ಬ್ರೇಕಿಂಗ್ ನ್ಯೂಸ್
09-09-25 05:59 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.9 : ಧರ್ಮಸ್ಥಳ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಇಂದು ಬೆಳ್ತಂಗಡಿ ಕಚೇರಿಯಲ್ಲಿ ಕೇರಳದ ಯೂಟ್ಯೂಬರ್ ಮುನಾಫ್ ಅವರನ್ನು ವಿಚಾರಣೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ನೋಟಿಸ್ ಜಾರಿಗೊಳಿಸಿದ್ದಕ್ಕೆ ಮುನಾಫ್ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದು ವಿಚಾರಣೆಗೆ ಒಳಗಾಗಿದ್ದಾರೆ.
ವಿಚಾರಣೆ ಮುಗಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಮಾತನಾಡಿದ ಮುನಾಫ್, ನೀವು ಹೇಳಿದ ರೀತಿಯಲ್ಲಿ ಎಸ್ಐಟಿ ತನಿಖೆ ನಡೆಯೋದಿಲ್ಲ. ಸುಜಾತಾ ಭಟ್, ಅನನ್ಯಾ ಬಗ್ಗೆ ತನಿಖೆ ಇರೋದಲ್ಲ. ದೂರುದಾರ 164 ಹೇಳಿಕೆಯಡಿ ನೀಡಿರುವ ಮಾಹಿತಿ ಆಧರಿಸಿ ಎಸ್ಐಟಿ ರಚನೆಯಾಗಿದ್ದು, ಅದರಲ್ಲಿರುವ ಎಲ್ಲ ವಿಚಾರವನ್ನೂ ತನಿಖೆ ನಡೆಸುತ್ತಾರೆ. ನನ್ನಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ, ಅದಕ್ಕೆ ಉತ್ತರ ನೀಡಿದ್ದೇನೆ ಎಂದರು.
ನಾನು ಶಿರೂರಿನಲ್ಲಿ ಗುಡ್ಡ ಕುಸಿತದಿಂದ ನಮ್ಮ ಲಾರಿ ಮುಳುಗಡೆಯಾದಾಗ 72 ದಿನಗಳ ಕಾಲ ಹೋರಾಟ ನಡೆಸಿದ್ದೆ. ಅದಕ್ಕೆ ಮಲಯಾಳದ ಎಲ್ಲ ವಾಹಿನಿಗಳು ಬೆಂಬಲ ನೀಡಿದ್ದವು. ಕೊನೆಗೆ, ನಮ್ಮ ಲಾರಿಯೂ ಸಿಕ್ಕಿತ್ತು. ನಾವು ನಮ್ಮ ಕುಟುಂಬ ಸಾಗರದಲ್ಲಿದ್ದು ಕರ್ನಾಟಕದಲ್ಲಿಯೇ ಹುಟ್ಟಿ ಬೆಳೆದವನು. ಈಗ ಹತ್ತು ವರ್ಷಗಳಿಂದ ಕೇರಳದಲ್ಲಿ ಸೆಟ್ಲ್ ಆಗಿದ್ದೇನೆ.
ಸೌಜನ್ಯಾ ಪರ ಹೋರಾಟದಲ್ಲಿ ನಾನೂ ಇದ್ದೇನೆ, ಸಾಯೋ ವರೆಗೂ ಹೋರಾಟ ಮಾಡುತ್ತೇನೆ. ಅದರಲ್ಲಿ ಹಿಂಜರಿಕೆ ಇಲ್ಲ. ನಿಮ್ಮ ಕನ್ನಡದ ಟಿವಿಗಳು ನನ್ನನ್ನು ವಿಲನ್ ಮಾಡಿದವು. ಕೇರಳದಿಂದ ಪೊಲೀಸ್ ಭದ್ರತೆಯಲ್ಲಿ ಬರ್ತಾನೆ ಅಂತ ಸುದ್ದಿ ಮಾಡಿದ್ದವು. ಅಂಥ ಅನಿವಾರ್ಯತೆ ನನಗೆ ಬಂದಿಲ್ಲ. ಒಬ್ಬನೇ ಬಂದಿದ್ದೇನೆ, ವಿಚಾರಣೆ ಎದುರಿಸಿ ಹೋಗಿದ್ದೇನೆ. ಕೇರಳದ ಲಿಂಕ್ ಅಂತ ಸುದ್ದಿ ಮಾಡಿದ್ದನ್ನೂ ನೋಡಿದ್ದೇನೆ. ನಾನು ಎರಡು ತಿಂಗಳು ಮೊದಲು ಬಂದಿದ್ದು ಹೌದು. ಸುದ್ದಿ ಮಾಡಿದ್ದೂ ಹೌದು. ನನ್ನ ಪಾಲಿಗೆ ನಾವು ಮಾಡಿದ್ದು ಸುದ್ದಿ ಸತ್ಯ. ಅದು ಸುಳ್ಳು ಅಂತ ನೀವು ಸಾಬೀತು ಮಾಡಿ ಎಂದು ಸವಾಲೆಸೆದರು.
ನೀವು ಸತ್ಯ ತೋರಿಸಿದರೆ ಜನ ನಂಬುತ್ತಾರೆ, ಇಲ್ಲಾಂದ್ರೆ ನಂಬಲ್ಲ ಎಂದೂ ಹೇಳಿದ ಮುನಾಫ್, ಸುಜಾತಾ ಭಟ್ ಬಗ್ಗೆ ಕೇಳಿದ್ದಕ್ಕೆ ಅದೊಂದೇ ಯಾಕೆ ಕೇಳ್ತೀರಿ. ಒಂದೇ ವಿಷಯ ಇರೋದಲ್ಲ ಅಲ್ವಾ ಎಂದು ಪ್ರಶ್ನಿಸಿದರು. ಪದ್ಮಲತಾ, ಸೌಜನ್ಯಾ ಹೀಗೆ ಹಲವಾರು ಜನ ಸತ್ತಿದ್ದಾರೆ. ಅದನ್ನೆಲ್ಲ ನೀವು ಯಾಕೆ ಕೇಳಲ್ಲ ಎಂದು ಪ್ರಶ್ನಿಸಿದರು. ಅದೆಲ್ಲ ತನಿಖೆ ಆಗುತ್ತಾ ಎಂದು ಕೇಳಿದಾಗ, ಎಸ್ಐಟಿ ಸರಿಯಾದ ರೀತಿಯಲ್ಲೇ ತನಿಖೆ ಮಾಡುತ್ತಾರೆ, ಆದರೆ ನೀವು ಅಂದುಕೊಂಡ ರೀತಿ ಇಲ್ಲ. ಸತ್ಯ ಬಂದೇ ಬರುತ್ತದೆ ಎಂದರು.
ನಾಲ್ಕು ದಿನದಿಂದ ಅಭಿಷೇಕ್ ಬಂಧನ ಆಗುತ್ತದೆ, ವಿಠಲ ಗೌಡ ಬಂಧನ ಆಗುತ್ತದೆ ಎಂದು ತೋರಿಸ್ತಿದೀರಿ, ಯಾಕೆ ಇನ್ನೂ ಬಂಧನ ಮಾಡಿಲ್ಲ ಎಂದು ಪ್ರಶ್ನಿಸಿದರು.
Kerala-based YouTuber Munaf, who has been actively commenting on the ongoing Dharmasthala case, appeared before the Special Investigation Team (SIT) at the Belthangady office today for questioning. This follows a notice issued to him two days ago. After the interrogation, Munaf addressed the media and made several bold remarks regarding the investigation and the way he has been portrayed by certain Kannada news channels.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm