ಬ್ರೇಕಿಂಗ್ ನ್ಯೂಸ್
18-09-25 09:09 pm Mangalore Correspondent ಕರಾವಳಿ
ಮಂಗಳೂರು, ಸೆ.18 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೈನಿಕರ/ಮಾಜಿ ಸೈನಿಕರ/ಸ್ವಾತಂತ್ರ್ಯ ಹೋರಾಟಗಾರರಿಗೆ ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ಒದಗಿಸಲು ನಿರ್ಲಕ್ಷ್ಯ ತೋರಿದ ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರ್ ಮತ್ತು ಉಪ ವಿಭಾಗಾಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲಿಸಿದೆ.
ಸ್ವಾತಂತ್ರ್ಯ ಯೋಧರು ಮತ್ತು ಅವರ ಅವಲಂಬಿತರು ಹಾಗೂ ಹುತಾತ್ಮ ಯೋಧರು ಮತ್ತು ಅವರ ಅವಲಂಬಿತರಿಗೆ ಸಂವಿಧಾನಾತ್ಮಕವಾಗಿ ನೀಡಬೇಕಾದ ಪರಿಹಾರವನ್ನು (ಜಮೀನು) ಕಲ್ಪಿಸುವಲ್ಲಿ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಅದಕ್ಕೆ ಹೊಣೆಗಾರರನ್ನಾಗಿಸಿ ಪ್ರಕರಣ ದಾಖಲಿಸಲಾಗಿದೆ.
ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಕಾಲದಲ್ಲಿ ಕಲ್ಪಿಸಲು ಸರ್ಕಾರದ ವಿವಿಧ ಇಲಾಖೆಗಳಿಂದ ಪೂರಕ ಸ್ಪಂದನೆ ದೊರೆಯದೆ, ಅಧಿಕಾರಿಗಳು ವಿನಾಕಾರಣ ವಿಳಂಬಿಸಿರುವುದು ಲೋಕಾಯುಕ್ತ ಕಾಯ್ದೆಯಡಿ "ದುರಾಡಳಿತ" ವ್ಯಾಪ್ತಿಗೆ ಒಳಪಡುವುದರಿಂದ ಲೋಕಾಯುಕ್ತ ಸಂಸ್ಥೆಯಿಂದ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಳ್ಳಲಾಗಿದೆ. ಸರ್ಕಾರದ ಆದೇಶಗಳು, ಸುತ್ತೋಲೆಗಳು ಹಾಗೂ ಕಾನೂನಿನ್ವಯ ನಿವೃತ್ತ ಯೋಧರಿಗೆ, ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನೀಡುವಂತೆ ಉಚ್ಛ ನ್ಯಾಯಾಲಯ ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶಗಳು ಇದ್ದರೂ ಸರ್ಕಾರಿ ನೌಕರರು ತಮ್ಮ ಕರ್ತವ್ಯ ಪ್ರಜ್ಞೆಯನ್ನು ಮರೆತು ಸೌಲಭ್ಯಗಳನ್ನು ನೀಡಲು ಕ್ರಮ ಕೈಗೊಳ್ಳದೆ ತೊಂದರೆ ನೀಡುತ್ತಿರುವುದು ಕಂಡುಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೃತ್ತರಾದ ಯೋಧರಿಗೆ ಹಾಗೂ ಅವಲಂಬಿತರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನಿಗದಿತ ಸಮಯದಲ್ಲಿ ನೀಡದೆ ಸರ್ಕಾರಿ/ಸಾರ್ವಜನಿಕ ನೌಕರ/ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿರುವುದು ಹಾಗೂ ಕರ್ತವ್ಯಲೋಪ ಎಸಗುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಆದ್ದರಿಂದ, ದೂರಿನಲ್ಲಿ ಹಿತಾಸಕ್ತಿ ಇರುವುದರಿಂದ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ಮಂಗಳೂರು ಮತ್ತು ಪುತ್ತೂರು ಉಪ ವಿಭಾಗಾಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.
The Lokayukta has registered a suo motu complaint against all Tahsildars and Sub-Divisional Officers (SDOs) in Dakshina Kannada district for allegedly neglecting to provide government benefits due to soldiers, ex-servicemen, freedom fighters, and their dependents.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am