ಬ್ರೇಕಿಂಗ್ ನ್ಯೂಸ್
26-10-25 02:12 pm Mangalore Correspondent ಕರಾವಳಿ
ಪುತ್ತೂರು, ಅ.26 : ಪುತ್ತೂರು ತಾಲೂಕಿನ ಇರ್ದೆ ಬಳಿಯ ಉಪ್ಪಳಿಗೆಯಲ್ಲಿ ನಡೆದ ದೀಪಾವಳಿ ಕಾರ್ಯಕ್ರಮದಲ್ಲಿ ಹಿಂದು- ಮುಸ್ಲಿಂ ಮಹಿಳೆಯರಿಗೆ ಅವಮಾನಿಸಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಈಶ್ವರಿ ಪದ್ಮುಂಜ ಎಂಬವರು ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ಮಹಿಳೆಯರನ್ನು ಅವಮಾನಿಸುವ ಮತ್ತು ವಿಭಿನ್ನ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ರೀತಿಯ ಭಾಷಣ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಭಾಷಣದಲ್ಲಿ ಪ್ರಭಾಕರ ಭಟ್ ಅವರು, ಹಿಂದುಗಳು ಕನಿಷ್ಠ ಮೂವರು ಮಕ್ಕಳನ್ನು ಮಾಡಬೇಕು. ಇಲ್ಲದಿದ್ದರೆ ಮುಂದಕ್ಕೆ ತೊಂದರೆ ಇದೆ. ಮುಸ್ಲಿಂ ಮಹಿಳೆಯರು ನಾಯಿ ತರ ಮಕ್ಕಳನ್ನು ಹೆರುತ್ತಲೇ ಇರುತ್ತಾರೆ. ಇದನ್ನು ನಾವು ಲೆಕ್ಕ ಇಡುವುದಿಲ್ಲ. ಆದರೆ ಈ ರೀತಿ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಧಾರ್ಮಿಕ ಅಸಮಾನತೆಗೆ ಕಾರಣವಾಗಲಿದೆ. ಅಲ್ಲದೆ, ಚಿತ್ತಾಪುರದಲ್ಲಿ ನವೆಂಬರ್ 2ರಂದು ಪಥ ಸಂಚಲನ ನಡೆದೇ ನಡೆಯುತ್ತದೆ. ಯಾರೋ ಹೊಡೆದು ಬಡಿದು ನಿಲ್ಲಿಸೋಕೆ ಆಗುತ್ತಾ. ದೇಶದ ಯಾವುದೇ ಕಡೆ ತೊಂದರೆಯಾದರೆ ಆರೆಸ್ಸೆಸ್ ಸಹಾಯಕ್ಕೆ ಬರೋದು. ಅದು ಕಾಂಗ್ರೆಸಿಗರಿಗೂ ಗೊತ್ತಿದೆ. ಇದನ್ನೆಲ್ಲ ವಿರೋಧಿಸುವ ಖರ್ಗೆ ಕುಟುಂಬವನ್ನು ಹೈದ್ರಾಬಾದಿನ ರಜಾಕಾರ ಮುಸ್ಲಿಮರು ನಾಶ ಮಾಡಿದ್ದನ್ನು ನೆನಪಿಸಿಕೊಳ್ಳಲಿ. ತಿಳಿಯದಿದ್ದರೆ ತಂದೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ಕೇಳಿ ತಿಳಿದುಕೊಳ್ಳಲಿ ಎಂದು ಹೇಳಿದ್ದರು.
An FIR has been registered against senior RSS leader Kalladka Dr. Prabhakar Bhat at the Puttur Rural Police Station following a complaint by Eshwari Padmunja. The complaint alleges that Bhat made derogatory remarks about Hindu and Muslim women and delivered a hate speech during a Deepavali event held at Uppalige near Irde in Puttur taluk.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am