ಬ್ರೇಕಿಂಗ್ ನ್ಯೂಸ್
28-09-25 08:12 pm Mangalore Correspondent ಕರಾವಳಿ
ಮಂಗಳೂರು, ಸೆ.28 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ-2025’ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್, ಯೂನಿಯನ್ ಬ್ಯಾಂಕ್ ವತಿಯಿಂದ ಭಾನುವಾರ ಮೂರನೇ ಆವೃತ್ತಿಯ ರಾಜ್ಯ ಮಟ್ಟದ ಮಂಗಳೂರು ದಸರಾ ಮ್ಯಾರಥಾನ್-2025 ಸ್ಪರ್ಧೆ ನಡೆಯಿತು.
ಮ್ಯಾರಥಾನ್ ನಲ್ಲಿ ಚಿಣ್ಣರಿಂದ ವೃದ್ಧರ ವರೆಗೂ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಕೇರಳ ಸಹಿತ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಪಾಲ್ಗೊಂಡರು. 21 ಕಿಮೀ ರನ್, ೧೦ ಕಿಮೀ ರನ್, 5 ಕಿಮೀ ರನ್, 2 ಕೆ ಸ್ಯಾರಿ ರನ್ ಆಯೋಜಿಸಲಾಗಿತ್ತು. ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಿತು. 21 ಕಿ.ಮೀ. ಪ್ರಥಮ ವಿಜೇತರಿಗೆ 25 ಸಾವಿರ ರೂ., ದ್ವಿತೀಯ ಬಹುಮಾನ 15 ಸಾವಿರ ರೂ., ತೃತೀಯ 10 ಸಾವಿರ ರೂ., 10 ಕಿ.ಮೀ. ಪ್ರಥಮ 15 ಸಾವಿರ ರೂ., ದ್ವಿತೀಯ 10 ಸಾವಿರ ರೂ., ತೃತೀಯ 5 ಸಾವಿರ ರೂ., 5 ಕಿ.ಮೀ.ನಲ್ಲಿ ಪ್ರಥಮ 5 ಸಾವಿರ ರೂ., ದ್ವಿತೀಯ 2 ಸಾವಿರ ರೂ., ತೃತೀಯ 1 ಸಾವಿರ ರೂ. ನೀಡಲಾಯಿತು.










ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಚಾಲನೆ ನೀಡಿದರು. ಯೂನಿಯನ್ ಬ್ಯಾಂಕ್ ಮಂಗಳೂರು ಪ್ರಾದೇಶಿಕ ಮುಖ್ಯಸ್ಥ ನರಸಿಂಹ ಕುಮಾರ್, ವಲಯ ಮುಖ್ಯಸ್ಥೆ ತೇಜಸ್ವಿನಿ ವಿ.ಸಿ., ಕುದ್ರೋಳಿ ಕ್ಷೇತ್ರಾಭಿವೃದ್ಧಿ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಅಭಿವೃದ್ಧಿ ಸಮಿತಿ ಸದಸ್ಯ ಲೀಲಾಕ್ಷ ಕರ್ಕೇರಾ, ಜೂಯಿಸ್ ಫಿಟ್ನೆಸ್ ಕ್ಲಬ್ನ ರಾಜೇಶ್ ಪಾಟಾಲಿ ಮತ್ತಿತರರು ಇದ್ದರು.
ಬಹುಮಾನ ವಿಜೇತರು
21 ಕಿ.ಮೀ. ಮ್ಯಾರಥಾನ್ ಪುರುಷರ ವಿಭಾಗ: ಪ್ರಥಮ-ಲೈಡ್ ಶಫ್ರಂಗ್ ಲಮಾರೆ (01:26:29), ದ್ವಿತೀಯ -ಶಿವಾನಂದ್ (01:29:29:), ತೃತೀಯ: ಕಿರಣ್ ಕುಮಾರ್ ಕುಲಾಲ್ (02:00:56), ಮಹಿಳೆಯರ ವಿಭಾಗದಲ್ಲಿ ಪ್ರಥಮ: ನಂದಿನಿ (01:52:23), ದ್ವಿತೀಯ: ಆಶಾ ಪತ್ರೋಸೆ (01:59:02) ತೃತೀಯ: ಸಾಕ್ಷಿ (02:00:57)
10 ಕಿ.ಮೀ. ಮ್ಯಾರಥಾನ್ ಪುರುಷರ ವಿಭಾಗದಲ್ಲಿ ಪ್ರಥಮ: ಶ್ರೀಧರ್ (48:15), ದ್ವಿತೀಯ: ಐರಪ್ಪ ಹಲಗಣ್ಣನವರ್ (48:42), ತೃತೀಯ: ಘನಶ್ಯಾಮ್ ಪ್ರಸಾದ್ (49:52), ಮಹಿಳೆಯರ ವಿಭಾಗದಲ್ಲಿ ಪ್ರಥಮ: ಚರಿಷ್ಮ (59:47), ದ್ವಿತೀಯ: ಶ್ರೇಯಾ (59:59), ತೃತೀಯ: ಮರಿಯ ಲವೀನ ರೋಡ್ರಿಗಸ್ (01:00:18) ಹಾಗೂ 5 ಕಿ.ಮೀ. ಮ್ಯಾರಥಾನ್ ಪುರಷರ ವಿಭಾಗದಲ್ಲಿ ಪ್ರಥಮ: ಆರ್. ಮಹೇಶ್ (18:12), ದ್ವಿತೀಯ: ಪುನೀತ್ ಕುಮಾರ್ (18:31), ತೃತೀಯ: ನಾಗರಾಜ್ (19:15), ಮಹಿಳೆಯರ ವಿಭಾಗದಲ್ಲಿ ಪ್ರಥಮ: ನಾಗಿಣಿ (23:03), ದ್ವಿತೀಯ: ರೇಖ (12:03), ತೃತೀಯ: ರಿತುಶ್ರೀ (26:00)
As part of Mangaluru Dasara-2025 celebrations, the third edition of the state-level marathon was held at Kudroli Shri Gokarnanatheshwara Temple premises. Organized by Joois Fitness Club and Union Bank, the event drew over 2,000 participants from Karnataka and Kerala across 21 km, 10 km, 5 km and 2 km categories. Separate races were held for men and women, with winners awarded cash prizes up to ₹25,000. City Police Commissioner Sudheer Kumar Reddy flagged off the marathon in the presence of dignitaries.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am