ಬ್ರೇಕಿಂಗ್ ನ್ಯೂಸ್
22-09-25 01:51 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದೋಷಯುಕ್ತ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಿದ್ದ ಓಲಾ ಕಂಪೆನಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದ್ದು ವಾಹನ ಸರಿಪಡಿಸಿ ಕೊಡದಿದ್ದರೆ ಅದರ ಪೂರ್ತಿ ಮೊತ್ತವನ್ನು ಬಡ್ಡಿ ಸಹಿತ ಪಾವತಿಸಲು ಸೂಚಿಸಿದೆ.
ಮಂಗಳೂರಿನ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದರ ಉದ್ಯೋಗಿ ಉದಯ ಕುಮಾರ್ ಬಿ.ಸಿ. ಅವರು ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನಿಂದ ವಾಹನವನ್ನು ಖರೀದಿಸಿದ್ದರು. ಓಲಾ ಸ್ಕೂಟರ್ಗೆ ಅವರು 1.17 ಲಕ್ಷ ರೂ.ಗಳನ್ನು ಪಾವತಿಸಿದ್ದರು. ಖರೀದಿಸಿದ ಒಂದು ತಿಂಗಳಿಗೆ ಸ್ಕೂಟರ್ ರಸ್ತೆ ಮಧ್ಯದಲ್ಲಿ ಹಠಾತ್ತಾಗಿ ನಿಲ್ಲುತ್ತಿತ್ತು. ಈ ಬಗ್ಗೆ ಗ್ರಾಹಕರು ದೂರು ನೀಡಿದಾಗ ಮೊದಲ ಬಾರಿಗೆ ಓಲಾ ಸಂಸ್ಥೆಯೇ ವಾಹನದ ದುರಸ್ತಿ ಮಾಡಿತ್ತು.
ಆದರೆ, ಸ್ಕೂಟರ್ ಇದೇ ಸಮಸ್ಯೆಯಿಂದ ಪದೇ ಪದೇ ರಸ್ತೆ ಮಧ್ಯೆ ನಿಲ್ಲುತ್ತಿದ್ದರಿಂದ ಗ್ರಾಹಕರು ತೀವ್ರ ಸಮಸ್ಯೆಗೆ ಗುರಿಯಾಗಿದ್ದರು. ರಿಪೇರಿ ನೆಪದಲ್ಲಿ ಓಲಾ ಸಂಸ್ಥೆ ಸ್ಕೂಟರ್ನ್ನು ತನ್ನ ಬಳಿ ಇರಿಸಿತ್ತಾದರೂ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಲೀಗಲ್ ನೋಟಿಸ್ ಜಾರಿಗೊಳಿಸಿದ ಗ್ರಾಹಕರು ಗ್ರಾಹಕರ ಪರಿಹಾರ ಆಯೋಗಕ್ಕೆ ಮೊರೆ ಹೋಗಿದ್ದರು. ಉದಯ್ ಕುಮಾರ್ ಸಲ್ಲಿಸಿದ ದೂರನ್ನು ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ, ಓಲಾ ಸಂಸ್ಥೆ ಸೇವಾ ನ್ಯೂನ್ಯತೆ ತೋರಿದೆ ಮತ್ತು ದೋಷಯುಕ್ತ ಉತ್ಪನ್ನವನ್ನು ಮಾರಾಟ ಮಾಡಿದೆ ಎಂದು ತೀರ್ಪು ನೀಡಿತು.
ಪ್ರಮಾದ ಎಸಗಿದ ಓಲಾ ಕಂಪೆನಿ 45 ದಿನದಲ್ಲಿ ಸ್ಕೂಟರ್ನ್ನು ಸಂಚಾರ ಯೋಗ್ಯವಾಗಿ ರಿಪೇರಿ ಮಾಡಿಕೊಡಬೇಕು. ತಪ್ಪಿದ್ದಲ್ಲಿ, 45 ದಿನದೊಳಗೆ ಶೇಕಡಾ 6ರ ಬಡ್ಡಿಯೊಂದಿಗೆ 1.17 ಲಕ್ಷ ರೂ. ಮರು ಪಾವತಿಸಲು ಆದೇಶ ನೀಡಿದೆ. ಇದರ ಜೊತೆಗೆ ಸೇವಾ ನ್ಯೂನತೆಗಾಗಿ ರೂ. 10,000/- ದಂಡ ಹಾಗೂ ಪ್ರಕರಣದ ವೆಚ್ಚವಾಗಿ ರೂ. 5000/-ವನ್ನು 45 ದಿನದೊಳಗೆ ಪಾವತಿಸಲು ಆದೇಶ ನೀಡಿದೆ. ಗ್ರಾಹಕರ ಪರವಾಗಿ ಮಂಗಳೂರಿನ ವಕೀಲರಾದ ತೇಜಕುಮಾರ್ ಡಿ.ಎಂ. ವಾದ ಮಂಡಿಸಿದ್ದರು.
The Dakshina Kannada District Consumer Court has ruled against Ola Electric Technologies Pvt. Ltd. for selling a defective electric scooter and failing to provide a permanent solution to repeated issues.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm