ಬ್ರೇಕಿಂಗ್ ನ್ಯೂಸ್
09-10-25 07:23 pm Mangalore Correspondent ಕರಾವಳಿ
ಮಂಗಳೂರು, ಅ.9 : ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ನಿರೀಕ್ಷಣಾ ಜಾಮೀನು ಕೋರಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸೆಶನ್ಸ್ ಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಧೀಶ ಬಸವರಾಜು ವಜಾಗೊಳಿಸಿದ್ದಾರೆ.
ಸೆ.27ರಿಂದ ನಿರಂತರವಾಗಿ ಮಹೇಶ್ ಶೆಟ್ಟಿ ಪರವಾಗಿ ಹಿರಿಯ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ ವಾದ ಮಂಡಿಸಿದ್ದರು. ಸರ್ಕಾರದ ಪರವಾಗಿ ಜುಡಿತ್ ಮಸ್ಕರೇನಸ್ ಅವರು ವಾದಿಸಿದ್ದರು. ಎರಡೂ ಕಡೆಯ ವಾದ ಆಲಿಸಿದ್ದ ನ್ಯಾಯಾಧೀಶರು ಅ.9ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.
ಇದೀಗ ಸಂಜೆಯ ವೇಳೆಗೆ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಮಾಡಿದ್ದಾರೆ. ಯಾವ ಆಧಾರದಲ್ಲಿ ಅರ್ಜಿಯನ್ನು ವಜಾ ಮಾಡಲಾಗಿದೆ ಎನ್ನುವ ಬಗ್ಗೆ ಆದೇಶದ ಪ್ರತಿಯನ್ನು ನೋಡಿಯೇ ಹೇಳಬೇಕು ಎಂದು ವಕೀಲ ದಿನೇಶ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ. ಎಸ್ಐಟಿ ಪೊಲೀಸರು ಸೆ.16ರಂದು ಮಹೇಶ್ ಶೆಟ್ಟಿ ಮನೆಯಲ್ಲಿ ಶೋಧ ನಡೆಸಿದ್ದಾಗ ಎರಡು ತಲವಾರು ಮತ್ತು ಏರ್ ಗನ್ ಪತ್ತೆಯಾಗಿತ್ತು. ಈ ಕಾರಣದಿಂದ ವಿಚಾರಣೆಗೆ ಹಾಜರಾಗಬೇಕೆಂದು ಎಸ್ಐಟಿ ನೋಟಿಸ್ ಮಾಡಿತ್ತು.
ಇದರ ನೆಪದಲ್ಲಿ ಮಹೇಶ್ ಶೆಟ್ಟಿ ಅವರನ್ನು ಬಂಧಿಸುವ ಸಾಧ್ಯತೆ ಇದ್ದುದರಿಂದ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಸುದೀರ್ಘ ವಾದ ಆಲಿಸಿದ ಬಳಿಕ ನ್ಯಾಯಾಧೀಶರು ಅರ್ಜಿಯನ್ನು ವಜಾ ಮಾಡಿದ್ದು, ಹೋರಾಟಗಾರರ ತಂಡಕ್ಕೆ ನಿರಾಸೆ ಮೂಡಿಸಿದೆ. ಈಗಾಗಲೇ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಶಸ್ತ್ರಾಸ್ತ್ರ ಪ್ರಕರಣದಲ್ಲಿಯೂ ಇನ್ನು ಹೈಕೋರ್ಟಿನಲ್ಲೇ ಜಾಮೀನಿಗೆ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ ಕೋರ್ಟಿಗೆ ಶರಣಾಗಬೇಕಾಗುತ್ತದೆ.
In a major setback for activist Mahesh Shetty Timarodi, the Dakshina Kannada District and Sessions Court has rejected his anticipatory bail plea in connection with the illegal arms case. The order was delivered by Judge Basavaraju after hearing arguments from senior advocate Dinesh Hegde Ulepady, representing Mahesh Shetty, and government prosecutor Judith Mascarenhas.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am