ಬ್ರೇಕಿಂಗ್ ನ್ಯೂಸ್
25-09-25 08:35 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕುದ್ರೋಳಿ ದೇವಸ್ಥಾನದಲ್ಲಿ ದಸರಾ ಹಿನ್ನೆಲೆ ಜನಜಂಗುಳಿ ಇರುವಾಗ ಆಟೋ ಚಾಲಕನೊಬ್ಬ ಮುಖ್ಯ ದ್ವಾರದ ಬಳಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆಂದು ಆರೋಪಿಸಿ ಟ್ರಾಫಿಕ್ ಪೊಲೀಸರು ಆತನನ್ನು ತಡೆದು ದಂಡ ವಿಧಿಸಿದ್ದು ಸ್ಥಳದಲ್ಲಿ ಆಟೋ ಚಾಲಕರ ಆಕ್ರೋಶಕ್ಕೂ ಕಾರಣವಾಗಿ ಇದರ ವಿಡಿಯೋ ವೈರಲ್ ಆಗಿದೆ.
ಸೆ.24ರಂದು ರಾತ್ರಿ 9.30 ಗಂಟೆ ಸಮಯದಲ್ಲಿ ಆಟೋ ಚಾಲಕ ಶೈಲೇಶ್ (28) ಎಂಬವರು ಕುದ್ರೋಳಿ ದೇವಸ್ಥಾನದ ಮುಖ್ಯದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾರೆಂದು ಪೊಲೀಸ್ ಸಿಬ್ಬಂದಿ ದಂಡ ವಿಧಿಸಿದ್ದಾರೆ. ಆದರೆ ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ 500 ರೂ. ಮಾಡಲು ಎಷ್ಟು ಕಷ್ಟ ಇದೆ ಗೊತ್ತಾ, ನೀವು ದಂಡ ಹಾಕ್ತೀರಿ, ನಾನು ಏನು ತಪ್ಪು ಮಾಡಿದ್ದೇನೆ, ನಿಮಗೆ ಏನೂ ತಪ್ಪು ಮಾತಾಡಿಲ್ಲ ಅಲ್ವಾ ಎಂದು ಹೇಳಿ ಒಂದು ಕೈಯಲ್ಲಿ ವಿಡಿಯೋ ಮಾಡುತ್ತ ಸಾಗಿದ್ದಾನೆ. ಆದರೆ ಪೊಲೀಸ್ ಎಎಸ್ಐ ಒಬ್ಬರು, ಚಾಲಕನ ಸೊಂಟದ ಬೆಲ್ಟ್ ಹಿಡಿದು ನಿನ್ನನ್ನು ಬಿಡುವುದಿಲ್ಲ ಎನ್ನುತ್ತ ಹಿಡಿದುಕೊಂಡು ಹೋಗಿದ್ದಾರೆ.



ಈ ವೇಳೆ, ಇತರ ಆಟೋ ಚಾಲಕರು ಕೂಡ ಸೇರಿದ್ದು ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಟಾಪಟಿ ನಡೆಸುವ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಕೇಸು ಹಾಕೋದಾಗಿ ಹೇಳುತ್ತಿರುವುದು ವಿಡಿಯೋದಲ್ಲಿದೆ. ಪೊಲೀಸರ ಮಾಹಿತಿ ಪ್ರಕಾರ, ನಂತರ ಆಟೋ ಚಾಲಕ ಶೈಲೇಶ್ ಸ್ವಇಚ್ಚೆಯಿಂದ ಕ್ಷಮೆ ಯಾಚಿಸಿದ್ದು ಜೊತೆಯಲ್ಲಿ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ. ಸದ್ರಿ ಆಟೋ ಚಾಲಕನಿಗೆ ರಸ್ತೆ ಸಂಚಾರಕ್ಕೆ ಅಡೆ ತಡೆ ಮತ್ತು ಪೊಲೀಸ್ ಅಧಿಕಾರಿ ನೀಡಿದ ಸೂಚನೆಯನ್ನು ಪಾಲಿಸದೇ ಇರುವ ಬಗ್ಗೆ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
During the Kudroli Dasara celebrations at Kudroli Temple, an altercation between traffic police and an auto driver created a scene near the temple’s main entrance and has since gone viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am