ಬ್ರೇಕಿಂಗ್ ನ್ಯೂಸ್
            
                        14-09-25 10:55 pm Mangalore Correspondent ಕರಾವಳಿ
            ಬೆಳ್ತಂಗಡಿ, ಸೆ.14 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆ ನಡೆಸುತ್ತಿರುವಾಗಲೇ ಸೌಜನ್ಯಾಳನ್ನು ಆಕೆಯ ಮಾವ ವಿಠಲ ಗೌಡನೇ ಕೊಲೆ ಮಾಡಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದ ಮೈಸೂರಿನ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧವೇ ಬೆಳ್ತಂಗಡಿ ಪೊಲೀಸ್ ಠಾಣೆಗೆ ಇಂದಬೆಟ್ಟು ಗ್ರಾಮದ ವೆಂಕಪ್ಪ ಕೋಟ್ಯಾನ್ ಎಂಬವರು ದೂರು ನೀಡಿದ್ದಾರೆ.
ಇತ್ತೀಚೆಗೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದಿದ್ದ ಮೈಸೂರಿನ ಸ್ನೇಹಮಯಿ ಕೃಷ್ಣ, ವಿಠಲ ಗೌಡನ ಬಗ್ಗೆ ಅನುಮಾನ ಇದೆ. ಆತನೇ ಸೌಜನ್ಯಾಳನ್ನು ಕೊಲೆಗೈದಿರುವ ಶಂಕೆಯಿದೆ ಎಂದು ಹೇಳಿ ಹಲವು ಅನುಮಾನಗಳನ್ನು ಪಟ್ಟಿ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ಮಾಧ್ಯಮಕ್ಕೂ ಅದೇ ರೀತಿಯ ಹೇಳಿಕೆ ನೀಡಿದ್ದರು. 12 ವರ್ಷಗಳ ಬಳಿಕ ಈ ರೀತಿಯ ಆರೋಪ ಮಾಡಿ ಸೌಜನ್ಯಾ ಪರ ಹೋರಾಟದ ಕಿಚ್ಚನ್ನು ಕುಂದಿಸುವ ಯತ್ನ ಮಾಡಿದ್ದರು.
ಇದೀಗ ಸ್ನೇಹಮಯಿ ವಿರುದ್ಧವೇ ಪೊಲೀಸರಿಗೆ ದೂರು ಕೊಟ್ಟಿದ್ದು, ಈ ರೀತಿ ದೂರು ಕೊಟ್ಟು ಸೌಜನ್ಯಾ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು ದಾರಿ ತಪ್ಪಿಸುವ ಯತ್ನ ಮಾಡಿದ್ದಾರೆ. ಪಿತೂರಿ, ದುರುದ್ದೇಶ ಇಟ್ಟುಕೊಂಡು ದೂರು ನೀಡಿದ್ದಾರೆ. ಅವರನ್ನು ಠಾಣೆಗೆ ಕರೆಸಿ ಕೂಲಂಕಷವಾಗಿ ವಿಚಾರಣೆ ನಡೆಸಬೇಕು ಹಾಗೂ ದೂರು ನೀಡಲು ಪ್ರೇರೇಪಿಸಿದವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ವೆಂಕಪ್ಪ ಕೋಟ್ಯಾನ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾಳನ್ನು 2012ರ ಅಕ್ಟೋಬರ್ 9ರಂದು ಸಂಜೆ ವೇಳೆಗೆ ಅಪಹರಿಸಿ ಅತ್ಯಾಚಾರಗೈದು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಆಕೆಯ ಶವ ಮರುದಿನ ಬೆಳಗ್ಗೆ ಮಣ್ಣಸಂಕ ಎಂಬಲ್ಲಿನ ಕಾಡಿನಲ್ಲಿ ಪತ್ತೆಯಾಗಿತ್ತು.
ಇದೀಗ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತ ಆರೋಪದ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದ್ದು ಅಧಿಕಾರಿಗಳು ಘಟನೆ ಬಗ್ಗೆ ಹಲವು ಆಯಾಮದಲ್ಲಿ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಕಳೆದೊಂದು ವಾರದಿಂದ ಗಿರೀಶ್ ಮಟ್ಟಣ್ಣವರ್, ಜಯಂತ ಟಿ., ವಿಠಲ ಗೌಡ, ಪ್ರದೀಪ್ ಗೌಡ ಹಾಗೂ ಯೂಟ್ಯೂಬರ್ ಅಭಿಷೇಕ್ ಅವರ ವಿಚಾರಣೆ ನಡೆಸಲಾಗಿದೆ. ವಿಠಲ ಗೌಡ ಜೊತೆಗೆ ಕಾಡಿನಿಂದ ತಲೆಬುರುಡೆ ತಂದಿದ್ದ ಎನ್ನಲಾದ ಪ್ರದೀಪ್ ಗೌಡ ಕೋರ್ಟಿನಲ್ಲಿ ಸಾಕ್ಷಿ ಹೇಳಿಕೆಯನ್ನೂ ನೀಡಿದ್ದಾರೆ.
            
            
            In a surprising twist in the ongoing investigation into the Sowjanya murder case, a police complaint has been filed against Mysuru-based social activist Snehamayi Krishna, who had recently accused Sowjanya’s uncle Vittal Gowda of being involved in the crime.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm