ಬ್ರೇಕಿಂಗ್ ನ್ಯೂಸ್
10-09-25 11:02 am Mangalore Correspondent ಕರಾವಳಿ
ಬಂಟ್ವಾಳ, ಸೆ.10 : ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಉಮ್ಮರ್ ಫಾರೂಕ್ (48) ಎಂಬಾತ ತನ್ನ ಮೇಲೆ ಯಾರೋ ದುಷ್ಕರ್ಮಿಗಳು ಹಲ್ಲೆಗೈದು ಕೊಲೆಗೆ ಯತ್ನಿಸಿದ್ದಾರೆಂದು ಪೊಲೀಸ್ ದೂರು ನೀಡಿದ್ದು ತನಿಖೆ ನಡೆಸಿದ ವೇಳೆ ಸುಳ್ಳು ದೂರು ಎಂದು ತಿಳಿಯುತ್ತಲೇ ಆತನ ವಿರುದ್ಧವೇ ಪೊಲೀಸರು ಕೇಸು ದಾಖಲಿಸಿ ಜೈಲಿಗೆ ತಳ್ಳಿದ್ದಾರೆ.
ಜೂನ್ 13ರಂದು ಉಮ್ಮರ್ ಫಾರೂಕ್ ತನ್ನ ಮೇಲೆ ಹಲ್ಲೆಯಾಗಿದೆ ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ನೀಡಿದ ದೂರಿನಂತೆ ಠಾಣಾ ಅ.ಕ್ರ 68/2025 ಕಲಂ:109, 324(4), ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಬಳಿಕ ಯಾವುದೇ ಪುರಾವೆ ಸಿಗದ ಕಾರಣ ಸುಳ್ಳು ದೂರು ನೀಡಿದ್ದಾರೆಂದು ನ್ಯಾಯಾಲಯಕ್ಕೆ ಬಿ ಅಂತಿಮ ವರದಿ ಸಲ್ಲಿಸಿದ್ದಲ್ಲದೆ, ಸುಳ್ಳು ದೂರು ನೀಡಿದ ಉಮರ್ ಫಾರೂಕ್ ಮೇಲೆ ಠಾಣೆಯಲ್ಲಿ ಅ.ಕ್ರ 128/2025 ಕಲಂ:192, 353 (1) (B), 230 (1), 248(A) BNS ರಂತೆ ಪ್ರಕರಣ ದಾಖಲಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದೇ ವಿಷಯಕ್ಕೆ ಸಂಬಂಧಿಸಿ, ಉಮರ್ ಫಾರೂಕ್ ಮೇಲೆ ಯಾರೋ ದುಷ್ಕರ್ಮಿಗಳು ವಿನಾಕಾರಣ ಹಲ್ಲೆ ನಡೆಸಿದ್ದಾರೆಂದು ಹೇಳಿ ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ತಲಪಾಡಿ ಎಂಬಾತ ತನ್ನ ಫೇಸ್ ಬುಕ್ ಖಾತೆಯಲ್ಲಿ ಸುಳ್ಳು ಸುದ್ದಿ ಹರಡಿದ್ದಾನೆ. ಈ ಬಗ್ಗೆಯೂ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆನಂತರ, ಎಸ್ಡಿಪಿಐ ಮುಖಂಡ ರಿಯಾಜ್ ಕಡಂಬು ಎಂಬವರು ಇದೇ ವಿಚಾರವಾಗಿ ತನಿಖೆಯಲ್ಲಿರುವ ಪ್ರಕರಣದ ಬಗ್ಗೆ ಅಶ್ರಫ್ ತಲಪಾಡಿ ಎಂಬವರಿಗೆ ನೀಡಿದ ನೋಟೀಸಿನ ಬಗ್ಗೆ ಸತ್ಯಾಸತ್ಯತೆಯನ್ನು ತಿಳಿಯದೇ ಅಪೂರ್ಣ ಮಾಹಿತಿಯೊಂದಿಗೆ ಸಂಬಂಧವಿಲ್ಲದ ಎರಡು ಘಟನೆಗಳನ್ನು ಹೋಲಿಕೆ ಮಾಡಿಕೊಂಡು ಧರ್ಮದ ಆಧಾರದಲ್ಲಿ ಸಂಬಂಧವನ್ನು ಕಲ್ಪಿಸಿ, ತನ್ನ ಫೇಸ್ ಬುಕ್ ಖಾತೆಯಲ್ಲಿ ಪೊಲೀಸರ ವಿರುದ್ಧ ಸುಳ್ಳು ಸುದ್ದಿ ಹರಡಿದ್ದಾರೆ.
ಆಗಸ್ಟ್ 30 ರಂದು ರಿಯಾಜ್ ಕಡಂಬು ತನ್ನ ಫೇಸ್ಬುಕ್ ಖಾತೆಯಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಸುಳ್ಳು ಸುದ್ದಿಯನ್ನು ಪ್ರಕಟಿಸಿ, ಜನರನ್ನು ಅಪರಾಧ ಎಸಗುವಂತೆ ಪ್ರೇರೇಪಿಸಿ ಜಾತಿ, ಧರ್ಮದ ಆಧಾರದ ಮೇಲೆ ವೈರತ್ವ, ವೈಮನಸ್ಸು ಬೆಳೆಸಲು ಪ್ರಯತ್ನಿಸಿದ್ದಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ. ಕ್ರ : 134/2025 ಕಲಂ:353(2) BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ದ.ಕ. ಎಸ್ಪಿ ಕಚೇರಿ ಪ್ರಕಟಣೆ ತಿಳಿಸಿದೆ.
A shocking twist has emerged in Bantwal taluk after a man who lodged a complaint claiming he was attacked in an attempted murder has himself landed in jail for filing a false case. Ummar Farooq (48), a resident of Nandavar in Sajipa Munnur village, had lodged a complaint on June 13 at Bantwal Rural Police Station alleging that unidentified miscreants had assaulted him and attempted to kill him.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm