ಬ್ರೇಕಿಂಗ್ ನ್ಯೂಸ್
22-09-25 10:08 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದಸರಾ ಹಬ್ಬ ಮಾತ್ರವಲ್ಲ, ನಂಬಿಕೆ, ಸಂಸ್ಕೃತಿ ಹಾಗು ಒಗಟ್ಟಿನ ಪ್ರತೀಕ. ಕುದ್ರೋಳಿಯಲ್ಲಿ ನಡೆಯುತ್ತಿರುವ ಈ ಉತ್ಸವ ಮಂಗಳೂರನ್ನು ಮತ್ತಷ್ಟು ವಿಭಿನ್ನವಾಗಿಸಿದೆ ಎಂದು ನವ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಅಧ್ಯಕ್ಷ ಡಾ.ಎ.ವೆಂಕಟರಮಣ ಅಕ್ಕರಾಜು ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಮಂಗಳೂರು ದಸರಾ ಮೈಸೂರು ದಸರಾದಷ್ಟೇ ಪ್ರಸಿದ್ಧಿ ಪಡೆದಿದೆ. ಭಾರತೀಯ ಧರ್ಮ, ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.
ತಾಸೆ ಮತ್ತು ಡೋಲು ಬಡಿಯುವ ಮೂಲಕ ತುಳುನಾಡಿನ ಶೈಲಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಮ್ಯಾನೇಜರ್ ಹಾಗೂ ಮಂಗಳೂರು ವಲಯ ಮುಖ್ಯಸ್ಥ ರಾಜೇಂದರ್ ಕುಮಾರ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಪ್ರಾದೇಶಿಕ ಕಚೇರಿ ಮುಖ್ಯಸ್ಥ ಆರ್. ನರಸಿಂಹ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಕಿಶೋರ್ ದಂಡೆಕೇರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಲೀಲಾಕ್ಷ ಕರ್ಕೇರ, ರಮಾನಾಥ ಕಾರಂದೂರು, ವಾಸುದೇವ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ದಸರಾ ಸೇವಾ ಸಿರಿ ಪ್ರಶಸ್ತಿ
ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಸಾನಿಧ್ಯ ವಿಶೇಷ ಶಾಲೆ ಮಂಗಳೂರು, ವೈಟ್ ಡೌಸ್ ಮಂಗಳೂರು, ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ನ ಸೇವೆಯನ್ನು ಗುರುತಿಸಿ ದಸರಾ ಸೇವಾ ಸಿರಿ ಪ್ರಶಸ್ತಿ-2025 ನೀಡಿ ಗೌರವಿಸಲಾಯಿತು. ಸೋಮವಾರ ವಿದುಷಿ ವಿನುತಾ ಲಕ್ಷ್ಮೀಕಾಂತ್ ಜೋಗಿ ಕದ್ರಿ ಮತ್ತು ಬಳಗದವರಿಂದ ಭರತನಾಟ್ಯ, ಕಲಾಮೃತ ಮಂಗಳೂರು ತಂಡದಿಂದ ನಾಟ್ಯಸಂಭ್ರಮ, ಉಡುಪಿಯ ವಿದ್ವಾನ್ ಸುಧೀರ್ ರಾವ್, ವಿದುಷಿ ಮಾನಸಿ ಸುಧೀರ್ ನೇತೃತ್ವದ ನೃತ್ಯನಿಕೇತನ ಕೊಡವೂರು ಕಲಾವಿದರಿಂದ ನೃತ್ಯರೂಪಕ ನಾರಸಿಂಹ (ಒಳಿತಿನ ವಿಜಯದ ಕಥನ) ಜರುಗಿತು.
Dasara is not just a festival, but a symbol of faith, culture, and unity. The celebrations at Kudroli have made Mangaluru truly unique, said Dr. A. Venkataraman Akkaraju, Chairman of the New Mangalore Port Authority (NMPA).
22-09-25 07:07 pm
Bangalore Correspondent
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
22-09-25 06:58 pm
HK News Desk
ದೇಶಾದ್ಯಂತ ಬಿಹಾರ ಮಾದರಿ ಮತದಾರ ಪಟ್ಟಿ ಪರಿಷ್ಕರಣೆ ;...
22-09-25 10:50 am
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
22-09-25 10:08 pm
Mangalore Correspondent
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
ದೋಷಯುಕ್ತ ಇಲೆಕ್ಟ್ರಿಕ್ ವಾಹನ ; ಓಲಾ ಕಂಪನಿ ವಿರುದ್...
22-09-25 01:51 pm
ಸೆ.22ರಿಂದ ಮಂಗಳೂರು ದಸರಾ ವೈಭವ ; ಸಾಂಸ್ಕೃತಿಕ ಕಲಾವ...
20-09-25 10:39 pm
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
22-09-25 08:16 pm
Mangalore Correspondent
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm