ಬ್ರೇಕಿಂಗ್ ನ್ಯೂಸ್
09-09-25 08:01 pm Mangalore Correspondent ಕರಾವಳಿ
ಮಂಗಳೂರು, ಸೆ.9 : ಕುಳೂರಿನಲ್ಲಿ ರಸ್ತೆ ಅಪಘಾತಕ್ಕೆ ಮಹಿಳೆ ಬಲಿಯಾದ ಘಟನೆ ಸಂಬಂಧಿಸಿ ಸುರತ್ಕಲ್ ಸಂಚಾರಿ ಠಾಣೆ ಪೊಲೀಸರು ಹೆದ್ದಾರಿ ಗುಂಡಿ ಮುಚ್ಚದೆ ನಿರ್ಲಕ್ಷ್ಯ ವಹಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಾಧವಿ (44) ಎಂಬವರು ಚಿತ್ರಾಪುರದ ತನ್ನ ಮನೆಯಿಂದ ಬೆಳಗ್ಗೆ 8.30ರ ವೇಳೆಗೆ ಸ್ಕೂಟರಿನಲ್ಲಿ ಬರುತ್ತಿದ್ದಾಗ ಕುಳೂರಿನ ರಾಯಲ್ ಓಕ್ ಮುಂಭಾಗದಲ್ಲಿ ಹೆದ್ದಾರಿ ಗುಂಡಿಗೆ ಬಿದ್ದು ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ, ಮೀನು ಸಾಗಾಟದ ಈಚರ್ ಲಾರಿ ಹಿಂದಿನಿಂದ ಅತಿ ವೇಗದಲ್ಲಿ ಬಂದಿದ್ದು ರಸ್ತೆಗೆ ಬಿದ್ದ ಮಹಿಳೆಯ ಮೇಲಿನಿಂದ ಸಾಗಿದೆ. ಮಹಿಳೆ ರಸ್ತೆಯಲ್ಲೇ ದಾರುಣವಾಗಿ ಸಾವು ಕಂಡಿದ್ದರು.



ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಉದ್ದಕ್ಕೂ ಗುಂಡಿ ಬಿದ್ದರೂ ನಿರ್ಲಕ್ಷ್ಯ ವಹಿಸಿರುವ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಪೊಲೀಸರು ಮತ್ತು ಜನಪ್ರತಿನಿಧಿಗಳ ಬಗ್ಗೆಯೂ ಆಕ್ರೋಶ ಕೇಳಿಬಂದಿತ್ತು. ಅಪಘಾತ ಪಡಿಸಿದ ಲಾರಿ ಚಾಲಕ ಮೊಹಮ್ಮದ್ ಫಾರೂಕ್ ನನ್ನ ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ್ದರು. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯ ಮಾಡಲಾಗಿತ್ತು.
ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸೂಚನೆಯಂತೆ ರಸ್ತೆ ಗುಂಡಿಗಳನ್ನು ಮುಚ್ಚದೆ ನಿರ್ಲಕ್ಷ್ಯ ವಹಿಸಿ ಅಪಘಾತಕ್ಕೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ವಿರುದ್ಧ ಹಾಗೂ ಲಾರಿ ಚಾಲಕ ಮೊಹಮ್ಮದ್ ಫಾರೂಕ್ ಮೇಲೆ ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಕಲಂ 281, 106(1) ಬಿಎನ್ಎಸ್ ಮತ್ತು 198 (ಎ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
In a shocking incident at Kuloor, a woman lost her life after falling off her scooter due to a pothole, following which a speeding truck ran over her. The police have registered a case not only against the truck driver but also against officials of the National Highways Authority of India (NHAI) for negligence.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am