ಬ್ರೇಕಿಂಗ್ ನ್ಯೂಸ್
08-10-25 10:09 pm Mangalore Correspondent ಕರಾವಳಿ
ಉಳ್ಳಾಲ, ಅ.8 : ಉಳ್ಳಾಲದ ಕೋಟೆಪುರದ ಮೀನಿನ ಆಹಾರ ತಯಾರಿಕ ಸಂಸ್ಕರಣಾ ಘಟಕ (ಗೋದಾಮು)ದಲ್ಲಿ ಬುಧವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು , ಗೋದಾಮು ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಸಮೀಪದ ಫ್ಯಾಕ್ಟರಿಯ ಬಾಯ್ಲರ್ಗೂ ಬೆಂಕಿ ವ್ಯಾಪಿಸಿದ್ದು ಸ್ಥಳೀಯರು ಸಮಯ ಪ್ರಜ್ಞೆ ಮೆರೆದು ಬೆಂಕಿ ನಂದಿಸಿದ ಪರಿಣಾಮ ಭಾರೀ ಪ್ರಮಾಣದ ಅವಘಡ ತಪ್ಪಿದೆ.
ಎಚ್.ಕೆ.ಖಾದರ್ ಎಂಬವರಿಗೆ ಸೇರಿದ ಎಂಎಂಪಿ ಫಿಶ್ ಮೀಲ್ ಫ್ಯಾಕ್ಟರಿ ಗೋದಾಮಿನಲ್ಲಿ ಬೆಂಕಿ ಅವಘಡ ನಡೆದಿದೆ. ಸಂಜೆ ವೇಳೆ ಗೋದಾಮಿನ ಒಳಗಡೆ ಕಾಣಿಸಿಕೊಂಡ ಬೆಂಕಿ ಏಕಾಏಕಿ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆ ಗೋದಾಮಿನ ಹೊರಕ್ಕೂ ವ್ಯಾಪಿಸಿದ್ದು ಸಮೀಪದ ಫಿಶ್ ಮೀಲ್ ಫ್ಯಾಕ್ಟರಿಯ ಬಾಯ್ಲರ್ಗೆ ತಗಲುವಷ್ಟರಲ್ಲಿ ಸಮಯ ಪ್ರಜ್ಞೆ ಮೆರೆದ ಸ್ಥಳೀಯರು ನೀರು ಎರಚಿ ಬೆಂಕಿಯ ಕೆನ್ನಾಲಿಗೆಯನ್ನ ತಹಬದಿಗೆ ತಂದಿದ್ದಾರೆ. ಬಾಯ್ಲರ್ ಗೆ ಬೆಂಕಿ ತಗಲುತ್ತಿದ್ದರೆ ಅದು ಸ್ಫೋಟಗೊಂಡು ಸ್ಥಳೀಯ ನಿವಾಸಿಗಳ ಮಾರಣಹೋಮವೇ ನಡೆಯುತ್ತಿತ್ತೆಂದು ಸ್ಥಳೀಯರು ದೂರಿದ್ದಾರೆ. ತುಂಬಾ ಹೊತ್ತಿನ ಬಳಿಕ ಮಂಗಳೂರಿನಿಂದ ಅಗ್ನಿಶಾಮಕ ದಳದ ವಾಹನ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ.






ಕೋಟೆಪುರದ ಜನನಿಬಿಡ ಪ್ರದೇಶದಲ್ಲಿ ಸಾಸಿವೆ ಬೀಳಲೂ ಅವಕಾಶವಿಲ್ಲದಂತೆ ಒಂದೇ ಕಡೆಯಲ್ಲಿ ಹದಿನಾಲ್ಕು ಫ್ಯಾಕ್ಟರಿಗಳು ನಿಯಮಗಳನ್ನ ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದು ಸರಿಯಾದ ಮೂಲಭೂತ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿಲ್ಲ. ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕರನ್ನು ಅಪಾಯದಲ್ಲಿರಿಸಿ ಫಿಶ್ ಮೀಲ್ ಘಟಕಗಳು ಕಾರ್ಯಾಚರಿಸುತ್ತಿದ್ದರೂ, ಅಧಿಕಾರಿಗಳು ಮೌನ ವಹಿಸಿದ್ದಾರೆ. ನಿಯಮಗಳನ್ನ ಉಲ್ಲಂಘಿಸಿ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುವ ಫಿಶ್ ಫುಡ್ ಮತ್ತು ಆಯಿಲ್ ಮಿಲ್ ಸೇರಿ ಒಟ್ಟು ಹದಿನಾಲ್ಕು ಫ್ಯಾಕ್ಟರಿಗಳಲ್ಲಿ ಕನಿಷ್ಟ ಸುರಕ್ಷತಾ ಕ್ರಮಗಳನ್ನೇ ಅನುಸರಿಸುತ್ತಿಲ್ಲ. ಆಂಬ್ಯುಲೆನ್ಸ್, ಅಗ್ನಿಶಾಮಕ ವಾಹನಗಳೂ ಸ್ಥಳದಲ್ಲಿಲ್ಲ. ಘಟನೆ ಸಂಭವಿಸಿದಾಗ ಮಂಗಳೂರಿನಿಂದಲೇ ತುರ್ತು ವಾಹನಗಳು ಇಲ್ಲಿಗೆ ಬರಬೇಕಾಗಿದೆ. ಸ್ವಲ್ಪ ಎಚ್ಚರಿಕೆ ತಪ್ಪಿದರೂ ಪ್ರದೇಶದ ನೂರಾರು ಮನೆಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ.
ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿರುವ ಫಿಶ್ ಮೀಲ್ ಫ್ಯಾಕ್ಟರಿಗಳಿಗೆ ಸಾಗುವ ಲಾರಿಗಳು ಮೀನಿನ ತ್ಯಾಜ್ಯವನ್ನ ರಸ್ತೆಗೆ ಸುರಿಸಿ ಪ್ರದೇಶವನ್ನ ಗಬ್ಬು ನಾರಿಸುತ್ತಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ವರದಿ ಮಾಡಿತ್ತು. ಇಷ್ಟಲ್ಲದೆ ಫ್ಯಾಕ್ಟರಿಗಳಿಗೆ ಮಂಗಳೂರು ಮತ್ತು ಕೇರಳದಿಂದ ದಿವಸಕ್ಕೆ ಇನ್ನೂರಕ್ಕೂ ಅಧಿಕ ಕಂಟೇನರ್ ಇನ್ನಿತರ ಲಾರಿಗಳು ಸಾಗುತ್ತಿದ್ದು ರಸ್ತೆಯಲ್ಲೇ ಕೆಟ್ಟು ನಿಂತಿದ್ದರಿಂದ 3-4 ದಿನದ ವರೆಗೂ ಉಳ್ಳಾಲದ ರಾಜರಸ್ತೆ ಹಾಗೂ ತೊಕ್ಕೊಟ್ಟು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ವಾಹನ ಸವಾರರು ಆಕ್ರೋಶಗೊಂಡಿದ್ದರು. ಹೆಡ್ ಲೈನ್ ಕರ್ನಾಟಕ ವರದಿಗೆ ಸ್ಫಂದಿಸಿದ ಡಿಸಿಪಿ ರವಿಶಂಕರ್ ಅವರು ಟ್ರಾಫಿಕ್ ಪೊಲೀಸರ ಮೂಲಕ ತ್ಯಾಜ್ಯವನ್ನ ರಸ್ತೆಗೆ ಹರಿಸುವ ಲಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
A major fire broke out on Wednesday evening at a fish meal processing unit warehouse in Kotepura, Ullal, causing heavy property damage worth several lakhs. The fire, which started inside the warehouse owned by H.K. Khader’s MMP Fish Meal Factory, quickly spread toward a nearby factory boiler.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am