ಬ್ರೇಕಿಂಗ್ ನ್ಯೂಸ್
25-09-25 07:23 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.25: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಮತ್ತೊಂದು ಬುರುಡೆ ಮತ್ತು ಅಸ್ಥಿಪಂಜರ ಅವಶೇಷದ ಗುರುತನ್ನು ಪೊಲೀಸರು ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧರಿಸಿ ಪತ್ತೆ ಮಾಡಿದ್ದಾರೆ.
ಅಸ್ಥಿಪಂಜರ ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧಾರದಲ್ಲಿ ವ್ಯಕ್ತಿಯ ಕುಟುಂಬಸ್ಥರನ್ನು ಕರೆಸಿದ್ದು ಅವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಸ್ಥಳ ಶೋಧ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಡಿಎಲ್ ಆಧರಿಸಿ ಆತನ ಕುಟುಂಬ ಸದಸ್ಯರು ಬೆಳ್ತಂಗಡಿಗೆ ಬಂದಿದ್ದು ಮಾಹಿತಿ ನೀಡಿದ್ದಾರೆ.

ಆದಿಶೇಷ ಎಂಬ ಹೆಸರಿನ ಯುವಕ 2013 ಅಕ್ಟೋಬರ್ 2ರಿಂದ ನಾಪತ್ತೆಯಾಗಿದ್ದ. ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ಆದರೆ ಮಗ ನಾಪತ್ತೆಯಾದರೂ ಈ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿರಲಿಲ್ಲ. ಅಲ್ಲದೆ, ಹುಡುಕಾಟವನ್ನೂ ನಡೆಸಿರಲಿಲ್ಲ.
ಮಗ ಕಾಣೆಯಾಗಿದ್ದ, ಬರಬಹುದು ಅಂದ್ಕೊಂಡು ನಾವು ಹುಡುಕಲು ಹೋಗಿರಲಿಲ್ಲ. ಆದರೆ ಆಮೇಲೆ ಬರಲೇ ಇಲ್ಲ. ನಾಪತ್ತೆ ಸಂದರ್ಭದಲ್ಲಿ ಮಾನಸಿಕವಾಗಿ ಚೆನ್ನಾಗಿಯೇ ಇದ್ದ ಎಂದು ಆತನ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ ಕುಟುಂಬ ಸದಸ್ಯರನ್ನು ಪೊಲೀಸರು ದಾಖಲೆ ಪತ್ರಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಅಸ್ಥಿಪಂಜರ ಆಧರಿಸಿ ಡಿಎನ್ಎ ಟೆಸ್ಟ್ ಗೆ ಮತ್ತೆ ಬರುವಂತೆಯೂ ತಿಳಿಸಿದ್ದಾರೆ ಎನ್ನುವ ಮಾಹಿತಿ ಇದೆ.
Police have identified another skull and skeletal remains discovered at Bangle Gudde near the Netravati bathing ghat in Dharmasthala, with the help of a driving license found at the site.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am