ಬ್ರೇಕಿಂಗ್ ನ್ಯೂಸ್
09-10-25 07:23 pm Mangalore Correspondent ಕರಾವಳಿ
ಮಂಗಳೂರು, ಅ.9 : ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ನಿರೀಕ್ಷಣಾ ಜಾಮೀನು ಕೋರಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸೆಶನ್ಸ್ ಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಧೀಶ ಬಸವರಾಜು ವಜಾಗೊಳಿಸಿದ್ದಾರೆ.
ಸೆ.27ರಿಂದ ನಿರಂತರವಾಗಿ ಮಹೇಶ್ ಶೆಟ್ಟಿ ಪರವಾಗಿ ಹಿರಿಯ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ ವಾದ ಮಂಡಿಸಿದ್ದರು. ಸರ್ಕಾರದ ಪರವಾಗಿ ಜುಡಿತ್ ಮಸ್ಕರೇನಸ್ ಅವರು ವಾದಿಸಿದ್ದರು. ಎರಡೂ ಕಡೆಯ ವಾದ ಆಲಿಸಿದ್ದ ನ್ಯಾಯಾಧೀಶರು ಅ.9ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.
ಇದೀಗ ಸಂಜೆಯ ವೇಳೆಗೆ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಮಾಡಿದ್ದಾರೆ. ಯಾವ ಆಧಾರದಲ್ಲಿ ಅರ್ಜಿಯನ್ನು ವಜಾ ಮಾಡಲಾಗಿದೆ ಎನ್ನುವ ಬಗ್ಗೆ ಆದೇಶದ ಪ್ರತಿಯನ್ನು ನೋಡಿಯೇ ಹೇಳಬೇಕು ಎಂದು ವಕೀಲ ದಿನೇಶ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ. ಎಸ್ಐಟಿ ಪೊಲೀಸರು ಸೆ.16ರಂದು ಮಹೇಶ್ ಶೆಟ್ಟಿ ಮನೆಯಲ್ಲಿ ಶೋಧ ನಡೆಸಿದ್ದಾಗ ಎರಡು ತಲವಾರು ಮತ್ತು ಏರ್ ಗನ್ ಪತ್ತೆಯಾಗಿತ್ತು. ಈ ಕಾರಣದಿಂದ ವಿಚಾರಣೆಗೆ ಹಾಜರಾಗಬೇಕೆಂದು ಎಸ್ಐಟಿ ನೋಟಿಸ್ ಮಾಡಿತ್ತು.
ಇದರ ನೆಪದಲ್ಲಿ ಮಹೇಶ್ ಶೆಟ್ಟಿ ಅವರನ್ನು ಬಂಧಿಸುವ ಸಾಧ್ಯತೆ ಇದ್ದುದರಿಂದ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಸುದೀರ್ಘ ವಾದ ಆಲಿಸಿದ ಬಳಿಕ ನ್ಯಾಯಾಧೀಶರು ಅರ್ಜಿಯನ್ನು ವಜಾ ಮಾಡಿದ್ದು, ಹೋರಾಟಗಾರರ ತಂಡಕ್ಕೆ ನಿರಾಸೆ ಮೂಡಿಸಿದೆ. ಈಗಾಗಲೇ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಶಸ್ತ್ರಾಸ್ತ್ರ ಪ್ರಕರಣದಲ್ಲಿಯೂ ಇನ್ನು ಹೈಕೋರ್ಟಿನಲ್ಲೇ ಜಾಮೀನಿಗೆ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ ಕೋರ್ಟಿಗೆ ಶರಣಾಗಬೇಕಾಗುತ್ತದೆ.
In a major setback for activist Mahesh Shetty Timarodi, the Dakshina Kannada District and Sessions Court has rejected his anticipatory bail plea in connection with the illegal arms case. The order was delivered by Judge Basavaraju after hearing arguments from senior advocate Dinesh Hegde Ulepady, representing Mahesh Shetty, and government prosecutor Judith Mascarenhas.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am