ಬ್ರೇಕಿಂಗ್ ನ್ಯೂಸ್
25-09-25 08:35 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕುದ್ರೋಳಿ ದೇವಸ್ಥಾನದಲ್ಲಿ ದಸರಾ ಹಿನ್ನೆಲೆ ಜನಜಂಗುಳಿ ಇರುವಾಗ ಆಟೋ ಚಾಲಕನೊಬ್ಬ ಮುಖ್ಯ ದ್ವಾರದ ಬಳಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆಂದು ಆರೋಪಿಸಿ ಟ್ರಾಫಿಕ್ ಪೊಲೀಸರು ಆತನನ್ನು ತಡೆದು ದಂಡ ವಿಧಿಸಿದ್ದು ಸ್ಥಳದಲ್ಲಿ ಆಟೋ ಚಾಲಕರ ಆಕ್ರೋಶಕ್ಕೂ ಕಾರಣವಾಗಿ ಇದರ ವಿಡಿಯೋ ವೈರಲ್ ಆಗಿದೆ.
ಸೆ.24ರಂದು ರಾತ್ರಿ 9.30 ಗಂಟೆ ಸಮಯದಲ್ಲಿ ಆಟೋ ಚಾಲಕ ಶೈಲೇಶ್ (28) ಎಂಬವರು ಕುದ್ರೋಳಿ ದೇವಸ್ಥಾನದ ಮುಖ್ಯದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾರೆಂದು ಪೊಲೀಸ್ ಸಿಬ್ಬಂದಿ ದಂಡ ವಿಧಿಸಿದ್ದಾರೆ. ಆದರೆ ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ 500 ರೂ. ಮಾಡಲು ಎಷ್ಟು ಕಷ್ಟ ಇದೆ ಗೊತ್ತಾ, ನೀವು ದಂಡ ಹಾಕ್ತೀರಿ, ನಾನು ಏನು ತಪ್ಪು ಮಾಡಿದ್ದೇನೆ, ನಿಮಗೆ ಏನೂ ತಪ್ಪು ಮಾತಾಡಿಲ್ಲ ಅಲ್ವಾ ಎಂದು ಹೇಳಿ ಒಂದು ಕೈಯಲ್ಲಿ ವಿಡಿಯೋ ಮಾಡುತ್ತ ಸಾಗಿದ್ದಾನೆ. ಆದರೆ ಪೊಲೀಸ್ ಎಎಸ್ಐ ಒಬ್ಬರು, ಚಾಲಕನ ಸೊಂಟದ ಬೆಲ್ಟ್ ಹಿಡಿದು ನಿನ್ನನ್ನು ಬಿಡುವುದಿಲ್ಲ ಎನ್ನುತ್ತ ಹಿಡಿದುಕೊಂಡು ಹೋಗಿದ್ದಾರೆ.
ಈ ವೇಳೆ, ಇತರ ಆಟೋ ಚಾಲಕರು ಕೂಡ ಸೇರಿದ್ದು ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಟಾಪಟಿ ನಡೆಸುವ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಕೇಸು ಹಾಕೋದಾಗಿ ಹೇಳುತ್ತಿರುವುದು ವಿಡಿಯೋದಲ್ಲಿದೆ. ಪೊಲೀಸರ ಮಾಹಿತಿ ಪ್ರಕಾರ, ನಂತರ ಆಟೋ ಚಾಲಕ ಶೈಲೇಶ್ ಸ್ವಇಚ್ಚೆಯಿಂದ ಕ್ಷಮೆ ಯಾಚಿಸಿದ್ದು ಜೊತೆಯಲ್ಲಿ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ. ಸದ್ರಿ ಆಟೋ ಚಾಲಕನಿಗೆ ರಸ್ತೆ ಸಂಚಾರಕ್ಕೆ ಅಡೆ ತಡೆ ಮತ್ತು ಪೊಲೀಸ್ ಅಧಿಕಾರಿ ನೀಡಿದ ಸೂಚನೆಯನ್ನು ಪಾಲಿಸದೇ ಇರುವ ಬಗ್ಗೆ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
During the Kudroli Dasara celebrations at Kudroli Temple, an altercation between traffic police and an auto driver created a scene near the temple’s main entrance and has since gone viral on social media.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm