ಬ್ರೇಕಿಂಗ್ ನ್ಯೂಸ್
11-10-25 11:11 am Mangalore Correspondent ಕರಾವಳಿ
ಮಂಗಳೂರು, ಅ.11: ಓಲಾ ಮತ್ತು ರಾಪಿಡೋ ಏಪ್ ನಲ್ಲಿ ಟ್ಯಾಕ್ಸಿ ಬುಕ್ ಮಾಡಿಸಿ, ಕರೆ ಮಾಡಿದ ಚಾಲಕನಿಗೆ ಮುಸ್ಲಿಂ ಟೆರರಿಸ್ಟ್ ಎಂದು ಹೇಳಿ ನಿಂದನೆ ಮಾಡಿರುವ ಘಟನೆ ಬಗ್ಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.9ರಂದು ರಾತ್ರಿ 10 ರಿಂದ 12 ಗಂಟೆಯ ನಡುವೆ ಘಟನೆ ನಡೆದಿದ್ದು, ಮಲಯಾಳಂ ಸೀರಿಯಲ್ ಮತ್ತು ಸಿನಿಮಾ ನಟರು ಈ ರೀತಿ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಓಲಾ ಮತ್ತು ರಾಪಿಡೋದಲ್ಲಿ ಟ್ಯಾಕ್ಸಿ ಬುಕ್ ಮಾಡಿ, ಆಬಳಿಕ ಲೊಕೇಶನ್ ಹಾಕಿದ್ದರು. ಎಲ್ಲಿದ್ದೀರಿ ಎಂದು ಚಾಲಕ ಕರೆ ಮಾಡಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಕರೆ ಮಾಡಿದ ವ್ಯಕ್ತಿಯನ್ನು ಮುಸ್ಲಿಂ ಎಂದು ತಿಳಿದು ನೀನು ಟೆರರಿಸ್ಟ್, ಮುಸ್ಲಿಂ ತೀವ್ರವಾದಿ ಎಂದು ಹೇಳಿ ನಿಂದನೆ ಮಾಡಿದ್ದಾರೆ. ಇದರ ಆಡಿಯೋವನ್ನು ಚಾಲಕ ರೆಕಾರ್ಡ್ ಮಾಡಿದ್ದು, ಉರ್ವಾ ಠಾಣೆಗೆ ನೀಡಿ ದೂರು ದಾಖಲಿಸಿದ್ದಾರೆ.
ದೂರಿನಂತೆ ವಿಮಲ್, ಸಂತೋಷ್ ಮತ್ತು ಇನ್ನೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಚಾಲಕನ ಮಾಹಿತಿ ಪ್ರಕಾರ, ಮಲಯಾಳಂ ಸಿನಿಮಾ ನಟರಾದ ಜಯಕೃಷ್ಣನ್ ಮತ್ತು ವಿಮಲ್ ಈ ರೀತಿ ಮಾಡಿದ್ದಾರೆಂದು ಆರೋಪಗಳಿವೆ. ಎಫ್ಐಆರ್ ಪ್ರತಿಯಲ್ಲಿ ಜಯಕೃಷ್ಣನ್ ಹೆಸರಿಲ್ಲ. ಆಬಳಿಕ ಸ್ನೇಹಿತರ ಮೂಲಕ ಇವರಿದ್ದ ಜಾಗವನ್ನು ಟ್ಯಾಕ್ಸಿಯವರು ಪತ್ತೆ ಮಾಡಿದ್ದಾರೆ.
ಈ ವೇಳೆ, ಬಿಜೈ ನ್ಯೂರೋಡ್ ಬಳಿ ಕೇರಳ ನೋಂದಣಿಯ ಸ್ಕಾರ್ಪಿಯೋ ಕಾರಿನಲ್ಲಿ ಕುಳಿತು ಮದ್ಯದ ನಶೆಯಲ್ಲಿ ಇವರು ಓಲಾ ಬುಕ್ ಮಾಡಿದ್ದು ಪತ್ತೆಯಾಗಿದೆ. ಬೇರೆ ಬೇರೆ ಕಡೆ ಲೊಕೇಶನ್ ಹಾಕಿ ದಾರಿ ತಪ್ಪಿಸುವಂತೆ ವರ್ತಿಸಿದ್ದಾರೆ. ಅಲ್ಲದೆ, ಟೆರರಿಸ್ಟ್ ಎಂದು ಹೇಳಿ ನಿಂದಿಸಿದ್ದಾರೆಂದು ದೂರಿನಲ್ಲಿ ಅಹ್ಮದ್ ಶಫೀಕ್ ತಿಳಿಸಿದ್ದಾರೆ.
In #Mangaluru, a case has been filed at Urwa Police Station after an Ola/ #Rapido driver was allegedly abused and called a “Muslim #terrorist” over the phone. The driver claims malayalam TV & film actors were behind the act. 3 have been booked. #Mangaluru #HateCrime #Ola pic.twitter.com/8gt76UCQs9
— Headline Karnataka (@hknewsonline) October 11, 2025
A shocking case of religious abuse has been reported from Mangaluru’s Urwa police limits, where a Malayalam film and serial actor and two others allegedly verbally abused an Ola/ Rapido driver, calling him a “Muslim terrorist.
30-01-26 05:00 pm
Bangalore Correspondent
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm