ಬ್ರೇಕಿಂಗ್ ನ್ಯೂಸ್
23-09-25 11:01 pm Mangalore Correspondent ಕರಾವಳಿ
ಮಂಗಳೂರು, ಸೆ.23 : ಧರ್ಮಸ್ಥಳ ಪ್ರಕರಣದಲ್ಲಿ ಪ್ರಮುಖ ದೂರುದಾರನಾಗಿದ್ದ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು ಮತ್ತೊಮ್ಮೆ ಕೋರ್ಟಿಗೆ ಹೇಳಿಕೆ ನೀಡಿದ್ದಾನೆ. ತನ್ನ ಹಿಂದಿನ ಹೇಳಿಕೆಯನ್ನು ಅಲ್ಲಗಳೆದು ಯು ಟರ್ನ್ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಗಿ ಭದ್ರತೆಯಲ್ಲಿ ಮಂಗಳವಾರ ಸಂಜೆ ಬೆಳ್ತಂಗಡಿ ಕೋರ್ಟಿಗೆ ಕರೆತರಲಾಗಿದ್ದು, ಗಡ್ಡ ಬಿಟ್ಟುಕೊಂಡಿದ್ದ ವ್ಯಕ್ತಿ ನೇರವಾಗಿ ನ್ಯಾಯಾಧೀಶರ ಮುಂದೆ ತೆರಳಿ ಸೆಕ್ಷನ್ 183 ಅಡಿ ಹೇಳಿಕೆ ದಾಖಲಿಸಿದ್ದಾನೆ. ಬುಧವಾರವೂ ಹೇಳಿಕೆ ಮುಂದುವರಿಸುವ ಸಾಧ್ಯತೆಯಿದ್ದು, ಪೊಲೀಸರು ಮತ್ತೆ ಹಾಜರುಪಡಿಸುವ ಸುಳಿವು ನೀಡಿದ್ದಾರೆ.
ಇದೇ ವೇಳೆ, ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಲು ಆದೇಶ ಮಾಡಲಾಗಿದೆ. ಇದಲ್ಲದೆ, ಮಹೇಶ್ ಶೆಟ್ಟಿ ಜೊತೆಗಿದ್ದ 11 ಬೆಂಬಲಿಗರನ್ನು ವಿಚಾರಣೆಗೆ ಕರೆದಿದ್ದು ಪೊಲೀಸರು ನಿರಂತರ ಡ್ರಿಲ್ ಮಾಡಿದ್ದಾರೆ. ಅವರ ಮೊಬೈಲ್ ಪಡೆದು ತನಿಖೆಯನ್ನೂ ನಡೆಸುತ್ತಿದ್ದಾರೆ. ಇಂತಹ ಹೊತ್ತಿನಲ್ಲೇ ದೂರುದಾರ ಚಿನ್ನಯ್ಯ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು, ಉಲ್ಟಾ ಹೊಡೆದಿದ್ದಾನೆ ಎನ್ನಲಾಗುತ್ತಿದೆ.
ಆದರೆ ಈ ಹೇಳಿಕೆಯನ್ನು ಕೇವಲ ನ್ಯಾಯಾಧೀಶರ ಮುಂದೆ ಮಾತ್ರ ನೀಡಿರುವುದರಿಂದ ಆತ ಏನೆಂದು ಹೇಳಿಕೆ ನೀಡಿದ್ದಾನೆಂದು ಪೊಲೀಸರಿಗೂ ತಿಳಿದಿಲ್ಲ. ಧರ್ಮಸ್ಥಳ ಠಾಣೆಗೆ ಜುಲೈ 3ರಂದು ನೀಡಿದ ಪೊಲೀಸ್ ದೂರಿನ ಬೆನ್ನಲ್ಲೇ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿ 164 ಅಡಿ ಹೇಳಿಕೆಯನ್ನೂ ನೀಡಿದ್ದ. ಇದೀಗ ತನ್ನ ಹಳೆ ಹೇಳಿಕೆ ಬದಿಗೆ ಸರಿಸಿ ಹೊಸ ಹೇಳಿಕೆ ನೀಡಿರುವ ಸಾಧ್ಯತೆಯಿದೆ.
In a fresh development in the Dharmasthala case, key complainant Chinnayya was produced before the Beltangady Court under tight security on Tuesday evening. Reports suggest that he may have taken a U-turn from his earlier statement.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am