ಬ್ರೇಕಿಂಗ್ ನ್ಯೂಸ್
04-10-25 10:29 pm Mangalore Correspondent ಕರಾವಳಿ
ಉಳ್ಳಾಲ, ಅ.4 : ಉಳ್ಳಾಲ ಶಾರದೋತ್ಸವ ಧಾರ್ಮಿಕತೆಯ ಆಚರಣೆಯ ಜೊತೆಯಲ್ಲಿ ಉಳ್ಳಾಲ ಪ್ರದೇಶದ ಸೌಹಾರ್ದತೆಯ ಸಂಕೇತವೂ ಆಗಿದೆ. ಮೊನ್ನೆ ನಡೆದ ಶಾರದೋತ್ಸವ ಶೋಭಾಯಾತ್ರೆಯಲ್ಲಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ನಡೆದ ಘರ್ಷಣೆ ಮತ್ತು ಪ್ರತಿಭಟನೆ ವಿಷಾದನೀಯ. ಘಟನೆಗೆ ಕೆಲ ಪೊಲೀಸರ ದುರ್ವರ್ತನೆಯೇ ಕಾರಣವೆಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇದರ ಬಗ್ಗೆ ಸಮರ್ಪಕ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದೇಶದಲ್ಲಿ ಸ್ಪೀಕರ್ ಕಾನ್ಫರೆನ್ಸ್ ನಲ್ಲಿರುವ ಯು.ಟಿ.ಖಾದರ್ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರಿಗೆ ನಿರ್ದೇಶನ ನೀಡಿದ್ದಾರೆ.
ಉಳ್ಳಾಲದಲ್ಲಿ ಕಳೆದ 78 ವರ್ಷಗಳಿಂದ ಶಾರದೋತ್ಸವ ಶೋಭಾಯಾತ್ರೆ ಅತ್ಯಂತ ಶ್ರದ್ಧೆ, ಪಾವಿತ್ರ್ಯತೆಯಿಂದ ನಡೆದುಕೊಂಡು ಬಂದಿದೆ. ಇಂತಹ ಶೋಭಾಯಾತ್ರೆಯು ಕೆಲಕಾಲ ಸ್ಥಗಿತಗೊಂಡು ಗೊಂದಲ ಉಂಟಾಗಿರುವುದು ವಿಷಾದನೀಯ. ಧಾರ್ಮಿಕ ನಂಬಿಕೆ, ಆಚರಣೆಗಳಿಗೆ ಎಂದಿಗೂ ಅಡ್ಡಿಯಾಗಬಾರದು. ಅಮಾಯಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವುದು ಪೊಲೀಸರ ಜವಾಬ್ದಾರಿಯೆಂದು ಯು.ಟಿ.ಖಾದರ್ ಹೇಳಿದ್ದಾರೆ.
ಕಳೆದ ಗುರುವಾರ ರಾತ್ರಿ ಉಳ್ಳಾಲದಲ್ಲಿ ನಡೆದ ದಸರಾ ಶೋಭಾಯಾತ್ರೆಯಲ್ಲಿ ಪೊಲೀಸರು ಟ್ಯಾಬ್ಲೋಗಳ ಧ್ವನಿವರ್ಧಕಗಳನ್ನ ಆಫ್ ಮಾಡಿದ್ದರು. ಈ ವೇಳೆ ಪೋಲೀಸರು ಮತ್ತು ಸಾರ್ವಜನಿಕರ ನಡುವೆ ಘರ್ಷಣೆ ನಡೆದಿತ್ತು. ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಇಬ್ಬರು ಅಮಾಯಕರನ್ನ ಸೇರಿಸಿ ಒಟ್ಟು ಮೂವರು ಯುವಕರನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿರಿಸಿದ್ದರು. ಅಮಾಯಕರ ಬಂಧನ ಖಂಡಿಸಿ ಸಮಾರು ಮೂರೂವರೆ ಗಂಟೆಗಳ ಕಾಲ ಶಾರದಾ ವಿಗ್ರಹವನ್ನ ರಸ್ತೆಯಲ್ಲಿರಿಸಿದ ಸಾರ್ವಜನಿಕರು ಉಳ್ಳಾಲ ಠಾಣೆಯ ಮುಂಭಾಗದಲ್ಲಿ ನೆರೆದು ಪ್ರತಿಭಟಿಸಿದ್ದರು. ಬಿಜೆಪಿ ಮುಖಂಡರ ಮಧ್ಯ ಪ್ರವೇಶ ಮತ್ತು ಭಾರೀ ಪ್ರತಿಭಟನೆಗೆ ಮಣಿದ ಪೊಲೀಸರು ಇಬ್ಬರು ಯುವಕರನ್ನ ಬಿಟ್ಟು ಕಳುಹಿಸಿದ್ದರು.
The Sharadotsava procession in Ullal, known for its religious devotion and communal harmony, witnessed an unfortunate clash between police and the public last week. Speaker UT Khader, currently abroad, expressed regret over the incident and directed Mangaluru City Police Commissioner Sudhir Kumar Reddy to investigate and take strict action against the erring officers. The controversy began when police allegedly switched off loudspeakers of tableaux during the procession, sparking a confrontation with locals. Three youths, including two said to be innocent, were detained, leading to a three-hour protest where devotees placed the Sharada idol on the road outside Ullal police station.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm