ಬ್ರೇಕಿಂಗ್ ನ್ಯೂಸ್
18-09-25 11:11 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.18 : ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ನಿನ್ನೆ ಅಸ್ಥಿಪಂಜರದ ಜೊತೆಗೆ ಐಡಿ ಕಾರ್ಡ್ ಒಂದು ಸಿಕ್ಕಿತ್ತು. ಅದರ ಮೂಲ ಪತ್ತೆಹಚ್ಚಿದಾಗ, ಅದು ಕೊಡಗು ಜಿಲ್ಲೆಯ ಪೊನ್ನಂಪೇಟೆಯ ವೃದ್ಧ ಯು.ಬಿ.ಅಯ್ಯಪ್ಪ ಎಂಬವರದ್ದು ಎಂದು ಪತ್ತೆಯಾಗಿದೆ.
ಏಳು ವರ್ಷಗಳ ಹಿಂದೆ ಮೈಸೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋದವರು ನಾಪತ್ತೆಯಾಗಿರುವ ಕುರಿತು ಶ್ರೀಮಂಗಲದ ಕುಟ್ಟ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಹೀಗಾಗಿ ಸಿಕ್ಕ ಅಸ್ಥಿಪಂಜರ ಸಹ ಅಯ್ಯಪ್ಪನವರದ್ದೇ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಅಯ್ಯಪ್ಪ ನಾಪತ್ತೆಯಾದ ಬಗ್ಗೆ ಅವರ ಪುತ್ರ ಜೀವನ್ ನೀಡಿದ ದೂರಿನಂತೆ 15-06-2017ರಂದು ಕುಟ್ಟ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆಸ್ಪತ್ರೆಗೆಂದು ಬೆಳಗ್ಗೆ 6 ಗಂಟೆಗೆ ಮನೆಯಿಂದ ತೆರಳಿದ್ದ ಅಯ್ಯಪ್ಪ ನಾಪತ್ತೆಯಾಗಿದ್ದರು. ಅದೇ ದಿನ ಬೆಳಗ್ಗೆ 11.30ರ ನಂತರ ಮೊಬೈಲ್ ಸ್ವಿಚ್ ಅಫ್ ಆಗಿತ್ತು. ಬಳಿಕ ಇವರ ಕುಟುಂಬ ಒಂದು ವಾರ ಕಾಲ ಹುಡುಕಾಡಿತ್ತು. ಕೊನೆಗೆ ಅಯ್ಯಪ್ಪ ಸುಳಿವು ಸಿಗದಿದ್ದಾಗ ಜೀವನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದರೂ ಅಯ್ಯಪ್ಪ ಅವರ ಸುಳಿವು ಸಿಕ್ಕಿರಲಿಲ್ಲ. ಇದೀಗ ಎಂಟು ವರ್ಷಗಳ ಬಳಿಕ ಧರ್ಮಸ್ಥಳ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಯ್ಯಪ್ಪ ಅವರ ಐಡಿ ಕಾರ್ಡ್ ಪತ್ತೆಯಾಗಿದೆ. ಬಂಗ್ಲೆಗುಡ್ಡದಲ್ಲಿ ಪತ್ತೆಯಾದ ಅಸ್ಥಿಪಂಜರ ಇವರದ್ದೇನಾ ಎಂಬ ಬಗ್ಗೆ ಸಂಬಂಧಿಕರ ಜೊತೆಗೆ ಡಿಎನ್ಎ ಮಾಡಿದರಷ್ಟೇ ತಿಳಿಯಬಹುದಾಗಿದೆ. ಗುರುವಾರ ಇಡೀ ದಿನ ಬಂಗ್ಲೆಗುಡ್ಡೆ ಅರಣ್ಯದಲ್ಲಿ ಶೋಧ ಕಾರ್ಯ ನಡೆದಿದ್ದು ಮತ್ತಷ್ಟು ಅಸ್ಥಿಪಂಜರಗಳು ಸಿಕ್ಕಿವೆ.
ಪ್ರಥಮ ಹಂತದಲ್ಲಿ ದೂರುದಾರ ಚಿನ್ನಯ್ಯನ ಉಪಸ್ಥಿತಿಯಲ್ಲಿ ಬಂಗ್ಲೆಗುಡ್ಡೆ ಪರಿಸರ ಸೇರಿ 17 ಸ್ಥಳಗಳಲ್ಲಿ ಹೊಂಡಗಳನ್ನು ತೋಡಿ ಶೋಧ ಕಾರ್ಯ ನಡೆಸಲಾಗಿತ್ತು. ಆದರೆ ಆಗ ಹೆಚ್ಚಿನ ಸಾಕ್ಷ್ಯ ಸಿಕ್ಕಿರಲಿಲ್ಲ. ಈಗ ಬಂಗ್ಲೆಗುಡ್ಡೆ ಕಾಡಿನಲ್ಲಿ ಎಸ್ಐಟಿ ತನಿಖೆ ನಡೆಸಿದಾಗ ಹಲವು ಕಡೆ ಶವಗಳ ಅವಶೇಷ ಪತ್ತೆಯಾಗಿದೆ.
ಸುಜಾತ ಭಟ್ ಪ್ರಕರಣದಲ್ಲಿ ವಿಜಯ್ ಹೇಳಿಕೆ
ಇದೇ ವೇಳೆ, ತನ್ನ ಮಗಳು ಅನನ್ಯಾ ಕಾಣೆಯಾಗಿದ್ದಾರೆಂದು ಹೇಳಿ ಯುವತಿಯೊಬ್ಬಳ ಫೋಟೊ ತೋರಿಸಿದ್ದ ಸುಜಾತಾ ಭಟ್ ಪ್ರಕರಣದಲ್ಲಿ, ಆ ಫೋಟೊದಲ್ಲಿದ್ದ ಕೊಡಗು ಮೂಲದ ಯುವತಿ ವಾಸಂತಿಯ ಸೋದರ ವಿಜಯ್ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದು ಹೇಳಿಕೆ ನೀಡಿದ್ದಾರೆ. ಸುಜಾತಾ ಭಟ್ ಬೆಂಗಳೂರಿನ ವಾಸಂತಿ ಎಂಬವರ ಫೋಟೋವನ್ನು ಅನನ್ಯಾ ಭಟ್ ಎಂದು ಬಿಂಬಿಸಿ ಮಾಧ್ಯಮಗಳಿಗೆ ತೋರಿಸಿದ್ದರು. ಆದರೆ ವಾಸಂತಿ ಅವರು 15 ವರ್ಷಗಳ ಹಿಂದೆ ಮೃತಪಟ್ಟಿದ್ದಾರೆ ಎಂದು ಆಕೆಯ ಸೋದರ ಕೊಡಗು ಮೂಲದ ವಿಜಯ್ ಹೇಳಿಕೆ ನೀಡಿದ್ದರು. ಇದೀಗ ಗುರುವಾರ ಎಸ್ಐಟಿ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.
A skeleton was discovered in the Banglegudde forest near the Netravathi bathing ghat on Wednesday, along with an ID card that police traced back to U.B. Aiyappa, an elderly resident of Ponnampet in Kodagu district.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am