ಬ್ರೇಕಿಂಗ್ ನ್ಯೂಸ್
26-12-20 07:10 pm Mangaluru Crime Correspondent ಕರಾವಳಿ
ಮಂಗಳೂರು, ಡಿ.26: ಮಂಗಳೂರಿನ ಗೋಡೆ ಬರಹದ ಕೃತ್ಯದಲ್ಲಿ ಹೈಲೆವೆಲ್ ನೆಟ್ವರ್ಕ್ ಕೈಯಾಡಿಸಿದೆ ಎಂಬ ಮಾಹಿತಿ ಇತ್ತು. ಇದೀಗ ಉನ್ನತ ಪೊಲೀಸ್ ಮೂಲಗಳಿಂದ ಮಹತ್ವದ ಮಾಹಿತಿ ಸೋರಿಕೆಯಾಗಿದೆ. ಎನ್ಐಎ ಘೋಷಿಸಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಶಂಕಿತ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮಂಗಳೂರಿನ ಗೋಡೆ ಬರಹ ಕೃತ್ಯದ ಹಿಂದಿರೋ ಮಾಸ್ಟರ್ ಮೈಂಡ್ ಅನ್ನೋ ವಿಚಾರ ಬೆಳಕಿಗೆ ಬಂದಿದೆ.
ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಕಳೆದ ಡಿ.6ರಂದು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಮಾಝ್ ಮುನೀರ್ ಅಹ್ಮದ್ (21) ಮತ್ತು ಬಿಕಾಂ ಪದವೀಧರನಾಗಿದ್ದ ಮೊಹಮ್ಮದ್ ಶಾರೀಕ್ (22) ಎಂಬವರನ್ನು ಬಂಧಿಸಿದ್ದರು. ಆನಂತರ ಎರಡು ವಾರಗಳಿಂದ ಆರೋಪಿಗಳಿಬ್ಬರನ್ನು ಉನ್ನತ ಮಟ್ಟದ ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದು, ಇಬ್ಬರಿಗೂ ಅಬ್ದುಲ್ ಮತೀನ್ ತಾಹಾ ಜೊತೆಗೆ ಲಿಂಕ್ ಇರುವ ಬಗ್ಗೆ ವಿಚಾರಣೆಯಲ್ಲಿ ಪತ್ತೆ ಮಾಡಿದ್ದಾರೆ.


ಮಂಗಳೂರಿನಲ್ಲಿ ಕಳೆದ ಬಾರಿ ನಡೆದಿದ್ದ ಗೋಲಿಬಾರ್ ಪ್ರಕರಣಕ್ಕೆ ಡಿ.19ರಂದು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಉಗ್ರರ ಪರವಾದ ಗೋಡೆ ಬರಹಗಳನ್ನು ಬರೆಯಲು ಅಬ್ದುಲ್ ಮತೀನ್ ಪ್ರೇರಣೆ ನೀಡಿದ್ದ. ಈ ಮೂಲಕ ಮಂಗಳೂರಿನ ಜನರಲ್ಲಿ ಭಯ, ಆತಂಕ ಮೂಡಿಸಲು ಪ್ಲಾನ್ ಹಾಕಿದ್ದ. ಮೊಹಮ್ಮದ್ ಶಾರೀಕ್ ಮತ್ತು ಮುನೀರ್ ಅಹ್ಮದ್ ಮೂಲಕ ಈ ಕೆಲಸವನ್ನು ಮಾಡಿಸಿದ್ದಾನೆಂಬ ಮಾಹಿತಿ ಲಭ್ಯವಾಗಿದೆ. ಗೋಡೆ ಬರಹದಲ್ಲಿ ಲಷ್ಕರ್ ಜಿಂದಾಬಾದ್ ಎನ್ನುವ ಘೋಷಣೆಯ ಜೊತೆಗೆ ಬಲಪಂಥೀಯರನ್ನು ನೋಡಿಕೊಳ್ಳಲು ಐಸಿಸ್ ಉಗ್ರರನ್ನು ಕರೆಸಬೇಕಾದೀತು ಎಂಬ ರೀತಿಯ ಎಚ್ಚರಿಕೆಯನ್ನು ಬರೆಯಲಾಗಿತ್ತು.

ಯಾರೀತ ಅಬ್ದುಲ್ ಮತೀನ್ ತಾಹಾ ?
ಅಬ್ದುಲ್ ಮತೀನ್ ಅಹ್ಮದ್ ತಾಹ ಕೂಡ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವನೇ.. ತೀರ್ಥಹಳ್ಳಿ ತಾಲೂಕಿನ ಫಿಶ್ ಮಾರ್ಕೆಟ್ ರಸ್ತೆಯ ಸೊಪ್ಪುಗುಡ್ಡೆ ಎಂಬಲ್ಲಿನ ನಿವಾಸಿ. ಈಗ ಗೋಡೆ ಬರಹ ಬರೆದು ಸಿಕ್ಕಿಬಿದ್ದಿರುವ ಮಾಝ್ ಮುನೀರ್ ಅಹ್ಮದ್ ಮತ್ತು ಮೊಹಮ್ಮದ್ ಶಾರೀಕ್ ಕೂಡ ತೀರ್ಥಹಳ್ಳಿಯವರೇ. ಬೆಂಗಳೂರಿನ ಐಸಿಸ್ ಪ್ರೇರಿತ ಸಂಘಟನೆ ಅಲ್ ಹಿಂದ್ ಟ್ರಸ್ಟ್ ಪ್ರಕರಣದಲ್ಲಿ ಆರೋಪಿಯಾಗಿರುವ ಅಬ್ದುಲ್ ಮತೀನ್ ಸದ್ಯಕ್ಕೆ ತಲೆಮರೆಸಿಕೊಂಡಿದ್ದು ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದೂ ಹೇಳಲಾಗುತ್ತಿದೆ. ಆದರೆ, ಈತ ತಲೆಮರೆಸಿಕೊಂಡಿದ್ದರೂ ಶಿವಮೊಗ್ಗ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಕೆಲವರ ಜೊತೆ ಸಂಪರ್ಕ ಇರಿಸಿಕೊಂಡಿದ್ದಾನೆಂಬ ಮಾಹಿತಿ ಎನ್ಐಐ ಅಧಿಕಾರಿಗಳಲ್ಲಿ ಇದೆ.

ಮತೀನ್ ಬಗ್ಗೆ ಮಾಹಿತಿ ಕೊಟ್ಟರೆ ಮೂರು ಲಕ್ಷ !
ಅಬ್ದುಲ್ ಮತೀನ್ ತಾಹಾ ತಲೆಮರೆಸಿಕೊಂಡ ಬಳಿಕ ಎನ್ಐಎ ಅಧಿಕಾರಿಗಳು ದೆಹಲಿ, ಚೆನ್ನೈ, ಬೆಂಗಳೂರು ಮುಂತಾದೆಡೆ ಹುಡುಕಾಟ ನಡೆಸಿದ್ದಾರೆ. ಈ ನಡುವೆ, ಕಳೆದ 2020ರ ಮೇ ತಿಂಗಳಲ್ಲಿ ಅಬ್ದುಲ್ ಮತೀನ್ ಬಗ್ಗೆ ಮಾಹಿತಿ ಕೊಟ್ಟವರಿಗೆ ಮೂರು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪ್ರಕಟಿಸಿದ್ದಾರೆ. 2014ರಲ್ಲಿ ಚೆನ್ನೈನಲ್ಲಿ ಸುರೇಶ್ ಎಂಬ ಆರೆಸ್ಸೆಸ್ ನಾಯಕನ ಹತ್ಯೆ ನಡೆದಿತ್ತು. ಪ್ರಕರಣದಲ್ಲಿ 12ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದು, ಈ ಪೈಕಿ ಮೆಹಬೂಬ್ ಪಾಷಾ ಮತ್ತು ಖಾಜಾ ಮೊಹಿಯುದ್ದೀನ್ ಜಲಾಲ್ ಎಂಬವರು ತಮಗೆ ಅಬ್ದುಲ್ ಮತೀನ್ ಜೊತೆಗೆ ಲಿಂಕ್ ಇರುವ ಬಗ್ಗೆ ಬಾಯ್ಬಿಟ್ಟಿದ್ದರು.

2019ರಲ್ಲಿ ಬೆಂಗಳೂರಿನ ಬನ್ನೇರುಘಟ್ಟದ ಗುರಪ್ಪನಪಾಳ್ಯದಲ್ಲಿ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಅಬ್ದುಲ್ ಮತೀನ್ ಸಹಚರರಾಗಿದ್ದ ಅಬ್ದುಲ್ ಸಲೀಂ ಮತ್ತು ಜಾಯೇದ್ ಎಂಬವರನ್ನು ಬಂಧಿಸಿದ್ದರು. ಈ ಮೂವರೂ ಖಾಸಾ ದೋಸ್ತ್ ಗಳಾಗಿದ್ದು ಬೆಂಗಳೂರಿನಲ್ಲಿ ಅಲ್ ಹಿಂದ್ ಟ್ರಸ್ಟ್ ಎನ್ನುವ ಹೆಸರಿನಲ್ಲಿ ಚಟುವಟಿಕೆ ಮಾಡಿಕೊಂಡಿದ್ದರು. ಐಸಿಸ್ ನೆಟ್ವರ್ಕಿಗೆ ಯುವಕರನ್ನು ಸೇರಿಸಿಕೊಳ್ಳುವುದು, ಅದಕ್ಕಾಗಿ ಹಣದ ಸಹಾಯ ನೀಡುವುದು, ಯುವಕರನ್ನು ಸೇರಿಸಿ ಐಸಿಸ್ ನೆಟ್ವರ್ಕ್ ಬಗ್ಗೆ ಬ್ರೇನ್ ವಾಷ್ ಮಾಡೋ ಕೆಲಸವನ್ನು ಅಬ್ದುಲ್ ಮತೀನ್ ಮಾಡಿಕೊಂಡಿದ್ದ ಅನ್ನೋದು ತಿಳಿದುಬಂದಿತ್ತು. ಇದೇ ಕಾರಣಕ್ಕೆ ಈತನ ಪತ್ತೆಗಾಗಿ ರಾಷ್ಟ್ರೀಯ ತನಿಖಾ ದಳ ಬಹುಮಾನ ಘೋಷಣೆ ಮಾಡಿತ್ತು.
The most wanted fugitive terrorist of ISIS and SIMI, Abdul Matheen Ahmed Taahaa from Theerthahallli in Shivamogga, is reportedly after the pro-terror graffiti in Mangalore, said highly-placed sources.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am