ಬ್ರೇಕಿಂಗ್ ನ್ಯೂಸ್
21-10-25 03:07 pm Mangalore Correspondent ಕರಾವಳಿ
ಮಂಗಳೂರು, ಅ.21 : ನಮ್ಮ ಸರ್ಕಾರ ಆರ್ಎಸ್ಎಸ್ ಅನ್ನು ನಿಷೇಧ ಮಾಡಿಲ್ಲ. 2013ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಆದೇಶ ಮಾಡಿದ್ದನ್ನೇ ಪುನರುಚ್ಛರಿಸಿದ್ದೇವೆ. ಅದರಲ್ಲಿ ಆರೆಸ್ಸೆಸ್ ಎಂದು ಯಾವುದೇ ಉಲ್ಲೇಖ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಆಯಾ ಪ್ರದೇಶದ ಕಾನೂನು ಪರಿಸ್ಥಿತಿ ಆಧಾರದ ಮೇಲೆ ಅನುಮತಿ ನೀಡಲಾಗುವುದು ಎಂದು ಹೇಳಿದರು.
ಶಾಲೆ, ಸರ್ಕಾರಿ ಕಚೇರಿ ಆವರಣದಲ್ಲಿ ಆರ್ಎಸ್ಎಸ್ ಚಟುವಟಿಕೆಗಳ ನಿರ್ಬಂಧ ಕುರಿತ ಪ್ರಶ್ನೆಗೆ ಉತ್ತರಿಸಿ, ಸರ್ಕಾರ ಆರ್.ಎಸ್.ಎಸ್ ಬಗ್ಗೆ ನಿಷೇಧ ಆದೇಶ ಮಾಡಿಲ್ಲ. ಶಾಲಾ- ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಹೇಳಿದರು.
ಆದೇಶದಲ್ಲಿ ಯಾವುದೇ ನಿರ್ದಿಷ್ಟ ಸಂಘ ಅಥವಾ ಸಂಸ್ಥೆ ಎಂಬುದು ಇಲ್ಲ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ? 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದಕ್ಕೆ ಪೂರ್ವಾನುಮತಿ ಪಡೆಯಬೇಕೆಂದು ಆದೇಶ ಹೊರಡಿಸಿದ್ದರು.
ಜಗದೀಶ್ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಆದೇಶ ಮಾಡಿತ್ತು ತಾನಲ್ಲ, ಆರೆಸ್ಸೆಸ್ ಅಂತ ಇರಲಿಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಸುತ್ತೋಲೆ ಜಾರಿಗೊಳಿಸಲಾಗಿತ್ತು. ಇಲ್ಲ ಎನ್ನುವುದು ಹೇಗೆ. ಅವರು ಮಾಡಿದರೆ ಸರಿ ನಾವು ಮಾಡಿದರೆ ತಪ್ಪು ಅಂತ ಆಗುತ್ತಾ.. ಯಾವುದೇ ಸಂಘ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕು ಎಂದಿದೆ. ಆದರೆ ಶಾಂತಿ ಸುವ್ಯವಸ್ಥೆ ಪರಿಣಾಮಗಳನ್ನು ಯೋಚಿಸಿ ಅನುಮತಿ ನೀಡುವುದು, ನಿರಾಕರಿಸುವುದು ಸ್ಥಳೀಯಾಡಳಿತಕ್ಕೆ ಬಿಟ್ಟದ್ದು ಎಂದು ತಿಳಿಸಿದರು.
ಇದೇ ವೇಳೆ ಹೊಸ ಜಿಎಸ್ಟಿ ವ್ಯವಸ್ಥೆ ಕುರಿತು ಪ್ರಧಾನಿ ಮೋದಿಯವರನ್ನು ಟೀಕಿಸಿದ ಸಿಎಂ, ಕೇಂದ್ರವು 2017 ರಲ್ಲಿ ಜಿಎಸ್ಟಿ ವ್ಯವಸ್ಥೆಯನ್ನು ಪರಿಚಯಿಸಿತು. ಎಂಟು ವರ್ಷಗಳ ಕಾಲ ತೆರಿಗೆ ಸಂಗ್ರಹಿಸಿದ ನಂತರ ಈಗ ಜಿಎಸ್ಟಿ ದರಗಳನ್ನು ಕಡಿಮೆ ಮಾಡಿದ್ದಾರೆ. ಅದನ್ನು ದೀಪಾವಳಿ ಉಡುಗೊರೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಜಿಎಸ್ಟಿ ಅನುಷ್ಠಾನದಿಂದಾಗಿ ಕರ್ನಾಟಕಕ್ಕೆ 1,500 ಕೋಟಿ ರೂ. ನಷ್ಟವಾಗಿದೆ ಎಂದು ಹೇಳಿದರು.
Chief Minister Siddaramaiah clarified in Puttur that the Congress government in Karnataka has not banned the RSS, but merely reissued a 2013 circular introduced by the then BJP government under Jagadish Shettar. The order mandates that any organization seeking to conduct programs in school or government premises must obtain prior permission, without naming any specific group such as the RSS.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am