ಬ್ರೇಕಿಂಗ್ ನ್ಯೂಸ್
29-09-25 11:02 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.29 : ಇತ್ತೀಚೆಗೆ ಬೆಳ್ತಂಗಡಿ ನ್ಯಾಯಾಲಯದ ಮುಂದೆ ದೂರುದಾರ ಚಿನ್ನಯ್ಯ ಮತ್ತೊಮ್ಮೆ ಹೇಳಿಕೆ ನೀಡಿರುವ ವಿಚಾರದಲ್ಲಿ ಎಸ್ಐಟಿ ಅಧಿಕಾರಿಗಳು ಹೊಸತಾಗಿ ತನಿಖೆ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅದರಲ್ಲಿ ಹೇಳಿರುವ ಅಂಶಗಳು, ಅದರ ವಾಸ್ತವ ಆಧರಿಸಿ ತನಿಖಾ ಪ್ರಕ್ರಿಯೆ ಚುರುಕಾಗುವ ಸಾಧ್ಯತೆ ಇದೆ. ಇದೇ ವೇಳೆ, ಈವರೆಗೂ ಎಸ್ಐಟಿ ಸರಕಾರಕ್ಕಾಗಲೀ, ಕೋರ್ಟಿಗಾಗಲೀ ಯಾವುದೇ ಮಧ್ಯಂತರ ವರದಿಯನ್ನು ಸಲ್ಲಿಸಿಲ್ಲ ಎನ್ನುವ ವಿಚಾರವೂ ತಿಳಿದುಬಂದಿದೆ.
ಕಳೆದೊಂದು ವಾರದಲ್ಲಿ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಮೂರು ಬಾರಿ ಬೆಳ್ತಂಗಡಿ ಕೋರ್ಟಿಗೆ ಬಂದು ಸೆಕ್ಷನ್ 183 ಅಡಿ ಹೇಳಿಕೆ ದಾಖಲಿಸಿದ್ದಾನೆ. ಈ ವೇಳೆ, ತಾನು ಮೊದಲಿಗೆ ನೀಡಿರುವ ಹೇಳಿಕೆಯಿಂದ ವಿಮುಖಗೊಂಡಿದ್ದಾನೆ ಎಂದೂ ಹೇಳಲಾಗುತ್ತಿದೆ. ಆದರೆ ಈಗಾಗಲೇ ಆತನ ವಿರುದ್ಧ ಸುಳ್ಳು ಸಾಕ್ಷಿ ವಿಚಾರದಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಲಾಗಿದೆ. ಅಲ್ಲದೆ, ಆತನ ಹೇಳಿಕೆಯಂತೆ ಗಿರೀಶ್ ಮಟ್ಟಣ್ಣವರ್, ಜಯನ್, ವಿಠಲ ಗೌಡರನ್ನು ಕರೆದು ವಿಚಾರಣೆ ನಡೆಸಲಾಗಿತ್ತು. ಇವರ ವಿಚಾರಣೆ ಸಂದರ್ಭದಲ್ಲಿ ವ್ಯತಿರಿಕ್ತ ಹೇಳಿಕೆ ಬಂದಿದ್ದರಿಂದ ಚಿನ್ನಯ್ಯ ಸುಳ್ಳು ಹೇಳುತ್ತಿದ್ದಾನೆಯೇ ಎಂಬ ಸಂಶಯ ಮೂಡಿತ್ತು.
ಹೀಗಾಗಿ ಹೊಸ ಹೇಳಿಕೆಯನ್ನು ಆಧರಿಸಿ ಅಧಿಕಾರಿಗಳು ಏಕಾಏಕಿ ತನಿಖಾ ಪ್ರಕ್ರಿಯೆ ಕೈಗೊಳ್ಳುವ ಸಾಧ್ಯತೆ ಇಲ್ಲ. ತನ್ನನ್ನು ಬಲವಂತದಿಂದ ಹೇಳಿಕೆ ಕೊಡಿಸುವಂತೆ ಮಾಡಿದ್ದರು ಎಂದು ಹೇಳಿದ್ದರೂ, ಆತನ ಹಿಂದಿನ ಹೇಳಿಕೆ ಮತ್ತು ಸೌಜನ್ಯಾ ಹೋರಾಟಗಾರರು ನೀಡಿರುವ ಹೇಳಿಕೆಯನ್ನು ತಾಳೆ ಹಾಕಿ ನೋಡಲಿದ್ದಾರೆ. ಚಿನ್ನಯ್ಯ ತನಗೆ ತಲೆಬುರುಡೆ ಬಗ್ಗೆ ಗೊತ್ತಿಲ್ಲ ಎಂದರೂ, ಆಬಳಿಕ ಅದನ್ನು ಬಂಗ್ಲೆಗುಡ್ಡೆ ಕಾಡಿನಿಂದಲೇ ತರಲಾಗಿತ್ತು ಎನ್ನುವ ಮಾಹಿತಿ ತಿಳಿದುಬಂದಿತ್ತು. ಅದೇ ರೀತಿ ಚಿನ್ನಯ್ಯ ತನ್ನ ಹೇಳಿಕೆ ಬದಲಿಸಿದರೂ, ಅಧಿಕಾರಿಗಳ ತನಿಖೆ ಕರಾರುವಾಕ್ಕಾಗಿದ್ದರೆ ಅದರಲ್ಲಿ ಆತನೇ ಮತ್ತೆ ಸಿಕ್ಕಿಬೀಳುವ ಸಾಧ್ಯತೆ ಇದೆ. ಚಿನ್ನಯ್ಯ ಕೋರ್ಟಿಗೆ ನೀಡಿರುವ ಹೇಳಿಕೆಯ ಪ್ರತಿ ಸಿಕ್ಕ ಬಳಿಕವೇ ಅಧಿಕಾರಿಗಳು ಈ ಬಗ್ಗೆ ನಿರ್ಣಯಿಸಲಿದ್ದಾರೆಂದು ತಿಳಿದುಬಂದಿದೆ.
ಇದೇ ವೇಳೆ, ಈವರೆಗೂ ಎಸ್ಐಟಿ ಸರಕಾರಕ್ಕಾಗಲೀ, ಕೋರ್ಟಿಗಾಗಲೀ ಯಾವುದೇ ಮಧ್ಯಂತರ ವರದಿಯನ್ನು ಸಲ್ಲಿಸಿಲ್ಲ ಎನ್ನುವ ವಿಚಾರವೂ ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದು ಮತ್ತು ಎಸ್ಐಟಿ ತನಿಖೆಯಿಂದ ವಾಸ್ತವ ಹೊರ ಬರುತ್ತಿದೆ ಎಂದು ಹೇಳಿಕೆ ನೀಡಿರುವುದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ ಆಗಿದೆಯಾ ಎನ್ನುವ ಅನುಮಾನ ಮೂಡಿಸಿತ್ತು.
ಇದೇ ವೇಳೆ, ಅಕ್ರಮ ಶಸ್ತ್ರಾಸ್ತ್ರ ಕಾಯಿದೆಯಡಿ ಬಂಧನ ಭೀತಿ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ. ಅವರ ಮನೆಗೆ ಈಗಾಗಲೇ ಮೂರು ಬಾರಿ ನೋಟೀಸ್ ಅಂಟಿಸಿರುವ ಪೊಲೀಸರು ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ಇದಲ್ಲದೆ, ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬರುವಂತೆಯೂ ಪೊಲೀಸರು ಸೂಚನೆ ನೀಡಿದ್ದಾರೆ. ತಿಮರೋಡಿಯನ್ನು ಬಂಧಿಸುವ ಸಾಧ್ಯತೆ ಅರಿತಿರುವ ಹೋರಾಟಗಾರರ ತಂಡವು ಅವರಿಗೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೊಡಿಸುವ ಯತ್ನದಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟಿನಲ್ಲಿ ಜಾಮೀನು ಅರ್ಜಿ ವಿಚಾರಣೆ ಹಂತದಲ್ಲಿದ್ದು, ಸೆ.30ರ ಮಂಗಳವಾರ ಮಧ್ಯಾಹ್ನ ಸರಕಾರಿ ವಕೀಲರು ಆಕ್ಷೇಪ ವಾದ ಮಂಡಿಸಲಿದ್ದಾರೆ. ತಿಮರೋಡಿ ಪರವಾಗಿ ಹಿರಿಯ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ ವಾದ ಮಂಡಿಸಿದ್ದಾರೆ.
In the Dharmasthala case, complainant Chinnayya has reportedly given a fresh statement before the Belthangady court, raising the possibility of the SIT reopening its investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am