲ್ಲಿ ಸ್ಥಳ ಶೋಧ ನಡೆಸಲಾಗಿದೆ. ಈಗ ಮತ್ತೆರಡು ಬುರುಡೆ ಪತ್ತೆಯಾಗಿದೆ ಎಂಬ ಸುದ್ದಿ ಹರಡಿದ್ದು ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡೆ ಕಾಡಿಗೆ ಪೊಲೀಸರ ಭದ್ರತೆ ಏರ್ಪಡಿಸಿದ್ದಾರೆ.
            
            
            The Special Investigation Team (SIT) probing the Dharmasthala case has tightened security around the Banglegudde forest after suspicions arose that two more human skulls and bones were found during a spot inspection on Saturday. The development has added a new dimension to the ongoing investigation.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm