ಬ್ರೇಕಿಂಗ್ ನ್ಯೂಸ್
25-09-25 07:23 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.25: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಮತ್ತೊಂದು ಬುರುಡೆ ಮತ್ತು ಅಸ್ಥಿಪಂಜರ ಅವಶೇಷದ ಗುರುತನ್ನು ಪೊಲೀಸರು ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧರಿಸಿ ಪತ್ತೆ ಮಾಡಿದ್ದಾರೆ.
ಅಸ್ಥಿಪಂಜರ ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧಾರದಲ್ಲಿ ವ್ಯಕ್ತಿಯ ಕುಟುಂಬಸ್ಥರನ್ನು ಕರೆಸಿದ್ದು ಅವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಸ್ಥಳ ಶೋಧ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಡಿಎಲ್ ಆಧರಿಸಿ ಆತನ ಕುಟುಂಬ ಸದಸ್ಯರು ಬೆಳ್ತಂಗಡಿಗೆ ಬಂದಿದ್ದು ಮಾಹಿತಿ ನೀಡಿದ್ದಾರೆ.

ಆದಿಶೇಷ ಎಂಬ ಹೆಸರಿನ ಯುವಕ 2013 ಅಕ್ಟೋಬರ್ 2ರಿಂದ ನಾಪತ್ತೆಯಾಗಿದ್ದ. ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ಆದರೆ ಮಗ ನಾಪತ್ತೆಯಾದರೂ ಈ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿರಲಿಲ್ಲ. ಅಲ್ಲದೆ, ಹುಡುಕಾಟವನ್ನೂ ನಡೆಸಿರಲಿಲ್ಲ.
ಮಗ ಕಾಣೆಯಾಗಿದ್ದ, ಬರಬಹುದು ಅಂದ್ಕೊಂಡು ನಾವು ಹುಡುಕಲು ಹೋಗಿರಲಿಲ್ಲ. ಆದರೆ ಆಮೇಲೆ ಬರಲೇ ಇಲ್ಲ. ನಾಪತ್ತೆ ಸಂದರ್ಭದಲ್ಲಿ ಮಾನಸಿಕವಾಗಿ ಚೆನ್ನಾಗಿಯೇ ಇದ್ದ ಎಂದು ಆತನ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ ಕುಟುಂಬ ಸದಸ್ಯರನ್ನು ಪೊಲೀಸರು ದಾಖಲೆ ಪತ್ರಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಅಸ್ಥಿಪಂಜರ ಆಧರಿಸಿ ಡಿಎನ್ಎ ಟೆಸ್ಟ್ ಗೆ ಮತ್ತೆ ಬರುವಂತೆಯೂ ತಿಳಿಸಿದ್ದಾರೆ ಎನ್ನುವ ಮಾಹಿತಿ ಇದೆ.
Police have identified another skull and skeletal remains discovered at Bangle Gudde near the Netravati bathing ghat in Dharmasthala, with the help of a driving license found at the site.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm