ಬ್ರೇಕಿಂಗ್ ನ್ಯೂಸ್
22-09-25 10:08 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದಸರಾ ಹಬ್ಬ ಮಾತ್ರವಲ್ಲ, ನಂಬಿಕೆ, ಸಂಸ್ಕೃತಿ ಹಾಗು ಒಗಟ್ಟಿನ ಪ್ರತೀಕ. ಕುದ್ರೋಳಿಯಲ್ಲಿ ನಡೆಯುತ್ತಿರುವ ಈ ಉತ್ಸವ ಮಂಗಳೂರನ್ನು ಮತ್ತಷ್ಟು ವಿಭಿನ್ನವಾಗಿಸಿದೆ ಎಂದು ನವ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಅಧ್ಯಕ್ಷ ಡಾ.ಎ.ವೆಂಕಟರಮಣ ಅಕ್ಕರಾಜು ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಮಂಗಳೂರು ದಸರಾ ಮೈಸೂರು ದಸರಾದಷ್ಟೇ ಪ್ರಸಿದ್ಧಿ ಪಡೆದಿದೆ. ಭಾರತೀಯ ಧರ್ಮ, ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.

ತಾಸೆ ಮತ್ತು ಡೋಲು ಬಡಿಯುವ ಮೂಲಕ ತುಳುನಾಡಿನ ಶೈಲಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಮ್ಯಾನೇಜರ್ ಹಾಗೂ ಮಂಗಳೂರು ವಲಯ ಮುಖ್ಯಸ್ಥ ರಾಜೇಂದರ್ ಕುಮಾರ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಪ್ರಾದೇಶಿಕ ಕಚೇರಿ ಮುಖ್ಯಸ್ಥ ಆರ್. ನರಸಿಂಹ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಕಿಶೋರ್ ದಂಡೆಕೇರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಲೀಲಾಕ್ಷ ಕರ್ಕೇರ, ರಮಾನಾಥ ಕಾರಂದೂರು, ವಾಸುದೇವ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ದಸರಾ ಸೇವಾ ಸಿರಿ ಪ್ರಶಸ್ತಿ
ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಸಾನಿಧ್ಯ ವಿಶೇಷ ಶಾಲೆ ಮಂಗಳೂರು, ವೈಟ್ ಡೌಸ್ ಮಂಗಳೂರು, ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ನ ಸೇವೆಯನ್ನು ಗುರುತಿಸಿ ದಸರಾ ಸೇವಾ ಸಿರಿ ಪ್ರಶಸ್ತಿ-2025 ನೀಡಿ ಗೌರವಿಸಲಾಯಿತು. ಸೋಮವಾರ ವಿದುಷಿ ವಿನುತಾ ಲಕ್ಷ್ಮೀಕಾಂತ್ ಜೋಗಿ ಕದ್ರಿ ಮತ್ತು ಬಳಗದವರಿಂದ ಭರತನಾಟ್ಯ, ಕಲಾಮೃತ ಮಂಗಳೂರು ತಂಡದಿಂದ ನಾಟ್ಯಸಂಭ್ರಮ, ಉಡುಪಿಯ ವಿದ್ವಾನ್ ಸುಧೀರ್ ರಾವ್, ವಿದುಷಿ ಮಾನಸಿ ಸುಧೀರ್ ನೇತೃತ್ವದ ನೃತ್ಯನಿಕೇತನ ಕೊಡವೂರು ಕಲಾವಿದರಿಂದ ನೃತ್ಯರೂಪಕ ನಾರಸಿಂಹ (ಒಳಿತಿನ ವಿಜಯದ ಕಥನ) ಜರುಗಿತು.
Dasara is not just a festival, but a symbol of faith, culture, and unity. The celebrations at Kudroli have made Mangaluru truly unique, said Dr. A. Venkataraman Akkaraju, Chairman of the New Mangalore Port Authority (NMPA).
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am