ಬ್ರೇಕಿಂಗ್ ನ್ಯೂಸ್
23-10-25 10:46 pm Mangalore Correspondent ಕರಾವಳಿ
ಮಂಗಳೂರು, ಅ.23 : ಇತ್ತೀಚೆಗೆ ರೋಗಿಯೊಬ್ಬರು ವೈದ್ಯರ ಅಚಾತುರ್ಯದಿಂದ ಸತ್ತು ಬದುಕಿದ್ದಾರೆಂಬ ಸುದ್ದಿಯ ಬಗ್ಗೆ ದೇರಳಕಟ್ಟೆ ಯೇನಪೋಯ ಆಸ್ಪತ್ರೆಯವರು ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ಬೆಳವಣಿಗೆ ಆಗಿಲ್ಲ. ರಮಾನಾಥ ಗಟ್ಟಿಯವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ನಿಜ. ಅ.19ರಂದು ಕುಟುಂಬಸ್ಥರು ಗಟ್ಟಿಯವರ ಸ್ಥಿತಿ ಗಂಭೀರ ಇರುವಾಗಲೇ ಇಲ್ಲಿಂದ ಡಿಸ್ಚಾರ್ಚ್ ಮಾಡಿಕೊಂಡು ತೆರಳಿದ್ದರು ಎಂದು ತಿಳಿಸಿದ್ದಾರೆ.
ಕುಂಬಳೆಯ ಕಂಚಿಕಟ್ಟೆ ನಿವಾಸಿ ರಮಾನಾಥ ಗಟ್ಟಿ(70) ಅ.14ರಂದು ಕೈಕಾಲುಗಳ ಬಲಹೀನತೆ ಮತ್ತು ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ದಾಖಲಾಗಿದ್ದರು. ರೋಗಿಗೆ ಕೃತಕ ಉಸಿರಾಟದ ವ್ಯವಸ್ಥೆ ಮತ್ತು ಅಗತ್ಯ ಇರುವ ಚಿಕಿತ್ಸೆ ನೀಡಲಾಗಿತ್ತು. ಹೀಗಿರುವಾಗಲೇ ರೋಗಿಯ ಸಂಬಂಧಿಕರು ಅ.19ರಂದು ವೈದ್ಯರ ಸಲಹೆಗೆ ವಿರುದ್ಧವಾಗಿ ಅವರನ್ನು ಕರೆದೊಯ್ಯಲು ಮುಂದಾಗಿದ್ದರು. ವೈದ್ಯರು ಸೀರಿಯಸ್ ಇರುವ ಬಗ್ಗೆ ತಿಳಿಸಿದರೂ ಅದನ್ನು ಲೆಕ್ಕಿಸದೆ ಡಿಸ್ಚಾರ್ಜ್ ಫಾರ್ಮ್ ಗೆ ಸಹಿ ಮಾಡಿ ರೋಗಿಯನ್ನು ಬಾಡಿಗೆ ಆಂಬುಲೆನ್ಸ್ ನಲ್ಲಿ ಕರೆದೊಯ್ದಿದ್ದರು. ಈ ವೇಳೆ, ರೋಗಿಗೆ ಶ್ವಾಸೋಚ್ಛಾಸಕ್ಕಾಗಿ ಆಕ್ಸಿಜನ್ ಮಾಸ್ಕ್ ಹಾಕಲಾಗಿತ್ತು.

ಆದರೆ ರೋಗಿಯನ್ನು ಆಸ್ಪತ್ರೆಯ ಫ್ರೀಜರಿನಲ್ಲಿ ಇಡಲಾಗಿತ್ತು ಮತ್ತು ಅವರು ಆಸ್ಪತ್ರೆಯಲ್ಲಿ ಇದ್ದಾಗಲೇ ಮರಣವನ್ನಪ್ಪಿದ್ದರು ಎನ್ನುವ ಸುದ್ದಿ ಸಂಪೂರ್ಣ ಸುಳ್ಳಾಗಿದ್ದು ವಾಸ್ತವಕ್ಕೆ ದೂರವಾಗಿದೆ. ಆಸ್ಪತ್ರೆಯಿಂದ ಆಕ್ಸಿಜನ್ ಆಂಬುಲೆನ್ಸ್ ನಲ್ಲಿ ಹೋಗುವಾಗ ರೋಗಿ ಜೀವಂತವಾಗಿದ್ದರು. ಇದು ರೋಗಿಯ ಸಂಬಂಧಿಕರಿಗೂ ತಿಳಿದಿತ್ತು. ಆದರೆ ಕೆಲವು ಸುದ್ದಿ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಯನ್ನು ಹರಡಲಾಗಿದ್ದು ಇದರಿಂದ ಯೇನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಗೌರವಕ್ಕೆ ಹಾನಿ ಉಂಟು ಮಾಡಿದೆ.
ಯೇನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಪರಿಶೀಲನೆಗೆ ಒಳಗಾಗದ ತಪ್ಪು ಹಾಗೂ ಭ್ರಮೆ ಉಂಟು ಮಾಡುವ ಮಾಹಿತಿ ಹಂಚುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ಸುಳ್ಳು ಸುದ್ದಿಗಳು ನಮ್ಮ ಸಂಸ್ಥೆಯ ಗೌರವ ಹಾಗೂ ಕಾರ್ಯದಕ್ಷತೆಯನ್ನು ಹಾನಿಗೊಳಿಸುತ್ತದೆ. ಮಾಧ್ಯಮ ಸಂಸ್ಥೆಗಳು ಆರೋಗ್ಯ ಸಂಸ್ಥೆಗಳ ಮೇಲೆ ತಪ್ಪು ಕಲ್ಪನೆ ಮೂಡಿಸುವ ಸುದ್ದಿ ಹರಡುವ ಮೊದಲು ವಾಸ್ತವ ತಿಳಿದುಕೊಳ್ಳಿ ಎಂದು ಮನವಿ ಮಾಡುತ್ತೇವೆ ಎಂದೇ ಯೇನಪೋಯ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟನೆಯಲ್ಲಿ ತಿಳಿಸಿದ್ದಾರೆ.
Yenepoya Hospital in Deralakatte, Mangaluru, has issued a clarification regarding media reports claiming that a patient “died and came back to life” due to medical negligence. The hospital stated that Ramanath Gatti (70) was admitted on October 14 in a serious condition and was discharged by his family on October 19 against doctors’ advice. The patient was alive and on oxygen support when he left the hospital in an ambulance, the statement said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am