ಬ್ರೇಕಿಂಗ್ ನ್ಯೂಸ್
09-10-25 01:59 pm Udupi Correspondent ಕರಾವಳಿ
ಉಡುಪಿ, ಅ.9 : 13 ವರ್ಷಗಳ ಹಿಂದೆ ಪಿಯುಸಿ ಕಲಿಯುತ್ತಿದ್ದಾಗ ಕಾಣೆಯಾಗಿದ್ದ ಯುವಕನನ್ನು ಉಡುಪಿ ಪೊಲೀಸರು ಹುಡುಕಾಡಿ ಬೆಂಗಳೂರಿನಲ್ಲಿ ಪತ್ತೆ ಮಾಡಿದ್ದು ಯುವಕನನ್ನು ಮತ್ತೆ ಮನೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಕಾರ್ಕಳ ತಾಲೂಕಿನ ಮುಂಡ್ಕೂರು ಬಳಿಯ ನಿವಾಸಿ ಪ್ರಭಾಕರ ಪ್ರಭು ಎಂಬವರ ಮಗ ಅನಂತಕೃಷ್ಣ ಪ್ರಭು(16) 13 ವರ್ಷಗಳ ಬಳಿಕ ಮರಳಿ ಗೂಡು ಸೇರಿದ ಯುವಕ. 2012 ಡಿಸೆಂಬರ್ 6ರಂದು ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಗ ಮನೆಯಿಂದ ದೇವಸ್ಥಾನಕ್ಕೆಂದು ಹೋಗಿ ಬರುವುದಾಗಿ ಹೇಳಿ ಹೋದವನು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದ. ಈ ಬಗ್ಗೆ ಅವರ ತಂದೆ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನೆಯವರಿಗೆ ಹೆದರಿ ಮತ್ತು ಮುಖ ತೋರಿಸಲಾಗದೆ ಮನೆಯಿಂದ ತಪ್ಪಿಸಿಕೊಂಡಿದ್ದ. ಯಾವುದೇ ಸುಳಿವು ಲಭಿಸದ ಕಾರಣ ಪೊಲೀಸರು ಹುಡುಕಾಟ ಕೈಬಿಟ್ಟಿದ್ದರು. ವಿಶೇಷ ತನಿಖಾ ತಂಡ ರಚಿಸಿ, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗಿತ್ತು. ಇತ್ತೀಚೆಗೆ ಯುವಕ ಬೆಂಗಳೂರಿನಲ್ಲಿ ವಾಸವಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿ, ಅನಂತಕೃಷ್ಣ (29) ನನ್ನು ಭೇಟಿ ಮಾಡಿದ್ದರು. ಅಲ್ಲಿಂದ ಉಡುಪಿಗೆ ಕರೆತಂದು ಪೋಷಕರ ಸುಪರ್ದಿಗೆ ಒಪ್ಪಿಸಿದ್ದಾರೆ. 13 ವರ್ಷಗಳಿಂದ ಪತ್ತೆಯಾಗದೇ ಇರುವ ಹಳೆ ಪ್ರಕರಣವನ್ನು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸೂಚನೆಯಂತೆ, ಡಿವೈಎಸ್ಪಿ ಪ್ರಭು ಡಿ.ಟಿ, ಬ್ರಹ್ಮಾವರ ಎಸ್ಐ ಸುದರ್ಶನ್ ದೊಡ್ಮನಿ, ಉಡುಪಿ ನಗರ ಎಸ್ಐ ಈರಣ್ಣ ಶಿರಗುಂಪಿ, ಹೆಡ್ ಕಾನ್ಸ್ಟೇಬಲ್ ಗಳಾದ ಇಮ್ರಾನ್, ಚೇತನ್, ಸಂತೋಷ್ ದೇವಾಡಿಗ ಮತ್ತು ಮಲ್ಲಯ್ಯ ಹಿರೇಮಠ ಅವರನ್ನೊಳಗೊಂಡ ತಂಡ ಭೇದಿಸಲು ಯಶಸ್ವಿಯಾಗಿದೆ.
ಪತ್ತೆಯಾಗದ ಹಳೆ ಪ್ರಕರಣಗಳನ್ನು ಕೆದಕಿ, ಕೇಸ್ ಪತ್ತೆ ಮಾಡುವ ಬಗ್ಗೆ ಎಸ್ಪಿ ಹರಿರಾಮ್ ಟಾಸ್ಕ್ ನೀಡಿದ್ದಾರೆ.
A young man who went missing 13 years ago while studying in PUC has finally been reunited with his family, thanks to the efforts of the Udupi police who traced him in Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am