ಬ್ರೇಕಿಂಗ್ ನ್ಯೂಸ್
26-10-25 02:12 pm Mangalore Correspondent ಕರಾವಳಿ
ಪುತ್ತೂರು, ಅ.26 : ಪುತ್ತೂರು ತಾಲೂಕಿನ ಇರ್ದೆ ಬಳಿಯ ಉಪ್ಪಳಿಗೆಯಲ್ಲಿ ನಡೆದ ದೀಪಾವಳಿ ಕಾರ್ಯಕ್ರಮದಲ್ಲಿ ಹಿಂದು- ಮುಸ್ಲಿಂ ಮಹಿಳೆಯರಿಗೆ ಅವಮಾನಿಸಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಈಶ್ವರಿ ಪದ್ಮುಂಜ ಎಂಬವರು ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ಮಹಿಳೆಯರನ್ನು ಅವಮಾನಿಸುವ ಮತ್ತು ವಿಭಿನ್ನ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ರೀತಿಯ ಭಾಷಣ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಭಾಷಣದಲ್ಲಿ ಪ್ರಭಾಕರ ಭಟ್ ಅವರು, ಹಿಂದುಗಳು ಕನಿಷ್ಠ ಮೂವರು ಮಕ್ಕಳನ್ನು ಮಾಡಬೇಕು. ಇಲ್ಲದಿದ್ದರೆ ಮುಂದಕ್ಕೆ ತೊಂದರೆ ಇದೆ. ಮುಸ್ಲಿಂ ಮಹಿಳೆಯರು ನಾಯಿ ತರ ಮಕ್ಕಳನ್ನು ಹೆರುತ್ತಲೇ ಇರುತ್ತಾರೆ. ಇದನ್ನು ನಾವು ಲೆಕ್ಕ ಇಡುವುದಿಲ್ಲ. ಆದರೆ ಈ ರೀತಿ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಧಾರ್ಮಿಕ ಅಸಮಾನತೆಗೆ ಕಾರಣವಾಗಲಿದೆ. ಅಲ್ಲದೆ, ಚಿತ್ತಾಪುರದಲ್ಲಿ ನವೆಂಬರ್ 2ರಂದು ಪಥ ಸಂಚಲನ ನಡೆದೇ ನಡೆಯುತ್ತದೆ. ಯಾರೋ ಹೊಡೆದು ಬಡಿದು ನಿಲ್ಲಿಸೋಕೆ ಆಗುತ್ತಾ. ದೇಶದ ಯಾವುದೇ ಕಡೆ ತೊಂದರೆಯಾದರೆ ಆರೆಸ್ಸೆಸ್ ಸಹಾಯಕ್ಕೆ ಬರೋದು. ಅದು ಕಾಂಗ್ರೆಸಿಗರಿಗೂ ಗೊತ್ತಿದೆ. ಇದನ್ನೆಲ್ಲ ವಿರೋಧಿಸುವ ಖರ್ಗೆ ಕುಟುಂಬವನ್ನು ಹೈದ್ರಾಬಾದಿನ ರಜಾಕಾರ ಮುಸ್ಲಿಮರು ನಾಶ ಮಾಡಿದ್ದನ್ನು ನೆನಪಿಸಿಕೊಳ್ಳಲಿ. ತಿಳಿಯದಿದ್ದರೆ ತಂದೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ಕೇಳಿ ತಿಳಿದುಕೊಳ್ಳಲಿ ಎಂದು ಹೇಳಿದ್ದರು.
An FIR has been registered against senior RSS leader Kalladka Dr. Prabhakar Bhat at the Puttur Rural Police Station following a complaint by Eshwari Padmunja. The complaint alleges that Bhat made derogatory remarks about Hindu and Muslim women and delivered a hate speech during a Deepavali event held at Uppalige near Irde in Puttur taluk.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am