ಬ್ರೇಕಿಂಗ್ ನ್ಯೂಸ್
14-10-25 06:39 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬಾಳೆಪುಣಿ ಗ್ರಾಮದ ಮುದುಂಗಾರುಕಟ್ಟೆ ಬಸ್ ತಂಗುದಾಣದಲ್ಲಿ ಕೊಣಾಜೆ ಠಾಣೆಯ ಸರಕಳ್ಳತನದ ಆರೋಪಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮಾದಕ ಪದಾರ್ಥ ವ್ಯಸನದಿಂದ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ.
ಮುದುಂಗಾರುಕಟ್ಟೆ ಬಳಿಯ ಪಾತೂರು ನಿವಾಸಿ ಮಹಮ್ಮದ್ ನಿಯಾಫ್ (28) ಸಾವನ್ನಪ್ಪಿರುವ ಯುವಕ. ಇಂದು ಮಧ್ಯಾಹ್ನ ವ್ಯಕ್ತಿಯೋರ್ವರು ತಮ್ಮ ದ್ವಿಚಕ್ರ ವಾಹನವನ್ನು ಮುದುಂಗಾರು ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಲು ತೆರಳಿದಾಗ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಸ್ಥಳಕ್ಕೆ ಕೂಡಲೇ ಕೊಣಾಜೆ ಪೊಲೀಸರು ದೌಡಾಯಿಸಿದ್ದು, ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಿ, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮೃತ ನಿಯಾಫ್ ಬಾವಿಯ ರಿಂಗ್ ತಯಾರಿಕೆ ಹಾಗೂ ಇತರ ಕೂಲಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ. ಭಾನುವಾರ ಸಂಜೆ ಮನೆ ಬಿಟ್ಟಿದ್ದ ನಿಯಾಫ್ ನಿನ್ನೆ ಬೆಳಗ್ಗೆ ಚಿಕ್ಕಪ್ಪನ ಮನೆಗೆ ತೆರಳಿ ಮಾತಾನಾಡಿ ಹಿಂತಿರುಗಿದ್ದನಂತೆ. ಸಂಜೆ ಮನೆಗೆ ತೆರಳದ ನಿಯಾಫ್ ಫೋನ್ ಕೂಡ ಸ್ವಿಚ್ ಆಫ್ ಆಗಿದ್ದು, ಇಂದು ಮಧ್ಯಾಹ್ನ ವೇಳೆ ಶವವಾಗಿ ಪತ್ತೆಯಾಗಿದ್ದಾನೆ. ಮರಣೋತ್ತರ ಪರೀಕ್ಷೆ ಬಳಿಕವೇ ಸಾವಿಗೆ ನಿಖರ ಕಾರಣವೇನೆಂದು ತಿಳಿದು ಬರಬೇಕಿದೆ.
ಕಳೆದ ವರ್ಷ ಮುದುಂಗಾರುಕಟ್ಟೆಯ ಬಳಿ ಮಹಿಳೆಯ ಸರ ಕಳ್ಳತನ ಪ್ರಕರಣದಲ್ಲಿ ನಿಯಾಫ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿಯಾಫ್ ಮಾದಕ ಪದಾರ್ಥಗಳ ವ್ಯಸನಿಯೂ ಆಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
The body of a 28-year-old man accused in a theft case was found at the Mudungarukatte bus stop in Baalepuni village on Monday. The deceased has been identified as Mohammad Niyaf, a resident of Pathuru. Police suspect that drug addiction may have caused his death.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am