ಬ್ರೇಕಿಂಗ್ ನ್ಯೂಸ್
22-10-25 09:55 pm Mangalore Correspondent ಕರಾವಳಿ
ಪುತ್ತೂರು, ಅ.22 : ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಗೋಸಾಗಾಟದ ಲಾರಿಗೆ ತಡೆಯೊಡ್ಡಿದ ಪ್ರಕರಣದಲ್ಲಿ ಹಿಂದು ಪರ ಮುಖಂಡ ಅರುಣ್ ಪುತ್ತಿಲ ಅವರು ತಲವಾರು ಹಿಡಿದು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸುವ ಯತ್ನ ನಡೆದಿದೆ. ಈ ಬಗ್ಗೆ ಎಸ್ಪಿ ಅರುಣ್ ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜಾನುವಾರುಗಳಲ್ಲಿ ಹಿಂಸಾತ್ಮಕ ರೀತಿ ಕಟ್ಟಿದ್ದರಿಂದ ಒಂದು ಜಾನುವಾರು ಸತ್ತಿತ್ತು. ಈ ವೇಳೆ, ಸ್ಥಳಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಗೋವು ಸತ್ತಿದ್ದನ್ನು ಗಮನಿಸಿ ಪೊಲೀಸರ ಅನುಮತಿ ಪಡೆದು ತುರ್ತಾಗಿ ಎತ್ತುಗಳನ್ನು ವಾಹನದಿಂದ ಇಳಿಸಲು ಮುಂದಾಗಿದ್ದಾರೆ. ಜಾನುವಾರಗಳು ಇನ್ನಷ್ಟು ಸಾವಾಗುವುದನ್ನು ತಪ್ಪಿಸಲು ಪೊಲೀಸರ ಜೊತೆಗೆ ವಾಹನವನ್ನು ಹೊರಭಾಗದಿಂದ ಕಟ್ಟಿದ್ದ ಹಗ್ಗವನ್ನು ಕತ್ತಿಯಲ್ಲಿ ಕಡಿದು ಹಾಕಿದ್ದಾರೆ. ಹತ್ತಿರದ ಮನೆಯಿಂದ ಕತ್ತಿಯನ್ನು ತರಿಸಿಕೊಂಡು ಕಟ್ಟಿ ಹಾಕಿದ್ದ ಹಗ್ಗಗಳನ್ನು ಕತ್ತರಿಸಿರುವುದಾಗಿದೆ.
ಆದರೆ ಅರುಣ್ಕುಮಾರ್ ಪುತ್ತಿಲ ಕೈಯಲ್ಲಿದ್ದ ಕತ್ತಿಯನ್ನು ಸಮೀಪದ ಮನೆಯೊಂದರಿಂದ ತರಲಾಗಿತ್ತು. ಘಟನೆ ನಡೆದ ಸ್ಥಳದ ಎದುರಿನ ಮುಸ್ಲಿಂ ಕುಟುಂಬದ ಮನೆಯಿಂದ ಆ ಕತ್ತಿಯನ್ನು ತರಲಾಗಿದ್ದು, ಜಾನುವಾರುಗಳನ್ನು ರಕ್ಷಿಸಲು ಸಹಾಯವಾಗಲೆಂದು ಅವರು ತಮ್ಮ ಮನೆಯಿಂದ ಕತ್ತಿಯನ್ನು ನೀಡಿದ್ದರು.
ಪೊಲೀಸರು ಇಂತಹ ಸಂದರ್ಭಗಳಲ್ಲಿ ಕೆಲವೊಮ್ಮೆ ಸ್ಥಳೀಯರು ಮತ್ತು ಇತರರ ಸಹಾಯವನ್ನು ಪಡೆಯುತ್ತಾರೆ. ಉದಾಹರಣೆಗೆ ರೋಗಿಗಳನ್ನು ಸ್ಥಳಾಂತರಿಸುವುದು, ಶವಗಳನ್ನು ಸಾಗಿಸುವುದು, ರಸ್ತೆಗಳಿಂದ ವಾಹನಗಳನ್ನು ತೆರವುಗೊಳಿಸುವುದು, ಎತ್ತುಗಳನ್ನು ಇಳಿಸುವುದು ಇತ್ಯಾದಿ. ಯಾರು ಅನಧಿಕೃತ ಕೃತ್ಯ ಮಾಡುತ್ತಾರೋ, ಅವರನ್ನು ಕೇವಲ ಅಪರಾಧಿಗಳೆಂದು ಪರಿಗಣಿಸಬೇಕು. ಈವರೆಗೆ ದಾಖಲಾಗಿರುವ ಪ್ರಕರಣಗಳ ವಿಶ್ಲೇಷಣೆಯಿಂದ ನೋಡಿದರೆ, ಜಾನುವಾರು ಸಾಗಾಣಿಕೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳು ವಿವಿಧ ಧರ್ಮದವರಾಗಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.
ಆದ್ದರಿಂದ, ಯಾವುದೇ ಸಂಸ್ಥೆ ಅಥವಾ ಸಂಘಟನೆಯು ಆರೋಪಿಯು ಬೇರೆ ಧರ್ಮದವರಾದ್ದರಿಂದ ಮಾತ್ರ ವಿಷಯವನ್ನು ಮುನ್ನೆಲೆಗೆ ತರುತ್ತಿದ್ದರೆ, ಅಥವಾ ತಮ್ಮ ಧರ್ಮದವರಾದ್ದರಿಂದ ಅದನ್ನು ಮುಚ್ಚಿಡುತ್ತಿದ್ದರೆ, ಜನರು ಅವರ ಉದ್ದೇಶಗಳನ್ನು ಪ್ರಶ್ನಿಸಬೇಕು. ಅವರ ಅಜೆಂಡಾಕ್ಕೆ ಬೆಂಬಲ ನೀಡಬಾರದು ಎಂದು ವಿನಂತಿಸಲಾಗಿದೆ. ಈ ಸಂಬಂಧ ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.
Dakshina Kannada SP Arun has issued a clarification regarding rumours that Hindu leader Arun Puthila carried a sword during a police operation to stop illegal cattle transport in Puttur.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm