ಬ್ರೇಕಿಂಗ್ ನ್ಯೂಸ್
26-10-25 04:42 pm Mangalore Correspondent ಕರಾವಳಿ
ಮಂಗಳೂರು, ಅ.26 : 11 ದಿನಗಳಿಂದ ಅರಬ್ಬೀ ಸಮುದ್ರ ಮಧ್ಯೆ ನಾಪತ್ತೆಯಾಗಿದ್ದ ಗೋವಾ ಮೂಲದ 31 ಮೀನುಗಾರರಿದ್ದ ಮೀನುಗಾರಿಕಾ ಬೋಟ್ ಒಂದನ್ನು ಭಾರತೀಯ ಕೋಸ್ಟ್ ಗಾರ್ಡ್ ಪಡೆ ಪತ್ತೆಹಚ್ಚಿದ್ದು, ಅವರನ್ನು ರಕ್ಷಿಸಿ ಸುರಕ್ಷಿತವಾಗಿ ಹೊನ್ನಾವರ ಬಂದರಿಗೆ ಕರೆತಂದಿದೆ.
ಮಂಗಳೂರು ಬಂದರಿನಿಂದ ನೂರು ನಾಟಿಕಲ್ ಮೈಲು ದೂರದಲ್ಲಿ ಗೋವಾ ಮೂಲದ ಬೋಟ್ ನಾಪತ್ತೆಯಾಗಿದ್ದಾಗಿ ಅ.24ರಂದು ಮಂಗಳೂರಿನ ಕೋಸ್ಟ್ ಗಾರ್ಡ್ ಪ್ರಧಾನ ಕಚೇರಿಗೆ ಮಾಹಿತಿ ಬಂದಿತ್ತು. ಇದರಂತೆ, ಐಸಿಜಿಎಸ್ ಕಸ್ತೂರ್ಬಾ ಗಾಂಧಿ ಹಡಗಿನಲ್ಲಿ ಕಾರ್ಯಾಚರಣೆ ನಡೆಸಿದ್ದು ಕೊನೆಯ ಬಾರಿಗೆ ಮಿಸ್ಸಿಂಗ್ ಆಗಿದೆ ಎನ್ನಲಾದ ಜಾಗಕ್ಕೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿತ್ತು. ಆದರೆ ಅಲ್ಲಿ ಬೋಟ್ ಪತ್ತೆಯಾಗದ ಕಾರಣ ಹೆಲಿಕಾಪ್ಟರ್ ಸಹಾಯ ಕೇಳಲಾಗಿತ್ತು.




ಆನಂತರ, ಕೊಚ್ಚಿಯಿಂದ ಬಂದಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರ ಮೇಲ್ಭಾಗದಿಂದ ಹಾರಾಡುತ್ತಾ ಮೀನುಗಾರಿಕಾ ಬೋಟಿನ ಬಗ್ಗೆ ಶೋಧ ನಡೆಸಿತ್ತು. ಮಳೆಯಿಂದಾಗಿ ವಾತಾವರಣ ಹದಗೆಟ್ಟಿದ್ದರೂ ಹಡಗಿನ ಜೊತೆ ಸೇರಿ ಹೆಲಿಕಾಪ್ಟರ್ ಕಾರ್ಯಾಚರಣೆ ನಡೆಸಿದೆ. ಅ.25ರಂದು ಡೋರ್ನಿಯರ್ ಏರ್ ಕ್ರಾಫ್ಟ್ ನಾಪತ್ತೆಯಾಗಿದ್ದ ಮೀನುಗಾರಿಕಾ ಬೋಟನ್ನು ಸಮುದ್ರ ನಡುವೆ ಪತ್ತೆಹಚ್ಚಿದ್ದು ಕೂಡಲೇ ಕೋಸ್ಟ್ ಗಾರ್ಡ್ ಹಡಗಿಗೆ ಮಾಹಿತಿ ರವಾನಿಸಿತ್ತು.
ಐಸಿಜಿಎಸ್ ಕಸ್ತೂರ್ಬಾ ಗಾಂಧಿ ಹಡಗು ಕೂಡಲೇ ಆ ಸ್ಥಳಕ್ಕೆ ಧಾವಿಸಿದ್ದು ಬೋಟಿನಲ್ಲಿದ್ದ ಎಲ್ಲ ಮೀನುಗಾರರನ್ನು ರಕ್ಷಣೆ ಮಾಡಿದ್ದಲ್ಲದೆ, ಅವರಿಗೆ ಆಹಾರ ನೀರು ಪೂರೈಸಿ ಅಪಾಯದಿಂದ ಪಾರು ಮಾಡಿದೆ. ಸಂತ ಏಂಟನಿ ಹೆಸರಿನ ಗೋವಾ ಮೂಲದ ಮೀನುಗಾರಿಕಾ ಬೋಟನ್ನು ಬಳಿಕ ಹಗ್ಗ ಕಟ್ಟಿ ಹೊನ್ನಾವರ ಬಂದರಿಗೆ ಎಳೆದು ತರಲಾಯಿತು. ಅದರಲ್ಲಿದ್ದ ಎಲ್ಲ 31 ಮೀನುಗಾರರನ್ನೂ ರಕ್ಷಣೆ ಮಾಡಲಾಗಿದೆ.
ಹವಾವಾನ ವೈಪರೀತ್ಯದ ನಡುವೆಯೂ ಕೋಸ್ಟ್ ಗಾರ್ಡ್ ಪಡೆಯು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಯಶಸ್ವೀ ಕಾರ್ಯಾಚರಣೆ ನಡೆಸಿದ್ದು ಸಮುದ್ರ ಮಧ್ಯೆ ಸಾವಿನ ದವಡೆಯಲ್ಲಿ ಸಿಕ್ಕಿಬಿದ್ದು ಒದ್ದಾಡಿದ್ದ ಮೀನುಗಾರರನ್ನು ರಕ್ಷಿಸಿ ಕರೆತಂದಿದೆ. ಮೀನುಗಾರಿಕಾ ಬೋಟಿನಲ್ಲಿ ತಾಂತ್ರಿಕ ತೊಂದರೆ ಉಂಟಾಗಿ ಗಾಳಿ, ಮಳೆಯ ನಡುವೆ ಮುಂದೆ ಚಲಿಸಲಾಗದೆ ಸಿಕ್ಕಿಬಿದ್ದಿತ್ತು.
The Indian Coast Guard successfully rescued 31 fishermen from a Goa-based fishing boat that had been missing in the Arabian Sea for 11 days. After receiving information on October 24 that the vessel was lost about 100
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am