ಬ್ರೇಕಿಂಗ್ ನ್ಯೂಸ್
17-09-25 10:06 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಮಂಗಳೂರಿನ ಹೆಸರಾಂತ ಹೊಟೇಲ್ ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ ಪೂಂಜಾ ಅಲ್ಲಿನ ಒಬ್ಬ ಡಾನ್ ಗೆ ಕಾರು ಚಾಲಕನಾಗಿದ್ದರು. ಆನಂತರ, 1986ರಲ್ಲಿ ಮಂಗಳೂರಿಗೆ ಬಂದು ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ನಿರ್ಮಾಣ ಮಾಡಿದ್ದರು. ಆಗ ಇದ್ದ ಮೋತಿ ಮಹಲ್ ಬಿಟ್ಟರೆ ಅದ್ದೂರಿ ಮತ್ತು ಬೃಹತ್ ಹೊಟೇಲ್ ಎಂದು ಪೂಂಜಾ ಹೊಟೇಲ್ ಹೆಸರು ಮಾಡಿತ್ತು.


ಆರಂಭದಲ್ಲಿ ಮುಂಬೈ ನಂಟು ಇದ್ದರೂ ಆನಂತರ ಅಲ್ಲಿನ ನಂಟನ್ನು ಬಿಟ್ಟು ಮಂಗಳೂರಿನಲ್ಲೇ ಇದ್ದರು. ಸಣ್ಣ ವಯಸ್ಸಿನಲ್ಲೇ ಮುಂಬೈ ತೆರಳಿದ್ದರಿಂದ ಅವರಿಗೆ ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಹಿಂದಿ, ಮರಾಠಿ, ತುಳು ಮಾತ್ರ ಗೊತ್ತಿತ್ತು. ಮುಂಬೈ, ಮಂಗಳೂರಿನ ಹೆಚ್ಚಿನ ಪೊಲೀಸ್ ಅಧಿಕಾರಿಗಳ ಸಂಪರ್ಕ ಹೊಂದಿದ್ದರು. 40 ವರ್ಷಗಳ ಹಿಂದೆ ಮುಂಬೈ ಭೂಗತ ಜಗತ್ತಿನಲ್ಲಿ ಡಾನ್ ಆಗಿದ್ದ ಶರದ್ ಶೆಟ್ಟಿ ಇವರ ಖಾಸಾ ಭಾವನಾಗಿದ್ದು, ಅದೇ ನಂಟಿನಲ್ಲಿ ಮಂಗಳೂರಿನಲ್ಲಿ ಹೊಟೇಲ್ ವ್ಯವಹಾರ ಆರಂಭಿಸಿದ್ದರು. ಮಂಗಳೂರಿಗೆ ಬಂದ ಬಳಿಕವೇ ಅವರಿಗೆ ಮದುವೆಯಾಗಿತ್ತು ಎಂದು ಅವರ ಬಗ್ಗೆ ತಿಳಿದವರು ಹೇಳುತ್ತಾರೆ. ಅವರ ಮಕ್ಕಳು ಈಗ ಹೊಟೇಲ್ ನೋಡಿಕೊಳ್ಳುತ್ತಿದ್ದಾರೆ.
Prabhakar Poonja (72), the well-known owner of Poonja International Hotel in Hampankatta, Mangaluru, passed away at a private hospital on Tuesday after a brief illness. He hailed from Bantwal and was a prominent figure in the city’s hospitality industry.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm