ಬ್ರೇಕಿಂಗ್ ನ್ಯೂಸ್
25-10-25 02:36 pm Mangalore Correspondent ಕರಾವಳಿ
ಮಂಗಳೂರು, ಅ.25: ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದ್ದು, ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.
ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಡಿಸೆಂಬರ್ 15ರ ವರೆಗೆ ನಡೆಯಲಿದ್ದು ಈ ವೇಳೆ ಹಲವು ರೈಲುಗಳ ಸೇವೆಯನ್ನು ರದ್ದುಪಡಿಸಲಾಗಿದೆ. ಈ ಕುರಿತು ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ. ಕಾಮಗಾರಿ ನಡುವೆ ಪ್ರತಿ ದಿನ ನಾಲ್ಕು ಗಂಟೆಗಳಿಗೊಮ್ಮೆ ಲೈನ್ ಬ್ಲಾಕ್ ತೆರೆದುಕೊಳ್ಳಲಿದೆ. ಈ ವೇಳೆ ಮಾತ್ರ ರೈಲುಗಳ ಸಂಚಾರ ಇರಲಿದೆ.
ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 01.11.2025 ರ ವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 02.11.2025 ರ ವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈನ್-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರ ವರೆಗೆ ರದ್ದುಗೊಂಡಿತ್ತು. ಈಗ 02.11.2025 ರಿಂದ 14.12.2025 ರ ವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್– ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025ರ ವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 31.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 04.11.2025 ರಿಂದ 16.12.2025 ರವರೆಗೆ ರದ್ದುಗೊಳ್ಳಲಿದೆ.
ಬೆಳಗಿನ ರೈಲು ರದ್ದು ವಿಸ್ತರಣೆ
ಭಾರಿ ಮಳೆಯ ಕಾರಣ ರದ್ದಾಗಿದ್ದ ಮಂಗಳೂರು - ಬೆಂಗಳೂರು ಬೆಳಗಿನ ರೈಲುಗಳ ರದ್ದು ನಿರ್ಧಾರವನ್ನು ಕಳೆದ ತಿಂಗಳು ವಿಸ್ತರಣೆ ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಈ ರೈಲು ಸಂಚಾರವನ್ನು ಡಿಸೆಂಬರ್ 16ರ ವರೆಗೆ ರದ್ದು ಮಾಡಲಾಗಿದೆ.
Train services between Mangaluru and Bengaluru will face disruptions until mid-December due to ongoing railway electrification work between Sakleshpur and Subrahmanya Road. Several trains have been cancelled or rescheduled during this period, according to a press release issued by the South Western Railway.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm