ಬ್ರೇಕಿಂಗ್ ನ್ಯೂಸ್
02-10-25 11:43 am Mangalore Correspondent ಕರಾವಳಿ
ಮಂಗಳೂರು, ಅ.2: ಮಂಗಳೂರು ದಸರಾ ಸಂಭ್ರಮಕ್ಕೆ ತೆರೆಬೀಳಲು ಕೊನೆ ದಿನ ಇರುವಾಗ ಬುಧವಾರ ರಾತ್ರಿ 11 ಗಂಟೆಗೆ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು.
ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ಉಪ ಮುಖ್ಯಮಂತ್ರಿಗಳು, ಸಂಪ್ರದಾಯದಂತೆ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು. ದೇವಳ ಸ್ಥಾಪಿಸಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸನ್ನಿಧಿಗೆ ನಮಿಸಿ, ಸರ್ವ ದೇವರ ದರ್ಶನ ಪಡೆದು, ದರ್ಬಾರ್ ಮಂಟಪದಲ್ಲಿ ಶಾರದೆ ಮತ್ತು ನವದುರ್ಗೆಯರಿಗೆ ವಂದಿಸಿದರು. ಶಾರದೆಯ ಸನ್ನಿಧಿಯಲ್ಲಿ ಉಪ ಮುಖ್ಯಮಂತ್ರಿಗಳಿಗೆ ಪ್ರಸಾದ ನೀಡಿ, ದೇವಳದ ವತಿಯಿಂದ ಗೌರವಿಸಲಾಯಿತು.




ಬಳಿಕ ಮಾತನಾಡಿದ ಅವರು, ನಾನು ಇಂದು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಸಾಕ್ಷಾತ್ ಶಾರದಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಂತಿದೆ. ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಈ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿರುವುದು ನನ್ನ ಸೌಭಾಗ್ಯ. ಮಂಗಳೂರು ದಸರಾ ವೈಭವ ಕಂಡು ಬಹಳ ಸಂತೋಷವಾಯಿತು ಎಂದರು.
ದೇವಸ್ಥಾನದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ ಮಾಲಾರ್ಪಣೆಗೈದು ಸ್ವಾಗತಿಸಿದರು. ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಪೂಜಾರಿ, ಕೃತಿನ್ ಅಮೀನ್, ಕಿಶೋರ್ ದಂಡಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಹರೀಶ್ ಕುಮಾರ್ (ಮೆಸ್ಕಾಂ ಅಧ್ಯಕ್ಷರು), ಪಿ.ಕೆ.ಗೌರವಿ, ದೀಪಕ್ ಪೂಜಾರಿ ಹಾಗೂ ಸಮಿತಿ ಸದಸ್ಯರು, ಶಾಸಕರಾದ ಅಶೋಕ್ ಕುಮಾರ್ ರೈ, ಎಂ.ಎಲ್.ಸಿ. ಮಂಜುನಾಥ ಭಂಡಾರಿ, ರಕ್ಷಿತ್ ಶಿವರಾಂ ಬೆಳ್ತಂಗಡಿ, ಇನಾಯತ್ ಆಲಿ, ಶ್ರೀನಿವಾಸ್ ಬಿ.ವಿ., ದೇವಳದ ಆಡಳಿತ ಹಾಗೂ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
On the final evening of the Mangaluru Dasara festivities, Karnataka Deputy Chief Minister D.K. Shivakumar paid a late-night visit to the historic Kudroli Gokarnanatheshwara Temple on Wednesday.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm