ಬ್ರೇಕಿಂಗ್ ನ್ಯೂಸ್
07-10-25 11:14 pm Mangalore Correspondent ಕರಾವಳಿ
ಉಳ್ಳಾಲ, ಅ.7 : ಮರದ ಕೊಂಬೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆಬುರುಡೆ, ಅಸ್ಥಿಪಂಜರ ಪತ್ತೆಯಾದ ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್ ಒಳಗಡೆ ಮಂಗಳವಾರ ಬೆಳಗ್ಗೆ ಅಸ್ಥಿಪಂಜರ ಪತ್ತೆಯಾಗಿತ್ತು.
ಕೇರಳ ಗಡಿಭಾಗದ ಮಂಜೇಶ್ವರ ಠಾಣಾ ವ್ತಾಪ್ತಿಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಬಿಹಾರ ಮೂಲದ ಅಪ್ರಾಪ್ತ ವಲಸೆ ಕಾರ್ಮಿಕನೊಬ್ಬ ನಾಪತ್ತೆಯಾಗಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಅದೇ ವ್ಯಕ್ತಿಯ ಶವ ಇದಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.




ಕುಂಜತ್ತೂರಿನ ಫರ್ನೀಚರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ರಾಹುಲ್ ಕುಮಾರ್ (17) ಎಂಬ ಸ್ಪುರದ್ರೂಪಿ ಅಪ್ರಾಪ್ತ ನಾಪತ್ತೆಯಾಗಿದ್ದ ಬಗ್ಗೆ ಆಗಸ್ಟ್ 7 ರಂದು ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ, ತಲೆಬುರುಡೆ ಪತ್ತೆಯಾಗಿದ್ದು ಇದು ಆತನದ್ದೇ ಇರಬಹುದೆಂದು ಹೇಳಲಾಗುತ್ತಿದೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ ಶರ್ಟ್ ಪತ್ತೆಯಾಗಿದ್ದು ಮೇಲ್ನೋಟಕ್ಕೆ ಗಂಡಸಿನ ದೇಹದ ಅವಶೇಷಗಳಂತೆ ಕಾಣುತ್ತಿತ್ತು. ಬರ್ಮುಡ ಚಡ್ಡಿಯಲ್ಲಿ ಮೊಬೈಲ್ ಫೋನ್ ಕೂಡ ಪತ್ತೆಯಾಗಿತ್ತು.
ಅಸ್ಥಿಪಂಜರದ ಜೊತೆ ದೊರೆತ ಮೊಬೈಲ್ ಸಿಮ್ ಕಾರ್ಡ್ ಸಂಖ್ಯೆ ಮತ್ತು ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ರಾಹುಲ್ ಮೊಬೈಲ್ ಸಂಖ್ಯೆ ಪರಸ್ಪರ ತಾಳೆಯಾಗಿದ್ದು ಕಳೇಬರ ರಾಹುಲ್ ನದ್ದಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಎಫ್ ಎಸ್ಎಲ್ ವರದಿ ಬಂದ ಬಳಿಕವೇ ಮೃತರ ಅಧಿಕೃತ ಗುರುತು ಪತ್ತೆಯಾಗಲಿದೆ.
ಉಳ್ಳಾಲ ಪೊಲೀಸರು ಮತ್ತು ಎಫ್ಎಸ್ಎಲ್ ತಜ್ಞರು ಬುರುಡೆ, ಎಲುಬುಗಳು ಮತ್ತು ಇತರ ಅವಶೇಷಗಳನ್ನ ಸಂಸ್ಕರಿಸಿ ಪರಿಶೀಲನೆಗೆ ಕಳುಹಿಸಿದ್ದಾರೆ. ಅಕ್ಷಯ ಫಾರ್ಮ್ ಸುತ್ತಲೂ ಆವರಣ ಗೋಡೆಯಿದ್ದು ಇದರ ಒಳಗಡೆ ಕುಂಜತ್ತೂರಿನ ವಲಸೆ ಕಾರ್ಮಿಕ ಬಂದಿದ್ದು ಹೇಗೆ? ಕೊಲೆ ಮಾಡಿ ನೇತು ಹಾಕಿದ್ದಾರೆಯೇ ಇತ್ಯಾದಿ ಪ್ರಶ್ನೆಗಳೂ ಎದುರಾಗಿದ್ದು ಉಳ್ಳಾಲ ಮತ್ತು ಮಂಜೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Police in Ullal have launched an investigation after skeletal remains, including a human skull, were discovered at Akshaya Farm in Talapadi Devipura on Tuesday morning. The body was found hanging from a tree, tied with a rope, and partially decomposed. Clothing items—a green t-shirt and green shorts—along with a mobile phone were recovered from the site.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am