ಬ್ರೇಕಿಂಗ್ ನ್ಯೂಸ್
22-09-25 01:51 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದೋಷಯುಕ್ತ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಿದ್ದ ಓಲಾ ಕಂಪೆನಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದ್ದು ವಾಹನ ಸರಿಪಡಿಸಿ ಕೊಡದಿದ್ದರೆ ಅದರ ಪೂರ್ತಿ ಮೊತ್ತವನ್ನು ಬಡ್ಡಿ ಸಹಿತ ಪಾವತಿಸಲು ಸೂಚಿಸಿದೆ.
ಮಂಗಳೂರಿನ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದರ ಉದ್ಯೋಗಿ ಉದಯ ಕುಮಾರ್ ಬಿ.ಸಿ. ಅವರು ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಿಂದ ವಾಹನವನ್ನು ಖರೀದಿಸಿದ್ದರು. ಓಲಾ ಸ್ಕೂಟರ್ಗೆ ಅವರು 1.17 ಲಕ್ಷ ರೂ.ಗಳನ್ನು ಪಾವತಿಸಿದ್ದರು. ಖರೀದಿಸಿದ ಒಂದು ತಿಂಗಳಿಗೆ ಸ್ಕೂಟರ್ ರಸ್ತೆ ಮಧ್ಯದಲ್ಲಿ ಹಠಾತ್ತಾಗಿ ನಿಲ್ಲುತ್ತಿತ್ತು. ಈ ಬಗ್ಗೆ ಗ್ರಾಹಕರು ದೂರು ನೀಡಿದಾಗ ಮೊದಲ ಬಾರಿಗೆ ಓಲಾ ಸಂಸ್ಥೆಯೇ ವಾಹನದ ದುರಸ್ತಿ ಮಾಡಿತ್ತು.
ಆದರೆ, ಸ್ಕೂಟರ್ ಇದೇ ಸಮಸ್ಯೆಯಿಂದ ಪದೇ ಪದೇ ರಸ್ತೆ ಮಧ್ಯೆ ನಿಲ್ಲುತ್ತಿದ್ದರಿಂದ ಗ್ರಾಹಕರು ತೀವ್ರ ಸಮಸ್ಯೆಗೆ ಗುರಿಯಾಗಿದ್ದರು. ರಿಪೇರಿ ನೆಪದಲ್ಲಿ ಓಲಾ ಸಂಸ್ಥೆ ಸ್ಕೂಟರ್ನ್ನು ತನ್ನ ಬಳಿ ಇರಿಸಿತ್ತಾದರೂ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಲೀಗಲ್ ನೋಟಿಸ್ ಜಾರಿಗೊಳಿಸಿದ ಗ್ರಾಹಕರು ಗ್ರಾಹಕರ ಪರಿಹಾರ ಆಯೋಗಕ್ಕೆ ಮೊರೆ ಹೋಗಿದ್ದರು. ಉದಯ್ ಕುಮಾರ್ ಸಲ್ಲಿಸಿದ ದೂರನ್ನು ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ, ಓಲಾ ಸಂಸ್ಥೆ ಸೇವಾ ನ್ಯೂನ್ಯತೆ ತೋರಿದೆ ಮತ್ತು ದೋಷಯುಕ್ತ ಉತ್ಪನ್ನವನ್ನು ಮಾರಾಟ ಮಾಡಿದೆ ಎಂದು ತೀರ್ಪು ನೀಡಿತು.
ಪ್ರಮಾದ ಎಸಗಿದ ಓಲಾ ಕಂಪೆನಿ 45 ದಿನದಲ್ಲಿ ಸ್ಕೂಟರ್ನ್ನು ಸಂಚಾರ ಯೋಗ್ಯವಾಗಿ ರಿಪೇರಿ ಮಾಡಿಕೊಡಬೇಕು. ತಪ್ಪಿದ್ದಲ್ಲಿ, 45 ದಿನದೊಳಗೆ ಶೇಕಡಾ 6ರ ಬಡ್ಡಿಯೊಂದಿಗೆ 1.17 ಲಕ್ಷ ರೂ. ಮರು ಪಾವತಿಸಲು ಆದೇಶ ನೀಡಿದೆ. ಇದರ ಜೊತೆಗೆ ಸೇವಾ ನ್ಯೂನತೆಗಾಗಿ ರೂ. 10,000/- ದಂಡ ಹಾಗೂ ಪ್ರಕರಣದ ವೆಚ್ಚವಾಗಿ ರೂ. 5000/-ವನ್ನು 45 ದಿನದೊಳಗೆ ಪಾವತಿಸಲು ಆದೇಶ ನೀಡಿದೆ. ಗ್ರಾಹಕರ ಪರವಾಗಿ ಮಂಗಳೂರಿನ ವಕೀಲರಾದ ತೇಜಕುಮಾರ್ ಡಿ.ಎಂ. ವಾದ ಮಂಡಿಸಿದ್ದರು.
The Dakshina Kannada District Consumer Court has ruled against Ola Electric Technologies Pvt. Ltd. for selling a defective electric scooter and failing to provide a permanent solution to repeated issues.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am