ಬ್ರೇಕಿಂಗ್ ನ್ಯೂಸ್
16-09-25 06:51 pm Mangalore Correspondent ಕರಾವಳಿ
ಮಂಗಳೂರು, ಸೆ.16 : ಕರಾವಳಿಯಲ್ಲಿ ಕೆಂಪು ಕಲ್ಲು ಸಿಗದೆ ಕಟ್ಟಡ ಕಾರ್ಮಿಕರು, ಮನೆ ಕಟ್ಟುವವರು ತೀವ್ರ ತೊಂದರೆಗೀಡಾಗಿದ್ದಾರೆ, ಆದರೆ ಕಾಂಗ್ರೆಸ್ ಸರಕಾರ ಈ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಬೆಳಗ್ಗಿನಿಂದ ಸಂಜೆಯ ವರೆಗೂ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಸ್ಪೀಕರ್ ಯುಟಿ ಖಾದರ್ ಅವರ ನಿರ್ಲಕ್ಷ್ಯದ ಬಗ್ಗೆ ಬಿಜೆಪಿ ಶಾಸಕ, ಸಂಸದರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಜಿಲ್ಲೆಯ ಜ್ವಲಂತ ಸಮಸ್ಯೆಯಿಂದ ಜನರು ಕಂಗೆಟ್ಟಿದ್ದರೆ, ಇದೇ ಭಾಗದವರಾದ ಸ್ಪೀಕರ್ ಯುಟಿ ಖಾದರ್ ವಿದೇಶ ಪ್ರವಾಸದಲ್ಲಿದ್ದಾರೆ. ಅವರಿಗೆ ಜಿಲ್ಲೆಯ ಸಮಸ್ಯೆ ಬಗೆಹರಿಸೋದು ಬೇಕಾಗಿಲ್ಲ. ಸ್ಪೀಕರ್ ಕಲ್ಲಿನ ಸಮಸ್ಯೆ ಬಗೆಹರಿಸೋದು ಬಿಟ್ಟು ಈಗ ಸ್ಪೀಕರ್ (ಧ್ವನಿವರ್ಧಕ) ಕೂಡ ಬಂದ್ ಆಗುವಂತಾಗಿದೆ. ಉಸ್ತುವಾರಿ ಸಚಿವರು ತಿಂಗಳಿಗೆ ಒಮ್ಮೆ ಬಂದರೆ ಬಂದರು, ಇಲ್ಲದಿದ್ದರೆ ಇಲ್ಲ. ಯಾವಾಗಲೊಮ್ಮೆ ಬರುವುದರಿಂದ ಬಾವ ಬಂದರು ಎನ್ನುವ ಸಿನಿಮಾ ಹಾಡಿನಂತೆ ಗುಂಡುರಾವ್ ಬಂದರು ಅಂತ ಜನ ಹಾಡು ಹೇಳುವ ಸ್ಥಿತಿಯಾಗಿದೆ ಎಂದು ವ್ಯಂಗ್ಯವಾಡಿದರು.






ವೇದವ್ಯಾಸ ಕಾಮತ್ ಮಾತನಾಡಿದ ಬೆನ್ನಲ್ಲೇ ಗುಂಡೂರಾಯರನ್ನು ಅಣಕಿಸಿ, ಬಾವ ಬಂದರು ಅನ್ನುವ ಹಾಡಿನ ಸೊಗಡಿನೊಂದಿಗೆ ಪದ್ಯವನ್ನೇ ರಚಿಸಿ ಹಾಡಿದರು. ಬಿಜೆಪಿ ವಕ್ತಾರ ಅರುಣ್ ಶೇಟ್ ಹಾಡು ರಚಿಸಿ ಸ್ವತಃ ಹಾಡಿ ಸೇರಿದ್ದ ಕಾರ್ಯಕರ್ತರನ್ನು ಹುರಿದುಂಬಿಸಿದರು. ಬಂದರೋ ಬಂದರೋ ಗುಂಡೂರಾಯರು, ಹೋದರೋ ಹೋದರೋ ಗುಂಡುರಾಯರು, ಬೆಂಗಳೂರು ಹೋದರೆ ಕಾಣದೇ ಮಾಯವಾದರು ಎನ್ನುತ್ತಾ ಹಾಡು ಕಟ್ಟಿದ್ದು ಸೇರಿದ್ದ ಜನರನ್ನು ರಂಜಿಸಿತ್ತು.
ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಮರಳು ಮತ್ತು ಕೆಂಪು ಕಲ್ಲಿನ ಸಮಸ್ಯೆಯಿಂದಾಗಿ ಜನರು ತೀವ್ರ ರೀತಿಯಲ್ಲಿ ಬಳಲುತ್ತಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ ಇದಕ್ಕೂ ತಮಗೂ ಸಂಬಂಧ ಇಲ್ಲ ಎನ್ನುವಂತಿದ್ದಾರೆ. ಉಸ್ತುವಾರಿ ಸಚಿವರು ಪ್ರತ್ಯೇಕ ನೀತಿ ಮಾಡುವುದಾಗಿ ಹೇಳಿ ಮೂರು ತಿಂಗಳಾಯ್ತು. ಇವರ ನಿರ್ಲಕ್ಷ್ಯದಿಂದಾಗಿ ಕಟ್ಟಡ ನಿರ್ಮಾಣ ವಲಯದಲ್ಲಿ ಕೋಟ್ಯಂತರ ರೂ. ಆದಾಯ ನಷ್ಟವಾಗಿದೆ. ಇದಕ್ಕೆ ಯಾರು ಹೊಣೆ, ಜನರ ಸಮಸ್ಯೆಗೆ ಸ್ಪಂದಿಸದ ಉಸ್ತುವಾರಿ ಯಾಕಿರಬೇಕು ಎಂದು ಪ್ರಶ್ನಿಸಿದರು.
ಬೆಳಗ್ಗೆ ಹಾರೆ, ಗುದ್ದಲಿ, ಖಾಲಿ ಬುಟ್ಟಿ ತಂದಿದ್ದು ಕಾರ್ಮಿಕರು ಕೆಲಸ ಇಲ್ಲದೆ ಕಂಗಾಲಾಗಿರುವುದನ್ನ ಸಂಕೇತವಾಗಿಸಿ ಪ್ರತಿಭಟನೆ ಉದ್ಘಾಟನೆ ಮಾಡಲಾಗಿತ್ತು. ಸಂಜೆಯ ವೇಳೆಗೆ ಸ್ಥಳಕ್ಕೆ ಬಂದ ಅಪರ ಜಿಲ್ಲಾಧಿಕಾರಿಗೆ ತುರ್ತಾಗಿ ಕೆಂಪು ಕಲ್ಲು ಸಮಸ್ಯೆ ಬಗೆಹರಿಸಬೇಕೆಂದು ಮನವಿ ನೀಡಲಾಯಿತು. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಕಿಶೋರ್ ಕುಮಾರ್, ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ ಮತ್ತಿತರರು ಇದ್ದರು.
With the acute shortage of red laterite stone affecting construction workers and builders across the coastal region, the Dakshina Kannada District BJP staged a massive day-long protest in front of the Mini Vidhana Soudha in Mangaluru, accusing the Congress-led state government of gross negligence.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm