ಬ್ರೇಕಿಂಗ್ ನ್ಯೂಸ್
06-10-25 02:58 pm Mangalore Correspondent ಕರಾವಳಿ
ಮಂಗಳೂರು, ಅ.6 : ಟ್ರಾಫಿಕ್ ಸಿಬಂದಿಯೊಬ್ಬರು ಕರ್ತವ್ಯ ಸಂದರ್ಭದಲ್ಲಿ ಕುಡಿದು ಕಾರು ಚಲಾಯಿಸಿಕೊಂಡು ಬರುತ್ತಿದ್ದ ವ್ಯಕ್ತಿಯನ್ನು ನಿಲ್ಲಿಸಲು ಯತ್ನಿಸಿದಾಗ ಕಾರಿನ ಹಿಂಬದಿ ಗಾಜು ಒಡೆದು ಹೋದ ಘಟನೆ ನಗರದ ನಂತೂರಿನಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅ.2ರಂದು ರಾತ್ರಿ ಕುದ್ರೋಳಿ ದಸರಾ ಮೆರವಣಿಗೆಯಿದ್ದ ಸಂದರ್ಭದಲ್ಲಿ ನಂತೂರಿನಲ್ಲಿ ತಡರಾತ್ರಿ ಘಟನೆ ನಡೆದಿದೆ. ಪಂಪ್ವೆಲ್ ಕಡೆಯಿಂದ ಬಂದಿದ್ದ ಕಾರನ್ನು ಅಲ್ಲಿದ್ದ ಪೊಲೀಸ್ ಸಿಬಂದಿ ನಿಲ್ಲಿಸಲು ಸೂಚಿಸಿದ್ದು, ನಿಲ್ಲಿಸದೇ ಇದ್ದಾಗ ಕಾರಿನ ಹಿಂಬದಿಗೆ ಕೈಯಲ್ಲಿ ಬಡಿದಿದ್ದಾರೆ. ಈ ವೇಳೆ, ಕಾರಿನ ಹಿಂಬದಿಯ ಗ್ಲಾಸ್ ಒಡೆದಿದ್ದು, ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಪೊಲೀಸರನ್ನು ತರಾಟೆಗೆತ್ತಿಕೊಂಡಿದ್ದಾರೆ. ಅಲ್ಲಿದ್ದ ಒಬ್ಬರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು, ಪೊಲೀಸರಿಗೆ ಪ್ರಶ್ನೆ ಮಾಡುವ ವಿಡಿಯೋ ಇದೆ.


ವಿಡಿಯೋ ವೈರಲ್ ಆಗುತ್ತಲೇ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದು, ಸದ್ರಿ ಘಟನೆ ಹಿನ್ನೆಲೆಯಲ್ಲಿ ಕದ್ರಿ ಸಂಚಾರಿ ಠಾಣೆಯಲ್ಲಿ ಡ್ರಂಕ್ ಆಂಡ್ ಡ್ರೈವ್ ಕೇಸು ದಾಖಲಾಗಿದೆ. ಅಲ್ಲದೆ, ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಶಿವಪ್ರಸಾದ್ ಎಂಬವನಾಗಿದ್ದು, 2018ರಲ್ಲಿ ನಡೆದ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಪ್ರಮುಖ ಆರೋಪಿ. ಅಲ್ಲದೆ, ಬರ್ಕೆ ಠಾಣೆಯಲ್ಲಿ ರೌಡಿಶೀಟರ್ ಹೊಂದಿದ್ದಾನೆ.
ಪೊಲೀಸರು ಕರ್ತವ್ಯ ಲೋಪ ಮಾಡಿದ್ದಾರೆಂದು ಬಿಂಬಿಸಿ ಈ ವಿಡಿಯೋ ಜಾಲತಾಣದಲ್ಲಿ ವೈರಲ್ ಮಾಡುವುದು ರೌಡಿಯೊಬ್ಬನಿಗೆ ಸಪೋರ್ಟ್ ಮಾಡಿದಂತಾಗುತ್ತದೆ. ಆ ಬಗ್ಗೆ ಪೊಲೀಸರಿಗೆ ವಿವರಣೆ ಕೊಡಬೇಕಾಗುತ್ತದೆ. ಸದ್ರಿ ಘಟನೆ ಹೇಗಾಗಿದೆ ಎನ್ನುವುದು ತಿಳಿಯಬೇಕಷ್ಟೆ. ಆದರೆ ಕುಡಿದು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ತಡೆದ ಪೊಲೀಸ್ ಸಿಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ. ಪೊಲೀಸರ ವಿರುದ್ಧ ಅನ್ನುವ ಕಾರಣಕ್ಕೆ ತಾವೇ ನ್ಯಾಯ ತೀರ್ಮಾನ ಮಾಡಿಕೊಂಡು ವಿಡಿಯೋ ವೈರಲ್ ಮಾಡುವುದು ಸರಿ ಎನಿಸುವುದಿಲ್ಲ ಎಂದು ಕಮಿಷನರ್ ಹೇಳಿದ್ದಾರೆ.
ತಡರಾತ್ರಿ ವೇಳೆ ಮೆರವಣಿಗೆ ನೋಡಿ ತೆರಳುತ್ತಿದ್ದ ಸಂದರ್ಭದಲ್ಲಿ ಘಟನೆಯಾಗಿದ್ದು, ಶಿವಪ್ರಸಾದ್ ಆಪ್ತರು ಸೇರಿ ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ್ದು ವಿಡಿಯೋದಲ್ಲಿದೆ. ಏನ್ ರೌಡಿಸಂ ಮಾಡುತ್ತಿದ್ದೀರಾ, ಗಾಡಿಗೆ ಒಡೆದಿದ್ದು ಯಾಕೆ. ತಪ್ಪಾಗಿದ್ದರೆ ಕೇಸ್ ಹಾಕಿ, ಅದು ಬಿಟ್ಟು ಗಾಡಿಗೆ ಒಡೆದು ಗ್ಲಾಸ್ ಪುಡಿ ಮಾಡಿದ್ದು ಯಾಕೆಂದು ಜನರು ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಕದ್ರಿ ಸಂಚಾರಿ ವಿಭಾಗದ ಪೊಲೀಸರಲ್ಲಿ ಕೇಳಿದಾಗ, ಅದು ಗ್ಲಾಸ್ ಒಡೆದಿದ್ದು ಹೇಗೆಂದು ತಿಳಿಯುತ್ತಿಲ್ಲ. ಬಿರುಕು ಬಿಟ್ಟಿತ್ತೋ ಏನೋ.. ಕೈಯಲ್ಲಿ ಒಡೆದಾಗ ಹಾಗೆಲ್ಲ ಗಾಜು ಒಡೆದು ಹೋಗಲ್ಲ ಎಂದಿದ್ದಾರೆ.
A drunk driving #murder accused crashes into controversy in #Mangaluru! 🚨 When traffic cops tried to stop his car, a rear window shattered — public outrage followed. But guess what? The driver is an accused in the RTI activist #baliga murder case & a known rowdy.#mangalorepolice pic.twitter.com/nGw1V48trI
— Headline Karnataka (@hknewsonline) October 6, 2025
A late-night incident in Mangaluru’s Nanthoor, where a traffic cop tried to stop a car and its rear glass broke, has gone viral on social media. The video shows the public confronting the police, sparking debate. It was later revealed that the driver was Shivaprasad, a rowdy-sheeter and key accused in the 2018 RTI activist Vinayak Baliga murder case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am