ಬ್ರೇಕಿಂಗ್ ನ್ಯೂಸ್
23-09-25 11:01 pm Mangalore Correspondent ಕರಾವಳಿ
ಮಂಗಳೂರು, ಸೆ.23 : ಧರ್ಮಸ್ಥಳ ಪ್ರಕರಣದಲ್ಲಿ ಪ್ರಮುಖ ದೂರುದಾರನಾಗಿದ್ದ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು ಮತ್ತೊಮ್ಮೆ ಕೋರ್ಟಿಗೆ ಹೇಳಿಕೆ ನೀಡಿದ್ದಾನೆ. ತನ್ನ ಹಿಂದಿನ ಹೇಳಿಕೆಯನ್ನು ಅಲ್ಲಗಳೆದು ಯು ಟರ್ನ್ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಗಿ ಭದ್ರತೆಯಲ್ಲಿ ಮಂಗಳವಾರ ಸಂಜೆ ಬೆಳ್ತಂಗಡಿ ಕೋರ್ಟಿಗೆ ಕರೆತರಲಾಗಿದ್ದು, ಗಡ್ಡ ಬಿಟ್ಟುಕೊಂಡಿದ್ದ ವ್ಯಕ್ತಿ ನೇರವಾಗಿ ನ್ಯಾಯಾಧೀಶರ ಮುಂದೆ ತೆರಳಿ ಸೆಕ್ಷನ್ 183 ಅಡಿ ಹೇಳಿಕೆ ದಾಖಲಿಸಿದ್ದಾನೆ. ಬುಧವಾರವೂ ಹೇಳಿಕೆ ಮುಂದುವರಿಸುವ ಸಾಧ್ಯತೆಯಿದ್ದು, ಪೊಲೀಸರು ಮತ್ತೆ ಹಾಜರುಪಡಿಸುವ ಸುಳಿವು ನೀಡಿದ್ದಾರೆ.
ಇದೇ ವೇಳೆ, ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಲು ಆದೇಶ ಮಾಡಲಾಗಿದೆ. ಇದಲ್ಲದೆ, ಮಹೇಶ್ ಶೆಟ್ಟಿ ಜೊತೆಗಿದ್ದ 11 ಬೆಂಬಲಿಗರನ್ನು ವಿಚಾರಣೆಗೆ ಕರೆದಿದ್ದು ಪೊಲೀಸರು ನಿರಂತರ ಡ್ರಿಲ್ ಮಾಡಿದ್ದಾರೆ. ಅವರ ಮೊಬೈಲ್ ಪಡೆದು ತನಿಖೆಯನ್ನೂ ನಡೆಸುತ್ತಿದ್ದಾರೆ. ಇಂತಹ ಹೊತ್ತಿನಲ್ಲೇ ದೂರುದಾರ ಚಿನ್ನಯ್ಯ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು, ಉಲ್ಟಾ ಹೊಡೆದಿದ್ದಾನೆ ಎನ್ನಲಾಗುತ್ತಿದೆ.
ಆದರೆ ಈ ಹೇಳಿಕೆಯನ್ನು ಕೇವಲ ನ್ಯಾಯಾಧೀಶರ ಮುಂದೆ ಮಾತ್ರ ನೀಡಿರುವುದರಿಂದ ಆತ ಏನೆಂದು ಹೇಳಿಕೆ ನೀಡಿದ್ದಾನೆಂದು ಪೊಲೀಸರಿಗೂ ತಿಳಿದಿಲ್ಲ. ಧರ್ಮಸ್ಥಳ ಠಾಣೆಗೆ ಜುಲೈ 3ರಂದು ನೀಡಿದ ಪೊಲೀಸ್ ದೂರಿನ ಬೆನ್ನಲ್ಲೇ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿ 164 ಅಡಿ ಹೇಳಿಕೆಯನ್ನೂ ನೀಡಿದ್ದ. ಇದೀಗ ತನ್ನ ಹಳೆ ಹೇಳಿಕೆ ಬದಿಗೆ ಸರಿಸಿ ಹೊಸ ಹೇಳಿಕೆ ನೀಡಿರುವ ಸಾಧ್ಯತೆಯಿದೆ.
In a fresh development in the Dharmasthala case, key complainant Chinnayya was produced before the Beltangady Court under tight security on Tuesday evening. Reports suggest that he may have taken a U-turn from his earlier statement.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm